Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಪೌರತ್ವ ಪಟ್ಟಿ: ದೂರು...

ಅಸ್ಸಾಂ ಪೌರತ್ವ ಪಟ್ಟಿ: ದೂರು ಇತ್ಯರ್ಥಕ್ಕೆ 1000 ನ್ಯಾಯಾಧಿಕರಣ ಸ್ಥಾಪನೆಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ2 Jun 2019 10:48 PM IST
share
ಅಸ್ಸಾಂ ಪೌರತ್ವ ಪಟ್ಟಿ: ದೂರು ಇತ್ಯರ್ಥಕ್ಕೆ 1000 ನ್ಯಾಯಾಧಿಕರಣ ಸ್ಥಾಪನೆಗೆ ನಿರ್ಧಾರ

ಹೊಸದಿಲ್ಲಿ, ಜೂ.2: ಅಸ್ಸಾಂನಲ್ಲಿ ಪೌರತ್ವ ಪಟ್ಟಿಯಲ್ಲಿ ಹೆಸರು ಬಿಟ್ಟುಹೋದ ಬಗ್ಗೆ ದೂರುಗಳನ್ನು ಇತ್ಯರ್ಥಗೊಳಿಸಲು ಅನುಕೂಲವಾಗುವಂತೆ ಅಸ್ಸಾಂನಲ್ಲಿ 1000 ವಿದೇಶಿಯರ ನ್ಯಾಯಾಧಿಕರಣವನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗರಿಕರ ರಾಷ್ಟ್ರೀಯ ನೋಂದಣಿ(ಎನ್‌ಆರ್‌ಸಿ)ಯ ಅಂತಿಮ ಪಟ್ಟಿಯನ್ನು ಜುಲೈ 31ರ ಒಳಗೆ ಪ್ರಕಟಿಸಲಾಗುವುದು. ಎನ್‌ಆರ್‌ಸಿಯಲ್ಲಿ ಹೆಸರು ಬಿಟ್ಟು ಹೋಗಿರುವ ಪೌರರು ರಾಜ್ಯಾದ್ಯಂತ ಸ್ಥಾಪನೆಯಾಗುವ ವಿದೇಶಿಯರ ನ್ಯಾಯಾಧಿಕರಣವನ್ನು ಸಂಪರ್ಕಿಸಿ ತಮ್ಮ ಅಹವಾಲನ್ನು ಮಂಡಿಸಬಹುದು. ರಾಜ್ಯದಲ್ಲಿ 1000 ಹೆಚ್ಚುವರಿ ನ್ಯಾಯಾಧಿಕರಣ ಸ್ಥಾಪಿಸುವ ಮತ್ತು ವಿದೇಶಿಯರ ಇ- ನ್ಯಾಯಾಧಿಕರಣ ಸ್ಥಾಪನೆಯ ಬಗ್ಗೆ ಚರ್ಚಿಸಲು ಗೃಹ ಸಚಿವಾಲಯದ ಕಾರ್ಯದರ್ಶಿ (ಗಡಿ ನಿರ್ವಹಣೆ) ಆರ್‌ಬಿ ಶರ್ಮ ನೇತೃತ್ವದಲ್ಲಿ ಇತ್ತೀಚೆಗೆ ಸಭೆ ನಡೆಸಿ ಚರ್ಚಿಸಲಾಗಿತ್ತು.

ಅಲ್ಲದೆ ಅಕ್ರಮ ವಲಸಿಗರೆಂದು ಘೋಷಿಸಲ್ಪಟ್ಟಿರುವ ಜನರ ಅಹವಾಲಿನ ಬಗ್ಗೆ ಗಮನ ಹರಿಸಲು ವಿದೇಶಿಯರ ಇ- ನ್ಯಾಯಾಧಿಕರಣ ಸ್ಥಾಪನೆಗೆ ರಾಜ್ಯ ಸರಕಾರಕ್ಕೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಸರಕಾರ ಆರಂಭಿಸಿದೆ. ಜುಲೈ 31ರಂದು ಎನ್‌ಆರ್‌ಸಿಯ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ನ್ಯಾಯಾಧಿಕರಣದ ಅಗತ್ಯವಿರುತ್ತದೆ. ನ್ಯಾಯಾಧಿಕರಣಗಳನ್ನು ಆರಂಭಿಸಲು ಗೃಹ ಸಚಿವಾಲಯ ಅಸ್ಸಾಂ ಸರಕಾರಕ್ಕೆ ನೆರವಾಗಲಿದೆ. ಇದೀಗ ಈ 1000 ನ್ಯಾಯಾಧಿಕರಣದ ಮುಖ್ಯಸ್ಥರಾಗಿ ನಿವೃತ್ತ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಬೇಕಿದ್ದು ಇವರನ್ನು ಗುರುತಿಸಲು ರಾಜ್ಯ ಸರಕಾರ, ಕೇಂದ್ರ ಗೃಹ ಇಲಾಖೆ ಹಾಗೂ ಇತರ ಇಲಾಖೆಗಳು ಯೋಜನೆಯನ್ನು ರೂಪಿಸಿದೆ. ವಿದೇಶಿಯರ ನ್ಯಾಯಾಧಿಕರಣಕ್ಕೆ ನ್ಯಾಯಾಂಗ ಅಧಿಕಾರಿಗಳ ಸಹಿತ ಸುಮಾರು 12 ಸಾವಿರ ಸಿಬ್ಬಂದಿಗಳ ಅಗತ್ಯವಿದೆ. ಈಗಾಗಲೇ ಅಸ್ತಿತ್ವದಲ್ಲಿರುವ 100 ನ್ಯಾಯಾಧಿಕರಣಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುವ 1000 ನ್ಯಾಯಾಧಿಕರಣಗಳು ದೂರಿನ ತ್ವರಿತ ಇತ್ಯರ್ಥಕ್ಕೆ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಆರ್‌ಸಿ ಕರಡು ಪಟ್ಟಿಯಿಂದ ಹೊರಬಿದ್ದಿರುವ 40.7 ಲಕ್ಷ ಜನರಲ್ಲಿ ಸುಮಾರು 30 ಲಕ್ಷ ಜನತೆ ತಮ್ಮ ಹೆಸರನ್ನು ಪಟ್ಟಿಯಲ್ಲಿ ಸೇರಿಸಬೇಕೆಂದು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಬದಲು ಇತರ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ ಎಂದು ಸುಮಾರು 600 ಆಕ್ಷೇಪಣೆಗಳು ಸಲ್ಲಿಸಲ್ಪಟ್ಟಿವೆ. ಕರಡು ಪಟ್ಟಿಯಲ್ಲಿ ಹೆಸರು ನಮೂದಿತವಾಗದ 40.7 ಲಕ್ಷ ಜನರಲ್ಲಿ 37.59 ಲಕ್ಷ ಜನರ ಹೆಸರನ್ನು ತಿರಸ್ಕರಿಸಲಾಗಿದ್ದು 2,48,077 ಜನರ ಹೆಸರನ್ನು ಈಗ ಮರು ಸೇರ್ಪಡೆಗೆ ಪರಿಶೀಲಿಸಲಾಗುವುದು. ಇವರಿಗೆ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಮತ್ತೊಂದು ಅವಕಾಶ ಒದಗಿಸಲಾಗುತ್ತದೆ. ಇವರು ಮತ್ತೆ ಹೊಸದಾಗಿ ದಾಖಲೆಪತ್ರಗಳನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಸ್ಸಾಂನಲ್ಲಿ 1951ರಲ್ಲಿ ಪ್ರಥಮ ಬಾರಿಗೆ ಎನ್‌ಆರ್‌ಸಿಯನ್ನು ಸಿದ್ದಗೊಳಿಸಿದಾಗ ರಾಜ್ಯದಲ್ಲಿ 80 ಲಕ್ಷ ಪೌರರಿದ್ದರು. 2011ರ ಜನಗಣತಿಯ ಪ್ರಕಾರ ಅಸ್ಸಾಂನ ಒಟ್ಟು ಜನಸಂಖ್ಯೆ 3.11 ಕೋಟಿಗೂ ಅಧಿಕವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X