Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಪಿನಿಂದ ಥಳಿಸಿ ಹತ್ಯೆ ವಿರುದ್ಧ 5,000...

ಗುಂಪಿನಿಂದ ಥಳಿಸಿ ಹತ್ಯೆ ವಿರುದ್ಧ 5,000 ಜನರಿಂದ ಪ್ರತಿಭಟನೆ

ಹೋರಿಯನ್ನು ಕೊಂದ ಆರೋಪದಲ್ಲಿ ಆದಿವಾಸಿಯನ್ನು ಹತ್ಯೆಗೈದಿದ್ದ ದುಷ್ಕರ್ಮಿಗಳು

ವಾರ್ತಾಭಾರತಿವಾರ್ತಾಭಾರತಿ2 Jun 2019 9:08 PM IST
share
ಗುಂಪಿನಿಂದ ಥಳಿಸಿ ಹತ್ಯೆ ವಿರುದ್ಧ 5,000 ಜನರಿಂದ ಪ್ರತಿಭಟನೆ

ರಾಂಚಿ,ಜೂ.2: ಜಾರ್ಖಂಡ್‌ನ ದುಮ್ರಿಯಲ್ಲಿ ಇತ್ತೀಚಿಗೆ ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣಗಳನ್ನು ವಿರೋಧಿಸಿ ನಡೆದ ಅತ್ಯಂತ ದೊಡ್ಡ ಪ್ರತಿಭಟನೆಯಲ್ಲಿ 5,000ಕ್ಕೂ ಅಧಿಕ ಜನರು ಭಾಗಿಯಾಗಿದ್ದರು. ಎ.10ರಂದು ಜೈರಾಗಿ ಗ್ರಾಮದಲ್ಲಿ ಹೋರಿಯೊಂದನ್ನು ಕೊಂದ ಆರೋಪದಲ್ಲಿ ಗುಂಪೊಂದು ನೆರೆಯ,ಗುಮ್ಲಾದ ದುಮ್ರಿ ಬ್ಲಾಕ್‌ನ ಜುರ್ಮು ಗ್ರಾಮದ ಆದಿವಾಸಿ ಪ್ರಕಾಶ್ ಲಾಕ್ರಾ ಎಂಬಾತನನ್ನು ಥಳಿಸಿ ಹತ್ಯೆಗೈದಿತ್ತು. ಪೀರ್ ಕೆರ್ಕೆಟ್ಟಾ,ಬೆಲಾರಿಯಸ್ ಮಿಂಗೆ ಮತ್ತು ಜೆನೆರಿಯಸ್ ಮಿಂಝ್ ಎನ್ನುವವರು ಗುಂಪಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆಯ ಬಳಿಕ ಸ್ಥಳೀಯ ಪೊಲೀಸರ ಪ್ರತಿಕ್ರಿಯೆಯ ಬಗ್ಗೆಯೂ ಪ್ರಶ್ನೆಗಳೆದ್ದಿವೆ.

ಗುಮ್ಲಾ,ರಾಂಚಿಯ ಜನರೊಂದಿಗೆ ದೂರದ ಲಾತೇಹಾರ್‌ನಿಂದಲೂ ಜನರು ಪ್ರತಿಭಟನೆಗೆ ಆಗಮಿಸಿದ್ದರು. ಲಾತೇಹಾರ್‌ನಲ್ಲಿ 2016,ಮಾರ್ಚ್‌ನಲ್ಲಿ ಅಕ್ರಮ ದನ ಸಾಗಣೆಯ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಥಳಿಸಿ ಕೊಂದಿದ್ದ ಗುಂಪು ಬಳಿಕ ಶವಗಳನ್ನು ಮರಕ್ಕೆ ನೇತು ಹಾಕಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜನಸಂಘರ್ಷ ಸಮಿತಿಯ ನಾಯಕರು ಮತ್ತು ರಾಜ್ಯದ ಇತರ ಮಾನವ ಹಕ್ಕು ಹೋರಾಟಗಾರರು,ಜುರ್ಮುದಲ್ಲಿ ಸತ್ತ ಹೋರಿಯ ಮಾಲಿಕ ಅದರ ಚರ್ಮವನ್ನು ಸುಲಿಯುವಂತೆ ಲಾಕ್ರಾ ಮತ್ತು ಇತರ ಗ್ರಾಮಸ್ಥರಿಗೆ ಸೂಚಿಸಿದ್ದ. ಅವರು ಆ ಕಾಯವನ್ನು ಮಾಡುತ್ತಿದ್ದಾಗ 35-40 ಜನರ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಮೂರು ಗಂಟೆಗಳ ಕಾಲ ಅವರನ್ನು ಬರ್ಬರವಾಗಿ ಥಳಿಸಿದ್ದ ಗುಂಪು ಮಧ್ಯರಾತ್ರಿಯ ವೇಳೆಗೆ ದುಮ್ರಿ ಪೊಲೀಸ್ ಠಾಣೆಯೆದುರು ಎಸೆದು ಹೋಗಿತ್ತು. ಪೊಲೀಸರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ಬದಲು ಬಯಲಿನಲ್ಲಿಯೇ ಅವರನ್ನು ನಾಲ್ಕು ಗಂಟೆಗಳ ಕಾಲ ಕಾಯಿಸಿದ್ದರು.ಕೊನೆೆಗೂ ಆಸ್ಪತ್ರೆಗೆ ಸಾಗಿಸಿದಾಗ ಲಾಕ್ರಾ ಮೃತಪಟ್ಟಿದ್ದ ಎಂದು ಆರೋಪಿಸಿದರು.

ಕಳೆದ ನಾಲ್ಕು ವರ್ಷಗಳಲ್ಲಿ ಜಾರ್ಖಂಡ್‌ನಲ್ಲಿ ಒಂಭತ್ತು ಮುಸ್ಲಿಮರು ಮತ್ತು ಇಬ್ಬರು ಆದಿವಾಸಿಗಳು ಸೇರಿದಂತೆ 11 ಜನರು ಗುಂಪು ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ. ಜುರ್ಮುದಲ್ಲಿ ನಡೆದಿರುವುದು ನೇರ ಕೊಲೆಯಾಗಿದೆ ಮತ್ತು ಇದು ಪೊಲೀಸರು ಮತ್ತು ರಾಜ್ಯಸರಕಾರದ ಕೃಪಾಕಟಾಕ್ಷದಿಂದಲೇ ನಡೆದಿದೆ. ಇಂತಹ ಘಟನೆಗಳು ಜಾರ್ಖಂಡ್ ಮಾತ್ರವಲ್ಲ,ದೇಶದ ಇತರ ಭಾಗಗಳಲ್ಲಿಯೂ ನಡೆಯುತ್ತಿವೆ. ಇದಕ್ಕೆ ಬಹುಶಃ ಹೆಚ್ಚುತ್ತಿರುವ ಹಿಂದುತ್ವ ಸಿದ್ಧಾಂತದ ಕಾವು ಕಾರಣವಾಗಿದೆ ಎಂದರು.

ಜುರ್ಮುದ ಆದಿವಾಸಿಗಳ ವಿರುದ್ಧ ಗೋಹತ್ಯೆಗಾಗಿ ದಾಖಲಾಗಿರುವ ಸುಳ್ಳು ಎಫ್‌ಐಆರ್ ರದ್ದುಗೊಳಿಸಬೇಕು,ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಮೃತ ಲಾಕ್ರಾನ ಕುಟುಂಬಕ್ಕೆ 15 ಲ.ರೂ.ಮತ್ತು ಗಾಯಾಳುಗಳಿಗೆ 10 ಲ.ರೂ.ಪರಿಹಾರ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಪ್ರತಿಭಟನಾಕಾರರು ಸರಕಾರದ ಮುಂದಿರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X