Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒತ್ತಡ ನಿವಾರಣೆಗಾಗಿ ಸಾಹಿತ್ಯ...

ಒತ್ತಡ ನಿವಾರಣೆಗಾಗಿ ಸಾಹಿತ್ಯ ರಚಿಸುತ್ತೇನೆ: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ

2019ರ ಅನುಪಮಾ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ2 Jun 2019 8:37 PM IST
share
ಒತ್ತಡ ನಿವಾರಣೆಗಾಗಿ ಸಾಹಿತ್ಯ ರಚಿಸುತ್ತೇನೆ: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ

ಬೆಂಗಳೂರು, ಜೂ.2: ನಾನು ಹಣ ಹಾಗೂ ಜನಪ್ರಿಯ ಆಗುವುದಕ್ಕಾಗಿ ಬರೆಯುವುದಿಲ್ಲ. ನನ್ನೊಳಗಿನ ಒತ್ತಡಗಳನ್ನು ನಿವಾರಣೆಗಾಗಿ ಸಾಹಿತ್ಯ ರಚಿಸುತ್ತೇನೆಂದು ಹಿರಿಯ ಸಾಹಿತಿ ಹಾಗೂ ಇನ್ಫೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಸುಧಾ ಮೂರ್ತಿ ತಿಳಿಸಿದರು.

ರವಿವಾರ ಕರ್ನಾಟಕ ಲೇಖಕಿಯರ ಸಂಘ ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2019ರ ಅನುಪಮಾ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಬರೆಯಲು ಕೂತಾಗ ನನ್ನ ಮನಸು ನಿರಾಳವಾಗುತ್ತದೆ. ಸಮಾಜದಲ್ಲಿ ನಡೆಯುವ ಘಟನೆಗಳೆ ನನ್ನ ಬರವಣಿಗೆಗೆ ವಸ್ತು ವಿಷಯಗಳಾಗಿರುತ್ತವೆಂದು ತಿಳಿಸಿದರು.

ಇನ್ಫೋಸಿಸ್ ಪ್ರತಿಷ್ಠಾನ ಸ್ಥಾಪಿಸುವುದಕ್ಕೂ ಮೊದಲು ನನ್ನ ಅನುಭವ ಸೀಮಿತವಾಗಿತ್ತು. ಆದರೆ, ಪ್ರತಿಷ್ಠಾನ ಪ್ರಾರಂಭಗೊಂಡ ನಂತರ ನಾನು ಸಿನೆಮಾ ತಾರೆಯರು, ರಾಜಕಾರಣಿಗಳು, ದೇವದಾಸಿಯರು, ದೀನ ದಲಿತರು, ಅನಾರೋಗ್ಯ ಪೀಡಿತರನ್ನು ತೀರ ಹತ್ತಿರದಿಂದ ನೋಡಲು ಸಾಧ್ಯವಾಯಿತು. ಇವರೊಂದಿಗೆ ಬೆರೆತು ಕಂಡುಂಡ ಅನುಭವಗಳೆ ಬರವಣಿಗೆಗೆ ಪ್ರೇರಣೆ ನೀಡಿದವು ಎಂದು ಅವರು ಹೇಳಿದರು.

ನಾನು ಕನ್ನಡ ಹಾಗೂ ಇಂಗ್ಲಿಷ್ ಎರಡಲ್ಲೂ ಸಾಹಿತ್ಯ ರಚಿಸುತ್ತೇನೆ. ಆದರೆ, ನನ್ನ ಹೃದಯ ಭಾಷೆ ಕನ್ನಡ. ನನ್ನ ಆಲೋಚನೆಗಳೆಲ್ಲೂ ಕನ್ನಡದಲ್ಲೇ ರೂಪಗೊಳ್ಳುತ್ತವೆ. ಹೀಗಾಗಿ ಕನ್ನಡದಲ್ಲಿ ಬರೆದ ನಂತರ ಅದನ್ನೇ ಇಂಗ್ಲಿಷ್ ಅನುವಾದಿಸುತ್ತೇನೆ. ಇಂಗ್ಲಿಷ್‌ನಲ್ಲಿ ಕೃತಿ ಬಿಡುಗಡೆಯಾದ ಕೇವಲ ಮೂರು ತಿಂಗಳಿನಲ್ಲಿಯೆ ದೇಶದ ಇತರೆ 13 ಭಾಷೆಗಳಿಗೆ ಅನುವಾದವಾಗುತ್ತವೆ. ಇದರಿಂದ ನನ್ನ ಓದುಗರ ಸಂಖ್ಯೆಯು ಹೆಚ್ಚಿದೆ ಎಂದು ಅವರು ಹೇಳಿದರು.

ನಾಡಿನ ಹಿರಿಯ ಲೇಖಕಿಯರಾಗಿ ಮಹಿಳಾ ಸಮುದಾಯದ ಅಸ್ಮಿತೆಯನ್ನು ಎತ್ತಿ ಹಿಡಿದ ಅನುಪಮಾ, ತ್ರಿವೇಣಿ, ಎಂ.ಕೆ.ಇಂದಿರಾ ಸೇರಿದಂತೆ ಹಲವು ಲೇಖಕಿಯರು ನನ್ನ ಬರವಣಿಗೆ ಹಾಗೂ ಆಲೋಚನೆಗಳಿಗೆ ಸ್ಫೂರ್ತಿಯಾಗಿದ್ದಾರೆ. ಆಗಿನ ಕಾಲದಲ್ಲಿ ಯಾವುದೆ ಸೌಲಭ್ಯಗಳು ಇಲ್ಲದಿದ್ದರೂ ಹಲವು ಸವಾಲುಗಳನ್ನು ಎದುರಿಸಿ ಕೃತಿಗಳನ್ನು ರಚಿಸುವ ಮೂಲಕ ಈಗಿನ ತಲೆಮಾರಿಗೆ ಮಾದರಿಯಾಗಿದ್ದಾರೆ. ಹೀಗಾಗಿ ಅನುಪಮಾ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುತ್ತಿರುವುದು ಹೆಮ್ಮೆಯ ವಿಷಯವೆಂದು ಅವರು ಹೇಳಿದರು.

ಕವಯತ್ರಿ ಡಾ.ಟಿ.ಸಿ.ಪೂರ್ಣಿಮಾ ಮಾತನಾಡಿ, ಹಿರಿಯ ಸಾಹಿತಿ ಅನುಪಮಾ ಸಾಹಿತ್ಯ ಆಶಯಗಳಿಗೂ ಸುಧಾಮೂರ್ತಿರವರ ಸಾಹಿತ್ಯ ಚಿಂತನೆಗಳ ನಡುವೆ ಹತ್ತಿರದ ಸಾಮ್ಯತೆ ಇದೆ. ಹೀಗಾಗಿ ಅವರನ್ನು ಅನುಪಮಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಕ್ಷೇತ್ರ ಲೇಖಕಿಯರನ್ನು ಮುಖ್ಯಧಾರೆಯ ಸಾಹಿತಿಗಳಾಗಿ ಗುರುತಿಸಲು ಈಗಲೂ ಹಿಂದೇಟು ಹಾಕುತ್ತಿದೆ. ಹಾಗೆ ನೋಡಿದರೆ ಲೇಖಕಿ ಸುಧಾಮೂರ್ತಿರವರ ಸಾಹಿತ್ಯ ಯಾವುದಕ್ಕೂ ಕಡಿಮೆ ಇಲ್ಲ. ಅವರ ಕೃತಿಗಳು ದೇಶ, ವಿದೇಶಿ ಭಾಷೆಗಳಿಗೆ ಅನುವಾದಗೊಂಡು ಲಕ್ಷಾಂತರ ಪ್ರತಿಗಳು ಮಾರಾಟವಾಗಿವೆ. ಆದರೆ, ಕನ್ನಡ ಸಾಹಿತ್ಯ ಕ್ಷೇತ್ರ ಮಾತ್ರ ಅವರನ್ನು ಒಬ್ಬ ಸಾಹಿತಿಯಾಗಿ ಗುರುತಿಸುವಲ್ಲಿ ವಿಫಲವಾಗಿದೆ ಎಂದು ಅವರು ವಿಷಾದಿಸಿದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತವಾಗಿರುವ ನಾಡಿನ ಶ್ರೇಷ್ಟ ಸಾಹಿತಿ ಡಾ.ಸುಧಾಮೂರ್ತಿ ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಚಿರಪರಿಚಿತ ಹೆಸರು. ಅವರು ಕನ್ನಡ ಹಾಗೂ ಕನ್ನಡ ಭಾಷೆಯಲ್ಲಿ ಸಾಹಿತ್ಯ ಕೃಷಿಯಲ್ಲಿ ತೊಡಗಿ ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಸುಧಾಮೂರ್ತಿರವರ ಕೃತಿಗಳು ದೇಶದ ಎಲ್ಲ ಪ್ರಾದೇಶಿಕ ಭಾಷೆಗಳಿಗೂ ಅನುವಾದಗೊಂಡಿವೆ. ಇಲ್ಲಿಯವರಿಗೂ ಸುಮಾರು 26ಲಕ್ಷ ಪುಸ್ತಕಗಳು ದೇಶದಾದ್ಯಂತ ಮಾರಾಟವಾಗಿವೆ. ಅಂತಹ ಮೇರು ಸಾಹಿತಿ ಸುಧಾಮೂರ್ತಿಗೆ ಅನುಪಮಾ ಪ್ರಶಸ್ತಿ ಪ್ರದಾನ ಮಾಡುತ್ತಿರುವುದಕ್ಕೆ ಕರ್ನಾಟಕ ಲೇಖಕಿಯರ ಸಂಘ ಹೆಮ್ಮೆ ಪಡುತ್ತದೆ ಎಂದು ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಲೇಖಕಿಯರ ಸಂಘದ ಕಾರ್ಯದರ್ಶಿ ನಾಗರತ್ನ ಚಂದ್ರಶೇಖರ, ಸಹ ಕಾರ್ಯದರ್ಶಿ ಜಿ.ವಿ.ನಿರ್ಮಲಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X