Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಂದಿ ಹೇರಿಕೆ ಸಹಿಸಲು ಸಾಧ್ಯವಿಲ್ಲ:...

ಹಿಂದಿ ಹೇರಿಕೆ ಸಹಿಸಲು ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ3 Jun 2019 6:31 PM IST
share
ಹಿಂದಿ ಹೇರಿಕೆ ಸಹಿಸಲು ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂ. 3: ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು’ ಎಂದು ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

‘ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ’ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

‘ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

‘ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

‘ನಮ್ಮ ನಾಡು ವಿವಿಧತೆಯಲ್ಲಿ ಏಕತೆಯಿಂದ ಕೂಡಿದೆ. ಸಮಾಜಕ್ಕೆ ಶಾಂತಿಯುತ ಸಹಬಾಳ್ವೆ ಮತ್ತು ಸಾಮರಸ್ಯದ ಅಗತ್ಯವಿದೆ. ಕನ್ನಡ ನಮ್ಮ ಅಸ್ಮಿತೆ. ಇತರ ಯಾವುದೇ ಭಾಷೆಯನ್ನು ಕಲಿಯುವುದು ನಮ್ಮ ಆಯ್ಕೆಯಾಗಿರಬೇಕೇ ವಿನಃ ಹೇರಿಕೆಯಾಗಬಾರದು ಎಂದು ತಿಳಿಸಿದ್ದಾರೆ.

‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿಯು ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯನ್ನು ಹೇರುತ್ತದೆ. ಇದು ನಮ್ಮ ಭಾವನೆಗಳಿಗೆ ವಿರುದ್ಧವಾಗಿದೆ. ಪ್ರಾದೇಶಿಕ ಅಸ್ತಿತ್ವವನ್ನು ಗುರುತಿಸುವುದು ಕೆಲವರ ಪ್ರಕಾರ ಅಸಮಂಜಸ ಎಂದಾದಲ್ಲಿ ಹಿಂದಿ ಹೇರಿಕೆಯು ನಮ್ಮ ರಾಜ್ಯದ ಮೇಲಿನ ಕ್ರೂರ ಆಕ್ರಮಣವಲ್ಲದೆ ಬೇರೇನೂ ಅಲ್ಲ. ಹಿಂದಿ ಹೇರಿಕೆ ನಿಲ್ಲಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ‘ಹಿಂದಿ ಹೇರಿಕೆ ಮಾಡುವ ಬದಲು ಪ್ರಾದೇಶಿಕ ಅಸ್ತಿತ್ವವನ್ನು ಸರಕಾರ ಗುರುತಿಸಬೇಕು. ತಮ್ಮದೇ ಆದ ಭಾಷೆ, ಸಂಸ್ಕೃತಿಯ ಮೂಲಕ ಅಭಿವ್ಯಕ್ತಿಗೆ ರಾಜ್ಯಗಳಿಗೆ ಹೆಚ್ಚು ಅವಕಾಶ ನೀಡಬೇಕು. ನಾವೆಲ್ಲ ಭಾರತದಲ್ಲಿರುವ ಕನ್ನಡಿಗರು’ ಎಂದು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X