Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿವೃತ್ತ ಯೋಧ ಸನಾವುಲ್ಲಾ ಪ್ರಕರಣದಲ್ಲಿ...

ನಿವೃತ್ತ ಯೋಧ ಸನಾವುಲ್ಲಾ ಪ್ರಕರಣದಲ್ಲಿ ತಿರುವು: ತನಿಖಾ ವರದಿಯನ್ನು ತಿರುಚಿದ್ದ ಪೊಲೀಸ್ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ4 Jun 2019 12:59 PM IST
share
ನಿವೃತ್ತ ಯೋಧ ಸನಾವುಲ್ಲಾ ಪ್ರಕರಣದಲ್ಲಿ ತಿರುವು: ತನಿಖಾ ವರದಿಯನ್ನು ತಿರುಚಿದ್ದ ಪೊಲೀಸ್ ಅಧಿಕಾರಿ

ಗುವಹಾಟಿ, ಜೂ.4:  ಮಾಜಿ ಯೋಧ ಮುಹಮ್ಮದ್ ಸನಾವುಲ್ಲಾ ಅವರನ್ನು ಅಕ್ರಮ ವಲಸಿಗ ಎಂದು ಘೋಷಿಸಲ್ಪಟ್ಟ ಕೇಸ್ ರಿಪೋರ್ಟ್ ಗೆ ಸಹಿ ಹಾಕಿದ್ದಾರೆನ್ನಲಾದ ಮೂವರು ಇದೀಗ ಯು-ಟರ್ನ್ ಹೊಡೆದಿದ್ದು, ಈ ಪ್ರಕರಣದಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದಿದ್ದಾರೆ. ಮೂವರೂ ಇದೀಗ ಪೊಲೀಸ್ ದೂರು ದಾಖಲಿಸಿ ಪ್ರಕರಣದ ಅಧಿಕಾರಿಯಾಗಿರುವ ಚಂದ್ರಮಲ್ ದಾಸ್ ಅವರು ತನಿಖಾ ವರದಿಯನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ತಿರುಚಿದ ವರದಿಯ ಆಧಾರದಲ್ಲಿಯೇ 30 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಹಾಗೂ ನಂತರ ಅಸ್ಸಾಂ ಗಡಿ ಭದ್ರತಾ ಪೊಲೀಸ್ ಇಲಾಖೆ ಸೇರಿದ್ದ ಸನಾವುಲ್ಲಾ ಅವರನ್ನು ಬಂಧಿಸಿ ದಿಗ್ಬಂಧನ ಕೇಂದ್ರದಲ್ಲಿ ಕಳೆದ ವಾರ ಇರಿಸಲಾಗಿದೆ. ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿಗ ಎಂಬ ಆರೋಪ ಅವರ ಮೇಲಿದೆ.

ಅಸ್ಸಾಂ ಬಾರ್ಡರ್ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಿರುವ ಮಾಜಿ ಅಧಿಕಾರಿ ಚಂದ್ರಮಲ್ ದಾಸ್ ಆವರ ಪ್ರಕಾರ ಅವರು ತನಿಖೆ ನಡೆಸಿದ ವ್ಯಕ್ತಿ ಸುಬೇದಾರ್ ಮುಹಮ್ಮದ್ ಸನಾವುಲ್ಲಾ ಅವರಾಗಿರಲಿಲ್ಲ. ಆದರೆ ಅವರು ತನಿಖೆ ನಡೆಸಿದ ವ್ಯಕ್ತಿಯ ಹೆಸರು ಕೂಡ ಸನಾವುಲ್ಲಾ ಆಗಿದ್ದರಿಂದಲೇ ಇಂತಹ ಪ್ರಮಾದ ಆಗಿರಬಹುದೆಂದು ಅವರು ತಿಳಿಸಿದ್ದಾರೆ.

ಆದರೆ ಸನಾವುಲ್ಲಾ ಅವರ ಗ್ರಾಮವಾದ ಕೊಲೊಹಿಕಶ್ ಇಲ್ಲಿನ ಸಾಕ್ಷಿಗಳ ಹೇಳಿಕೆ ಈ ವರದಿಯಲ್ಲಿ ಹೇಗೆ ಸೇರಿಕೊಂಡಿದೆ ಎಂಬುದು ನಿಗೂಢ.

“ನಾನು ಆ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿಲ್ಲ ಹಾಗೂ ತನಿಖೆಗೂ ನನ್ನನ್ನು ಕರೆಯಲಾಗಿರಲಿಲ್ಲ. 2008-2009ರಲ್ಲಿ ನಾನು ನನ್ನ ಗ್ರಾಮದಲ್ಲಿರಲಿಲ್ಲ, ಗುವಾಹಟಿಯಲ್ಲಿದ್ದೆ. ಸನಾವುಲ್ಲಾ ಕೂಡ ಅಲ್ಲಿರಲಿಲ್ಲ, ಅವರು ಸೇನೆಯಲ್ಲಿದ್ದರು'' ಎಂದು ವರದಿಯಲ್ಲಿ ಸಾಕ್ಷಿಗಳಲ್ಲೊಬ್ಬರಾಗಿ ಹೆಸರಿಸಲ್ಪಟ್ಟಿರುವ ಅಲಿ ಎಂಬವರು ಹೇಳುತ್ತಾರೆ.

ಈ ಪ್ರಕರಣದ ತನಿಖೆ ನಡೆದಾಗ ಮುಹಮ್ಮದ್ ಸನಾವುಲ್ಲಾ ಮಣಿಪುರದಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂಬುದು ಅವರ ಸೇವಾ ದಾಖಲೆಯಿಂದ ತಿಳಿದುಬರುತ್ತದೆ. ಚಂದ್ರಮಲ್ ದಾಸ್ ಕೂಡ ಸನಾವುಲ್ಲಾ ಅಸ್ಸಾಂನಲ್ಲಿರಲಿಲ್ಲ ಎಂಬುದನ್ನು ಒಪ್ಪುತ್ತಾರೆ. ವರದಿಯಲ್ಲಿನ ಇತರ ಇಬ್ಬರು ಸಾಕ್ಷಿಗಳಾದ ಸಹಬನ್ ಅಲಿ ಹಾಗೂ ಅಮ್ಜದ್ ಅಲಿ ಕೂಡ ಚಂದ್ರಮಲ್ ದಾಸ್ ವಿರುದ್ಧ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಕಾನೂನಿನ ಪ್ರಕಾರ ಮುಂದುವರಿಯುತ್ತಿದ್ದೇವೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X