Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಕ್ಕಳ ಪಾಲನೆ- ಆರೋಗ್ಯದ ಕುರಿತಂತೆ....

ಮಕ್ಕಳ ಪಾಲನೆ- ಆರೋಗ್ಯದ ಕುರಿತಂತೆ....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ3 Jun 2019 12:06 AM IST
share
ಮಕ್ಕಳ ಪಾಲನೆ- ಆರೋಗ್ಯದ ಕುರಿತಂತೆ....

ಕಾಲ ಬದಲಾಗಿದೆ. ಗಂಡ, ಮನೆ, ಮಕ್ಕಳು, ಸಂಸಾರ, ನೋಡಿಕೊಳ್ಳುತ್ತಿದ್ದ ಹೆಣ್ಣು ಮಗಳು ಮನೆಯ ಹೊರಗೆ ಕಾಲಿಟ್ಟು ದುಡಿದು ಸಂಪಾದಿಸಿ ಕುಟುಂಬಕ್ಕೆ ನೆರವಾಗುತ್ತಿದ್ದಾಳೆ. ಅವಿಭಕ್ತ ಕುಟುಂಬಗಳು ಕಡಿಮೆಯಾಗಿ ಮಕ್ಕಳನ್ನು ಆರೈಕೆ ಮಾಡಲು ಹಿರಿಯರಿಲ್ಲದೆ ಹೆತ್ತವರು ಕಂಗಾಲಾಗಿದ್ದಾರೆ. ಆಧುನಿಕ ದಿನಗಳಲ್ಲಿ ಮಕ್ಕಳ ಪಾಲನೆ ಒಂದು ದೊಡ್ಡ ಸವಾಲೇ ಆಗಿದೆ. ಈ ಸವಾಲನ್ನು ಎದುರಿಸುವಲ್ಲಿ ಕುಟುಂಬ ವಿಫಲವಾಗುತ್ತಿದೆ. ಮಕ್ಕಳ ಪಾಲನೆ ಸಮಾಜದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮಹತ್ವ ಪೂರ್ಣವಾದುದು. ತಾಯಿಯ ಮಡಿಲ ವಾತ್ಸಲ್ಯದ ಕೊರತೆಯಿಂದ ಬೆಳೆಯುವ ಮಗು ಎದುರಿಸುವ ಮಾನಸಿಕ ಸವಾಲುಗಳು ಹಲವು. ಅದು ಭವಿಷ್ಯದಲ್ಲೂ ತನ್ನ ಪರಿಣಾಮಗಳನ್ನು ಬೀರಬಹುದು. ಈ ನಿಟ್ಟಿನಲ್ಲಿ ಡಾ. ಎಂ. ಡಿ. ಸೂರ್ಯಕಾಂತ ಅವರ ‘ಮಕ್ಕಳ ಪಾಲನೆ-ಆರೋಗ್ಯ’ ಆಸಕ್ತಿಕರವಾದ ಕೃತಿಯಾಗಿದೆ. ಹಿರಿಯ ತಲೆಮಾರಿನ ಕೊಂಡಿಯನ್ನು ಕಳಚಿಕೊಂಡಿರುವ ಹೊಸ ತಲೆಮಾರಿನ ತಾಯಂದಿರಿಗೆ ಈ ಕೃತಿ ಅತ್ಯಂತ ಮಹತ್ವಪೂರ್ಣವಾದ ಮಾರ್ಗದರ್ಶನಗಳನ್ನು ನೀಡುತ್ತದೆ.
ಮೊದಲ ಅಧ್ಯಾಯವೇ, ಮಗುವಿನ ಜೊತೆಗಿನ ಸಂವಹನ. ಮಗುವಿಗೆ ನಮ್ಮ ಭಾಷೆಯೇ ತಿಳಿದಿಲ್ಲ. ಹೀಗಿರುವಾಗ ಅದರೊಂದಿಗೆ ಸಂವಹ ಮಾಡುವ ಬಗೆ ಹೇಗೆ? ಈ ಕುರಿತ ವಿವರಗಳನ್ನು ಹೊಂದಿರುವ ಅಧ್ಯಾಯ ‘ಮಗು ಜೊತೆ ಯಾವ ಭಾಷೆ ಮಾತನಾಡಲಿ?’. ಬಳಿಕ ಹೆರಿಗೆಗೆ ಮೊದಲು ಮತ್ತು ನಂತರ ಮಹಿಳೆಯ ದಿನಚರಿ, ಸ್ತನ್ಯ ಪಾನಕ್ಕೆ ಬೇಕಾದ ಸಿದ್ಧತೆ, ಎದೆ ಹಾಲು ಉಣಿಸುವ ಸಂದರ್ಭದಲ್ಲಿ ಎದುರಾಗುವ ಸಮಸ್ಯೆ, ಸ್ನಾನ ಮಾಡಿಸುವ ಸಂದರ್ಭದಲ್ಲಿ ಉಂಟಾಗುವ ಆತಂಕ,   ಮಕ್ಕಳೊಂದಿಗೆ ಆಟದ ರೀತಿ, ಬಣ್ಣದ ಆಟಿಕೆಗಳು ಮಗುವಿಗೆ ಹೇಗೆ ಸಮಸ್ಯೆಯನ್ನು ಉಂಟು ಮಾಡಬಹುದು ಎಂಬಿತ್ಯಾದಿ ಪ್ರಾಥಮಿಕ ವಿವಗಳನ್ನು ಲೇಖಕರು ದಾಖಲಿಸಿದ್ದಾರೆ.
ಹಾಗೆಯೇ ಡಯಾಪರ್ ಆಯ್ಕೆ, ಮಗು ಎದುರಿಸಬಹುದಾದ ರೋಗಗಳು, ಅದರ ತಡೆ, ಕೆಲಸದಾಕೆಯ ಜೊತೆಗೆ ಮಗುವನ್ನು ಒಪ್ಪಿಸುವಾಗ ಇರಬೇಕಾದ ಎಚ್ಚರಿಕೆ, ಮಕ್ಕಳನ್ನು ಕಾಡುವ ವಿವಿಧ ಕಾಯಿಲೆಗಳು, ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದರೆ ಪಾಲಕರು ಅದರ ಜೊತೆಗೆ ವ್ಯವಹರಿಸುವ ರೀತಿ ಇತ್ಯಾದಿ ಇತ್ಯಾದಿ ಸಮಗ್ರ ಮಾಹಿತಿಗಳನ್ನು ಈ ಕೃತಿ ಹೊಂದಿದೆ. ಮಗುವಿನ ಬೌದ್ಧಿಕ ಬೆಳವಣಿಗೆಗಳಿಗೆ ಪೂರಕವಾಗುವ ಚಟುವಟಿಕೆಗಳ ಬಗ್ಗೆಯೂ ಲೇಖಕರು ವಿವರಗಳನ್ನು ನೀಡುತ್ತಾರೆ.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಒಟ್ಟು ಪುಟಗಳು 120. ಮುಖಬೆಲ 125 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X