Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್: ಶ್ರೀಲಂಕಾ 201 ರನ್‌ಗೆ ಆಲೌಟ್

ವಿಶ್ವಕಪ್: ಶ್ರೀಲಂಕಾ 201 ರನ್‌ಗೆ ಆಲೌಟ್

ಮಳೆಬಾಧಿತ ಪಂದ್ಯದಲ್ಲಿ ಅಫ್ಘಾನ್‌ಗೆ ಪರಿಷ್ಕೃತ ಗುರಿ 187 ರನ್

ವಾರ್ತಾಭಾರತಿವಾರ್ತಾಭಾರತಿ4 Jun 2019 9:00 PM IST
share
ವಿಶ್ವಕಪ್: ಶ್ರೀಲಂಕಾ 201 ರನ್‌ಗೆ ಆಲೌಟ್

ಕಾರ್ಡಿಫ್, ಜೂ.4: ಅಫ್ಘಾನಿಸ್ತಾನದ ವಿರುದ್ಧ ಮಂಗಳವಾರ ಇಲ್ಲಿ ನಡೆದ ಮಳೆಬಾಧಿತ ವಿಶ್ವಕಪ್ ಕ್ರಿಕೆಟ್‌ನ 7ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ 36.5 ಓವರ್‌ಗಳಲ್ಲಿ 201 ರನ್ ಗಳಿಸಿ ಆಲೌಟಾಗಿದೆ.

ಮಳೆಯಿಂದಾಗಿ ಅಫ್ಘಾನಿಸ್ತಾನಕ್ಕೆ ಪರಿಷ್ಕೃತ ಗುರಿ ನಿಗದಿಪಡಿಸಲಾಗಿದ್ದು, 41 ಓವರ್‌ಗಳಲ್ಲಿ ಗೆಲ್ಲಲು 187 ರನ್ ಗಳಿಸಬೇಕಾಗಿದೆ.

ಉತ್ತಮ ಆರಂಭ ಪಡೆದಿದ್ದ ಶ್ರೀಲಂಕಾ ದೊಡ್ಡ ಮೊತ್ತ ಗಳಿಸುವತ್ತ ಹೆಜ್ಜೆ ಇಟ್ಟಿತ್ತು. ಆಗ ಒಂದೇ ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದ ಅಫ್ಘಾನಿಸ್ತಾನದ ಆಫ್ ಸ್ಪಿನ್ನರ್ ಮುಹಮ್ಮದ್ ನಬಿ ಶ್ರೀಲಂಕಾದ ಅಗ್ರ ಸರದಿಯನ್ನು ಭೇದಿಸಿದ್ದಲ್ಲದೆ, ಲಂಕಾದ ದಿಢೀರ್ ಕುಸಿತಕ್ಕೆ ಕಾರಣರಾದರು.

ಇಲ್ಲಿನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ 21ನೇ ಓವರ್ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿ ಸುಸ್ಥಿತಿಯಲ್ಲಿತ್ತು. ಇನಿಂಗ್ಸ್‌ನ 22ನೇ ಓವರ್ ಬೌಲಿಂಗ್ ಮಾಡಲು ಇಳಿದ ನಬಿ ಸ್ಪಿನ್ ಮ್ಯಾಜಿಕ್‌ನ ಮೂಲಕ ಪಂದ್ಯವನ್ನು ಅಫ್ಘಾನ್‌ನತ್ತ ತಿರುಗಿಸಿದರು.

 21.2ನೇ ಓವರ್‌ನಲ್ಲಿ ವನ್‌ಡೌನ್ ದಾಂಡಿಗ ತಿರಿಮನ್ನೆ(25) ವಿಕೆಟನ್ನು ಪಡೆದ ನಬಿ, ಸ್ಲಿಪ್‌ನಲ್ಲಿ ಫೀಲ್ಡರ್‌ನ್ನು ನಿಲ್ಲಿಸಿ ಹೊಸ ದಾಂಡಿಗ ಕುಸಾಲ್ ಮೆಂಡಿಸ್‌ಗೆ ಒತ್ತಡ ಹೇರಿದರು. ಮೆಂಡಿಸ್(2)21.4ನೇ ಓವರ್‌ನಲ್ಲಿ ರಹ್ಮತ್ ಶಾಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಶ್ರೀಲಂಕಾದ ಹಿರಿಯ ಆಲ್‌ರೌಂಡರ್ ಆ್ಯಂಜೆಲೊ ಮ್ಯಾಥ್ಯೂಸ್(0) ಕಟ್‌ಶಾಟ್‌ನ್ನು ಆಡಲು ಪ್ರಯತ್ನಿಸಿ 21.6ನೇ ಓವರ್‌ನಲ್ಲಿ ರಹ್ಮತ್ ಶಾಗೆ ಕ್ಯಾಚ್ ನೀಡಿದರು. ನಬಿ ತಾನೆಸೆದ 5ನೇ ಓವರ್‌ನಲ್ಲಿ ಕೇವಲ 5 ರನ್ ನೀಡಿ ಮೂರು ವಿಕೆಟ್‌ಗಳನ್ನು ಉರುಳಿಸಿ ಪಂದ್ಯಕ್ಕೆ ತಿರುವು ನೀಡಿದರು.

 ಅಫ್ಘಾನ್‌ನ ವೇಗದ ಬೌಲರ್‌ಗಳು ಹೊಸ ಚೆಂಡಿನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾದಾಗ ನಾಯಕ ಗುಲ್ಬದ್ದೀನ್ ನೈಬ್ 34ರ ಹರೆಯದ ನಬಿ ಅವರನ್ನು ಇನಿಂಗ್ಸ್‌ನ 7ನೇ ಓವರ್‌ನಲ್ಲಿ ದಾಳಿಗಿಳಿಸಿದರು. ನಬಿ ಲಂಕೆಯ ರನ್ ವೇಗಕ್ಕೆ ತಕ್ಷಣವೇ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು. ಇನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ಲಂಕಾದ ನಾಯಕ ಕರುಣರತ್ನೆ(30, 45 ಎಸೆತ, 3 ಬೌಂಡರಿ)ವಿಕೆಟನ್ನು ಕಬಳಿಸಿ ಮೊದಲ ವಿಕೆಟ್ ಜೊತೆಯಾಟಕ್ಕೆ ನಬಿ ಬ್ರೇಕ್ ಹಾಕಿದರು.

ಕುಸಾಲ್ ಪೆರೇರರೊಂದಿಗೆ ಇನಿಂಗ್ಸ್ ಆರಂಭಿಸಿದ ಕರುಣರತ್ನೆ 13.1 ಓವರ್‌ಗಳಲ್ಲಿ 92 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು. ಭಾರೀ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡ ಕೆಲವೇ ನಿಮಿಷಗಳ ಮೊದಲು ಲಂಕೆಯ ಪರ ಗರಿಷ್ಠ ಸ್ಕೋರ್ ಗಳಿಸಿದ ಪೆರೇರ(78, 81 ಎಸೆತ, 8 ಬೌಂಡರಿ)ರಿವರ್ಸ್ ಸ್ವೀಪ್‌ಗೆ ಯತ್ನಿಸಿ ಸ್ಪಿನ್ನರ್ ರಶೀದ್ ಖಾನ್‌ಗೆ ವಿಕೆಟ್ ಒಪ್ಪಿಸಿದರು. ಕೆಲವು ಗಂಟೆಗಳ ಬಳಿಕ ಮತ್ತೆ ಪಂದ್ಯ ಆರಂಭವಾದಾಗ ಪಂದ್ಯವನ್ನು 41 ಓವರ್‌ಗೆ ಕಡಿತಗೊಳಿಸಲಾಯಿತು. ಲಕ್ಮಲ್ ಔಟಾಗದೆ 15 ರನ್ ಗಳಿಸಿ ಲಂಕೆಯ ಮೊತ್ತವನ್ನು 200ರ ಗಡಿ ದಾಟಿಸಿದರು.

ಅಫ್ಘಾನ್‌ನ ಪರ ಮುಹಮ್ಮದ್ ನಬಿ(4-30)ಯಶಸ್ವಿ ಬೌಲರ್ ಎನಿಸಿಕೊಂಡರು. ರಶೀದ್ ಖಾನ್(2-17) ಹಾಗೂ ಝದ್ರಾನ್(2-34) ತಲಾ ಎರಡು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X