Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಕಾ: ಇಬ್ಬರು ಮುಸ್ಲಿಮ್ ಗವರ್ನರ್‌ಗಳ...

ಲಂಕಾ: ಇಬ್ಬರು ಮುಸ್ಲಿಮ್ ಗವರ್ನರ್‌ಗಳ ರಾಜೀನಾಮೆ

ರಾಜೀನಾಮೆಗಾಗಿ ಸಾವಿರಾರು ಮಂದಿಯಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ3 Jun 2019 11:49 PM IST
share
ಲಂಕಾ: ಇಬ್ಬರು ಮುಸ್ಲಿಮ್ ಗವರ್ನರ್‌ಗಳ ರಾಜೀನಾಮೆ

ಕೊಲಂಬೊ, ಜೂ. 3: ಕ್ಯಾಂಡಿ ನಗರದಲ್ಲಿ ಬೌದ್ಧ ಬಿಕ್ಕುಗಳು ಸೇರಿದಂತೆ ಸಾವಿರಾರು ಮಂದಿ ಧರಣಿ ನಡೆಸಿದ ಬಳಿಕ, ಶ್ರೀಲಂಕಾದ ಇಬ್ಬರು ಮುಸ್ಲಿಮ್ ಗವರ್ನರ್‌ಗಳು ಸೋಮವಾರ ರಾಜೀನಾಮೆ ನೀಡಿದ್ದಾರೆ.

ಈಸ್ಟರ್ ರವಿವಾರದಂದು ದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕಾರಣರಾದ ಭಯೋತ್ಪಾದಕರನ್ನು ‘ಬೆಂಬಲಿಸುತ್ತಿರುವುದಕ್ಕಾಗಿ’ ಅವರನ್ನು ವಜಾಗೊಳಿಸಬೇಕು ಎಂಬುದಾಗಿ ಪ್ರತಿಭಟನಕಾರರು ಒತ್ತಾಯಿಸುತ್ತಿದ್ದರು.

ವೆಸ್ಟರ್ನ್ ಪ್ರಾವಿನ್ಸ್ ಗವರ್ನರ್ ಆಝಾದ್ ಸಾಲಿ ಮತ್ತು ಈಸ್ಟರ್ನ್ ಪ್ರಾವಿನ್ಸ್ ಗವರ್ನರ್ ಎಂ.ಎ.ಎಲ್.ಎಂ. ಹಿಝ್ಬುಲ್ಲಾ ತಮ್ಮ ರಾಜೀನಾಮೆ ಪತ್ರಗಳನ್ನು ದೇಶದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನರಿಗೆ ಹಸ್ತಾಂತರಿಸಿದರು ಎಂದು ಅಧಿಕಾರಿಗಳು ಹೇಳಿದರು.

ಸಾಲಿ ಮತ್ತು ಹಿಝ್ಬುಲ್ಲಾ ಇಬ್ಬರೂ ಸಿರಿಸೇನರ ಮಿತ್ರಕೂಟದ ಸದಸ್ಯರಾಗಿದ್ದಾರೆ. ಅವರನ್ನು ಗವರ್ನರ್‌ಗಳಾಗಿ ಸಿರಿಸೇನರೇ ನೇಮಿಸಿದ್ದರು. ಭಯೋತ್ಪಾದನೆಯೊಂದಿಗೆ ನಂಟು ಹೊಂದಿರುವ ಆರೋಪಗಳನ್ನು ಎದುರಿಸಿದ ಬಳಿಕ ಅವರು ರಾಜೀನಾಮೆ ನೀಡುವ ಒತ್ತಡಕ್ಕೆ ಸಿಲುಕಿದ್ದರು.

ತಮ್ಮ ವಿರುದ್ಧದ ಆರೋಪಗಳನ್ನು ಇಬ್ಬರೂ ಗವರ್ನರ್‌ಗಳು ನಿರಾಕರಿಸಿದ್ದಾರೆ.

ಸಿರಿಸೇನರ ಮಿತ್ರಪಕ್ಷವೊಂದರ ಸಂಸದರೂ ಆಗಿರುವ ಬೌದ್ಧ ಬಿಕ್ಕು ಅತುರಲಿಯೆ ರತನ ಕ್ಯಾಂಡಿ ನಗರದ ಪ್ರಮುಖ ಬೌದ್ಧ ದೇವಾಲಯವಾಗಿರುವ ‘ಟೆಂಪಲ್ ಆಫ್ ಟೂತ್’ನ ಸಮೀಪ ಉಪವಾಸ ಮುಷ್ಕರ ಆರಂಭಿಸಿದ ನಾಲ್ಕು ದಿನಗಳ ಬಳಿಕ ಗವರ್ನರ್‌ಗಳು ರಾಜೀನಾಮೆ ನೀಡಿದ್ದಾರೆ.

‘‘ಇಬ್ಬರು ಮುಸ್ಲಿಮ್ ಗವರ್ನರ್‌ಗಳನ್ನು ಅಧ್ಯಕ್ಷರು ವಜಾಗೊಳಿಸಿದ ಬಳಿಕವಷ್ಟೇ ನಾನು ನನ್ನ ಉಪವಾಸವನ್ನು ಕೊನೆಗೊಳಿಸುತ್ತೇನೆ’’ ಎಂದು ತನ್ನ ಉಪವಾಸದ ಆರಂಭದಲ್ಲಿ ರತನ ಹೇಳಿದ್ದರು.

ಬೃಹತ್ ಪ್ರತಿಭಟನೆ

ಸೋಮವಾರ ಬೆಳಗ್ಗೆ ಸುಮಾರು 10,000 ಬೌದ್ಧರು ಈ ಪ್ರಸಿದ್ಧ ದೇವಾಲಯದಲ್ಲಿ ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ಕೊಲಂಬೋದ ಕೆಥೋಲಿಕ್ ಚರ್ಚ್‌ನ ಮುಖ್ಯಸ್ಥ ಕಾರ್ಡಿನಲ್ ಮಾಲ್ಕಮ್ ರಂಜಿತ್ ಕೂಡ ರತನರಿಗೆ ಬೆಂಬಲ ವ್ಯಕ್ತಪಡಿಸಲು ಸೋಮವಾರ ಕ್ಯಾಂಡಿಗೆ ಪ್ರಯಾಣಿಸಿದರು.

 ಎಪ್ರಿಲ್ 21ರಂದು ದೇಶದಲ್ಲಿ ನಡೆದ ಸರಣಿ ಆತ್ಮಹತ್ಯಾ ಬಾಂಬ್‌ಗಳಲ್ಲಿ 258 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ 500ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಐಸಿಸ್ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ ನ್ಯಾಶನಲ್ ತೌಹೀದ್ ಜಮಾಅತ್ ಎಂಬ ಶ್ರೀಲಂಕಾದ ಉಗ್ರಗಾಮಿ ಸಂಘಟನೆ ಭಯೋತ್ಪಾದಕ ದಾಳಿ ನಡೆಸಿದೆ ಎಂದು ಶ್ರೀಲಂಕಾ ಸರಕಾರ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X