Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಶಾಸಕ ಬಸವರಾಜ್ ಜತೆ ಕುಮಾರಸ್ವಾಮಿ...

ಬಿಜೆಪಿ ಶಾಸಕ ಬಸವರಾಜ್ ಜತೆ ಕುಮಾರಸ್ವಾಮಿ ಸಮಾಲೋಚನೆ: ಫೋಟೋ ವೈರಲ್

ವಾರ್ತಾಭಾರತಿವಾರ್ತಾಭಾರತಿ2 Jun 2019 9:25 PM IST
share
ಬಿಜೆಪಿ ಶಾಸಕ ಬಸವರಾಜ್ ಜತೆ ಕುಮಾರಸ್ವಾಮಿ ಸಮಾಲೋಚನೆ: ಫೋಟೋ ವೈರಲ್

ಬೆಂಗಳೂರು, ಜೂ. 2: ಮೈತ್ರಿ ಸರಕಾರ ಅಸ್ಥಿರಗೊಳಿಸಲು ಆಪರೇಷನ್ ಕಮಲದ ಮೊರೆ ಹೊಕ್ಕ ಬಿಜೆಪಿಗೆ ತಿರುಗೇಟು ನೀಡಲು ಸಿಎಂ ಕುಮಾರಸ್ವಾಮಿ ಮುಂದಾಗಿದ್ದು, ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಅವರೊಂದಿಗೆ ಚರ್ಚೆ ನಡೆಸಿರುವುದು ರಾಜಕೀಯ ಕುತೂಹಲ ಸೃಷ್ಟಿಸಿದೆ.

ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಅವರೊಂದಿಗೆ ಶಾಸಕ ಬಸವರಾಜ್ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.

ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಆಪರೇಷನ್ ಕಮಲದ ಮೂಲಕ ತಮ್ಮತ್ತ ಸೆಳೆದು ಮೈತ್ರಿ ಸರಕಾರಕ್ಕೆ ಅಸ್ಥಿರಕ್ಕೆ ಬಿಜೆಪಿ ನಾಯಕರು ತೆರೆ ಮರೆಯಲ್ಲೆ ಕಸರತ್ತು ನಡೆಸಿದ್ದಾರೆ. ಆದರೆ, ಇದಕ್ಕೆ ತಿರುಗೇಟು ನೀಡಲು ಮೈತ್ರಿ ಮುಖಂಡರು ಮುಂದಾಗಿದ್ದಾರೆಂಬುದು ಇದೀಗ ಶಾಸಕ ಬಸವರಾಜ್ ಮತ್ತು ಸಿಎಂ ಭೇಟಿಯಿಂದ ಬಹಿರಂಗವಾಗಿದೆ.

ಈ ಮಧ್ಯೆ ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಲು ಮೈತ್ರಿ ಮುಖಂಡರು ನಿರ್ಧರಿಸಿದ್ದು, ಅತೃಪ್ತ ಶಾಸಕರಿಗೂ ಸಂಪುಟದಲ್ಲಿ ಸ್ಥಾನ ನೀಡುವ ಸಂಬಂಧ ಚರ್ಚೆ ನಡೆಸಿದ್ದಾರೆ. ಇದರ ಜತೆಗೆ ಬಿಜೆಪಿಯ ನಾಲ್ಕೈದು ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆಪರೇಷನೂ ಇಲ್ಲ, ಡೆಲಿವೆರಿನೂ ಇಲ್ಲ: ‘ನಾನು ಆಪರೇಷನ್‌ಗೂ ಒಳಗಾಗಿಲ್ಲ, ಯಾವುದೇ ಡೆಲಿವೆರಿನೂ ಇಲ್ಲ. ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂಬುದು ಅಕ್ಷರಶಃ ಸುಳ್ಳು ಸುದ್ಧಿ’ ಎಂದು ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಸ್ಪಷ್ಟನೆ ನೀಡಿದ್ದಾರೆ.

2018ರ ಆಗಸ್ಟ್‌ನಲ್ಲಿ ನಾನು ಮತ್ತು ಸಚಿವ ವೆಂಕಟರಾವ್ ನಾಡಗೌಡರ ಜೊತೆಗೆ ಹೋಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ಫೋಟೋ ಇದೀಗ ವೈರಲ್ ಆಗಿದೆ. ಕ್ಷೇತ್ರಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ಸಂಬಂಧ ಸಿಎಂ ಭೇಟಿ ಮಾಡಿದ್ದೆ ಎಂದು ಸ್ಪಷ್ಟಪಡಿಸಿದರು.

ಸ್ನೇಹಿತನ ಜೊತೆ ಮೈಸೂರಿಗೆ ಹೋಗಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಎರಡು ದಿನದ ಹಿಂದೆ ಬೆಂಗಳೂರಿಗೆ ಬಂದು ಕ್ಷೇತ್ರದ ಅಭಿವೃದ್ಧಿಯ ಕೆಲಸಗಳಿಗೆ ಸಂಬಂಧಿಸಿದಂತೆ ಕಚೇರಿಯಿಂದ ಕಚೇರಿಗೆ ತಿರುಗಾಡುತ್ತಿದ್ದೇನೆ. ಯಾವ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿದರೂ ನಾನು ಬಿಜೆಪಿ ಬಿಡುವುದಿಲ್ಲ ಎಂದರು.

ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಸಿಎಂ, ಸಚಿವರನ್ನು ಭೇಟಿಯಾಗುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಕ್ಷೇತ್ರದ ವಿದ್ಯುತ್ ಪೂರೈಕೆ ಮತ್ತು ಅನುದಾನ ನೀಡುವ ಸಂಬಂಧ ಸಿಎಂಗೆ ಮನವಿ ಮಾಡಿದ್ದೇನೆ ಎಂದ ಅವರು, ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X