ರೋಗಿಗಳಿಗೆ ಉತ್ತಮ ಚಿಕಿತ್ಸೆ ಅತಿಮುಖ್ಯ: ಉಷಾ ಬಂಢಾರಿ
ಬೆಂಗಳೂರು, ಜೂ.2: ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮ ಪಡಿಸಿಕೊಳ್ಳುವುದು ಅತಿ ಮುಖ್ಯ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನ ಕುಲ ಸಚಿವ ಉಷಾ ಬಂಢಾರಿ ತಿಳಿಸಿದ್ದಾರೆ.
ರವಿವಾರ ನಗರದ ಯಲಹಂಕದ ಆದಿತ್ಯ ನರ್ಸಿಂಗ್ ಕಾಲೇಜಿನಲ್ಲಿ ನಡೆದ ತುರ್ತು ಚಿಕಿತ್ಸಾ ರೀತಿ ನೀತಿಯನ್ನು ಉತ್ತಮ ಪಡಿಸಿಕೊಳ್ಳುವ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯಲ್ಲಿ ನರ್ಸಿಂಗ್ ಪಾತ್ರ ಅತಿಮುಖ್ಯವಾಗಿದೆ ಎಂದರು.
ತುರ್ತು ಸಂದಂರ್ಭಗಳಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ, ಔಷಧಿ ಹಾಗೂ ಶಶ್ರೂಷೆಯು ಪರಿಣಾಮಕಾರಿ ಅದಷ್ಟು ರೋಗಿಗಳು ಶೀಘ್ರ ಗುಣಮುಖರಾಗಲು ಸಾಧ್ಯವಾಗಲಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಸರಿಯಾದ ಆರೈಕೆ ಮಾಡಲು ನರ್ಸ್ಗಳು ಶ್ರಮಿಸಬೇಕು ರೋಗಿಗಳಿಗೆ ಸೂಕ್ತ ಸಮಯಕ್ಕೆ ಸರಿಯಾದ ಔಷಧಿಗಳು ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶೋಭಾರಾಮಕೃಷ್ಣ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರೋಗಿಗಳಿಗೆ ನೀಡಬೇಕಾದ ಆರೈಕೆ ಚಿಕಿತ್ಸೆಯ ಬಗ್ಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳ ಜ್ಞಾನದ ಬೆಳವಣಿಗೆಗೂ ಆದ್ಯತೆ ನೀಡಲಾಗುತ್ತದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಆಸ್ಪತ್ರೆಗಳಿಂದ ಉದ್ಯೋಗಾವಕಾಶ ದೊರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ಕಾಲೇಜ್ ಆಫ್ ನರ್ಸಿಂಗ್ನ ಪ್ರಿನ್ಸಿಪಾಲ್ ಭಾರತಿ, ಸಂಪನ್ಮೂಲ ವ್ಯಕ್ತಿಗಳಾಗಿ ಸೇಂಟ್ಜಾನ್ ಆಸ್ಪತ್ರೆಯ ಡಾ.ಬಿಂದು ಮ್ಯಾಥ್ಯೂ, ಆಸ್ಟರ್ ಆಸ್ಪತ್ರೆಯ ಮುಖ್ಯ ಶುಶ್ರೂಷಾಧಿಕಾರಿ ಸುನೀತಾ ಡೋಮಿಂ ಗೋ, ಬಾಪ್ಟಿಸ್ಟ್ ಆಸ್ಪತ್ರೆಯ ಡಾ.ಅಣ್ಣೀಯಮ್ಮ ಜೋಸೆಫ್, ಡಾ.ಮೆಥಿಲ್ದಾ ನ್ಸೆಂಟ್ ಮಕ್ಕಳ ಆರೋಗ್ಯ ಸೇವೆಗಳ ಮುಖ್ಯಾಧಿಕಾರಿ ಮೋನಿಕಾ ಹಾಗೂ ನಗರದ 11 ನರ್ಸಿಂಗ್ ಕಾಲೇಜುಗಳ 525 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.







