Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಪ್ಪಿದ ಅನಾಹುತ: ಲಂಡನ್ ಮಸೀದಿಗೆ...

ತಪ್ಪಿದ ಅನಾಹುತ: ಲಂಡನ್ ಮಸೀದಿಗೆ ನುಗ್ಗಿದ ಶಸ್ತ್ರಸಜ್ಜಿತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ4 Jun 2019 10:10 AM IST
share
ತಪ್ಪಿದ ಅನಾಹುತ: ಲಂಡನ್ ಮಸೀದಿಗೆ ನುಗ್ಗಿದ ಶಸ್ತ್ರಸಜ್ಜಿತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಮುಸ್ಲಿಮರು

ಲಂಡನ್: ಇಲ್ಲಿನ ಮಸೀದಿಯೊಂದರಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬನನ್ನು ಪ್ರಾರ್ಥನೆಗೆ ಬಂದಿದ್ದ ಮುಸ್ಲಿಮರು ಹಿಮ್ಮೆಟ್ಟಿಸಿದ ಘಟನೆಯ ಸಿಸಿಟಿವಿ ವೀಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ಲಂಡನ್‌ನ ಸೌತ್‌ಹಾಲ್ ಪ್ರದೇಶದ ಹಯೇಸ್ ರಸ್ತೆಯಲ್ಲಿರುವ ದಾರುಸ್ಸಲಾಂ ಸಾಂಸ್ಕೃತಿಕ ಕೇಂದ್ರಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದಾಳಿಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಜಾನೆ 4.30ರ ವೇಳೆಗೆ ನಡೆದಿದೆ ಎಂದು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ.

ವೀಡಿಯೊದಲ್ಲಿ ಕಂಡುಬರುವಂತೆ ಕಬ್ಬಿಣದ ಸುಟ್ಟಿಗೆಯೊಂದನ್ನು  ಬೀಸುತ್ತಾ ದಾಳಿಕೋರ ಮಸೀದಿ ಆವರಣ ಪ್ರವೇಶಿಸುವ ಹಂತದಲ್ಲೇ ಜಾಗೃತ  ನಾಗರೀಕರು  ಹಿಂದಿನಿಂದ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾದರು. ತಕ್ಷಣ ಇತರರೂ ಥಟ್ಟನೇ ಆತನ ಮೇಲೆರಗಿದರು.

"ಹಿಂದಿನ ದಿನ ಮಸೀದಿಗೆ ಪ್ರಾರ್ಥನೆಗೆ ಆಗಮಿಸಿದ್ದ ಕೆಲ ವ್ಯಕ್ತಿಗಳ ಜತೆ ಈ ದಾಳಿಕೋರ ಸಂಘರ್ಷಕ್ಕೆ ಇಳಿದಿದ್ದ ಎನ್ನಲಾಗಿದೆ. ಪೊಲೀಸರು ಆಗಮಿಸುವ ಮುನ್ನವೇ ಭಕ್ತರು ಆತನನ್ನು ವಶಕ್ಕೆ ಪಡೆದಿದ್ದರು" ಎಂದು ಮೆಟ್ರೊಪಾಲಿಟನ್ ಪೊಲೀಸ್ ವಕ್ತಾರ ಹೇಳಿಕೆಯನ್ನು ಉಲ್ಲೇಖಿಸಿ ಲಂಡನ್‌ನ ಸ್ಕೈನ್ಯೂಸ್ ವರದಿ ಮಾಡಿದೆ.

ಭೀಕರ ದಾಳಿ ಮಾಡುವ ಪ್ರಯತ್ನದಲ್ಲಿದ್ದ ಎಂಬ ಶಂಕೆಯ ಮೇಲೆ  ಆತನನ್ನು ಪೊಲೀಸರು ಬಂಧಿಸಿದ್ದು, ಪಶ್ಚಿಮ ಲಂಡನ್ ಠಾಣೆಯಲ್ಲಿ ಕಸ್ಟಡಿಯಲ್ಲಿಡಲಾಗಿದೆ ಎಂದು ವರದಿ ಹೇಳಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಕ್ರೈಸ್ಟ್‌ಚರ್ಚ್ ಮಸೀದಿಯ ಮೇಲೆ ದಾಳಿ ಮಾಡಿದ ಆಸ್ಟ್ರೇಲಿಯಾದ ಬ್ರೆಂಡನ್ ಟೆರಂಟ್ ಎಂಬಾತ ಪ್ರಾರ್ಥನೆಗೆ ಬಂದಿದ್ದ 49 ಮಂದಿಯನ್ನು ಹತ್ಯೆ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X