Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್ಸಿ ಪರೀಕ್ಷೆಯ ಬಗ್ಗೆ ಮಾಹಿತಿ...

ಯುಪಿಎಸ್ಸಿ ಪರೀಕ್ಷೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ‘ಐಪಿಎಸ್ ಅಧಿಕಾರಿ’ಯ ಬಂಧನ!

ಪೊಲೀಸರೇ ಸೆಲ್ಯೂಟ್ ಹೊಡೆದ ವ್ಯಕ್ತಿಗೆ ಈ ಗತಿ ಬಂದಿದ್ದೇಕೆ ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ2 Jun 2019 11:05 PM IST
share
ಯುಪಿಎಸ್ಸಿ ಪರೀಕ್ಷೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ‘ಐಪಿಎಸ್ ಅಧಿಕಾರಿ’ಯ ಬಂಧನ!

ಜೈಪುರ, ಜೂ.2: ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದ, ಸ್ಪೂರ್ತಿದಾಯಕ ಭಾಷಣಗಳ ಮೂಲಕ  ಪ್ರಸಿದ್ಧಿ ಗಳಿಸಿದ್ದ ‘ನಕಲಿ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಐಟಿ ಮತ್ತು ಯುಪಿಎಸ್ಸಿ ಪರೀಕ್ಷೆಗಳಲ್ಲಿ ತಾನು ಹೇಗೆ ಮೊದಲ ಪ್ರಯತ್ನದಲ್ಲೇ ಉತ್ತೀರ್ಣನಾದೆ ಎಂದು ವಿವರಿಸುವ ‘ಸ್ಪೂರ್ತಿದಾಯಕ ಭಾಷಣ’ಗಳನ್ನು ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ ಈತ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ಈ ನಕಲಿ ಐಪಿಎಸ್ ಅಧಿಕಾರಿಯನ್ನು ಅಭಯ್ ಮೀನಾ ಎಂದು ಗುರುತಿಸಲಾಗಿದೆ. ಈತ ಹಲವು ಪೊಲೀಸರಿಗೆ ಮೆಡಲ್ ಮತ್ತು ಸರ್ಟಿಫಿಕೆಟ್ ಗಳನ್ನು ಪ್ರದಾನಿಸಿದ್ದ ಎನ್ನಲಾಗಿದೆ.

ಅಭಯ್ ಮೀನಾ ತನ್ನ ಪೊಲೀಸ್ ಕಾರ್ಡನ್ನು ತೋರಿಸಿದಾಗ ವ್ಯಕ್ತಿಯೊಬ್ಬರಿಗೆ ಈ ಬಗ್ಗೆ ಸಂಶಯ ಹುಟ್ಟಿತ್ತು. ಕಾರಣ ಅದಲ್ಲಿ ಕ್ರೈಮ್ ಬ್ರಾಂಚ್ ಅನ್ನು ‘ಬ್ರಾಂಚೆ’ ಎಂದು ಕ್ಯಾಪಿಟಲ್ ಅನ್ನು ‘ಕ್ಯಾಪಿಟೋಲ್’ ಎಂದು ಬರೆಯಲಾಗಿತ್ತು.

ಆತನ ಅಪಾರ್ಟ್ ಮೆಂಟ್ ಗೆ ನುಗ್ಗಿದ ಪೊಲೀಸರು ಆತನನ್ನು ಬಂಧಿಸಿದಾಗ ಅಭಯ್ ತನ್ನ ಪ್ರಭಾವ ಬಳಸಿ ಬೆದರಿಸಲು ಯತ್ನಿಸಿದ್ದ. ತ್ರೀ ಸ್ಟಾರ್ ಪೊಲೀಸ್ ಪ್ಲೇಟ್ ಇರುವ ಕಾರಿನಲ್ಲೇ ಈತ ನಗರದಲ್ಲೆಲ್ಲಾ ಸುತ್ತಾಡುತ್ತಿದ್ದ. ಈತನನ್ನು ಫ್ಯಾಶನ್ ಶೋ, ಪಾರ್ಟಿಗಳಿಗೆ ಅತಿಥಿಯಾಗಿ ಆಹ್ವಾನಿಸಲಾಗುತ್ತಿತ್ತು. ಐಐಟಿ ಪ್ರವೇಶ ಪರೀಕ್ಷೆ ಮತ್ತು ಯುಪಿಎಸ್ಸಿ ಪರೀಕ್ಷೆಗಳಲ್ಲಿ ಹೇಗೆ ಉತ್ತೀರ್ಣರಾಗುವುದು ಎನ್ನುವ ಬಗ್ಗೆ ಈತ ಟಾಕ್ ಶೋಗಳನ್ನು ನಡೆಸುತ್ತಿದ್ದ ಎಂದು ವರದಿಯಾಗಿದೆ.

ಈತ ಕೆಲವು ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಅವರನ್ನು ಅಭಿನಂದಿಸಿದ್ದ. ದುರಂತವೆಂದರೆ ಅವರಲ್ಲಿ ಹಲವರು ಆತನಿಗೆ ಸೆಲ್ಯೂಟ್ ಹೊಡೆದಿದ್ದರು ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X