Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಶ್ಚಿಮಘಟ್ಟ ನಾಶವಾದರೆ ರಾಜ್ಯಕ್ಕೆ ಬರಗಾಲ...

ಪಶ್ಚಿಮಘಟ್ಟ ನಾಶವಾದರೆ ರಾಜ್ಯಕ್ಕೆ ಬರಗಾಲ ತಪ್ಪಿದ್ದಲ್ಲ: ಪರಿಸರ ವಿಜ್ಞಾನಿ ಯಲ್ಲಪ್ಪರೆಡ್ಡಿ

ಎತ್ತಿನಹೊಳೆ ಯೋಜನೆಯ ದುಷ್ಪರಿಣಾಮ ಕುರಿತ ಛಾಯಾಚಿತ್ರ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ4 Jun 2019 9:07 PM IST
share
ಪಶ್ಚಿಮಘಟ್ಟ ನಾಶವಾದರೆ ರಾಜ್ಯಕ್ಕೆ ಬರಗಾಲ ತಪ್ಪಿದ್ದಲ್ಲ: ಪರಿಸರ ವಿಜ್ಞಾನಿ ಯಲ್ಲಪ್ಪರೆಡ್ಡಿ

ಬೆಂಗಳೂರು, ಜೂ.4: ಪಶ್ಚಿಮ ಘಟ್ಟಗಳು ಉಳಿದರೆ ಮಾತ್ರ ಕರ್ನಾಟಕವನ್ನು ಒಳಗೊಂಡಂತೆ ದೇಶಕ್ಕೆ ಮಳೆ, ಬೆಳೆ. ಆದರೆ, ಕೆಲವು ಸ್ವಾರ್ಥಿಗಳು ಎತ್ತಿನಹೊಳೆ ಯೋಜನೆಯಡಿ ಇಡೀ ಪಶ್ಚಿಮಘಟ್ಟದ ಕಾಡುಗಳನ್ನು ಸರ್ವನಾಶ ಮಾಡುವ ಮೂಲಕ ಇಡೀ ರಾಜ್ಯವನ್ನು ಮರಭೂಮಿ ಮಾಡಲು ಹೊರಟಿದ್ದಾರೆ ಎಂದು ಪರಿಸರ ವಿಜ್ಞಾನಿ ಯಲ್ಲಪ್ಪರೆಡ್ಡಿ ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಬಿಳೇಕಹಳ್ಳಿ ಜನಜಾಗೃತಿ ಸಾಮಾಜಿಕ ಕಲಾ ವೇದಿಕೆ ನಗರದ ಚಿತ್ರಕಲಾ ಪರಿಷತ್‌ನಲ್ಲಿ ನೇತ್ರಾವತಿ ನದಿಯನ್ನು ನುಂಗುತ್ತಿರುವ ಎತ್ತಿನಹೊಳೆ ಕಾಮಗಾರಿಯ ದುಷ್ಪರಿಣಾಮಗಳ ಕುರಿತು ಛಾಯಾಚಿತ್ರಗಾರ ಸುಧೀರ್‌ಶೆಟ್ಟಿ ತೆಗೆದಿರುವ ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾವಿರಾರು ವರ್ಷಗಳ ನಿರಂತರ ಪ್ರಕ್ರಿಯೆ ಫಲವಾಗಿ ಪಶ್ಚಿಮಘಟ್ಟಗಳು ರೂಪಗೊಂಡು ಜೀವವೈವಿಧ್ಯತೆಯ ತಾಣವಾಗಿದೆ. ಇಲ್ಲಿನ ಮುಗಿಲಿಗೆ ತಾಕುವಂತಹ ಬೆಟ್ಟಗಳು, ಯಾವಾಗಲೂ ಹಚ್ಚ ಹಸಿರಿನಿಂದ ಕೂಡಿರುವ ಕಾಡುಗಳ ಪರಿಣಾಮವಾಗಿ ರಾಜ್ಯದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಆದರೆ, ಕೆಲವು ಸ್ವಾರ್ಥ ರಾಜಕಾರಣಿಗಳು ನೇತ್ರಾವತಿ ನದಿ ನೀರನ್ನು ಬಯಲುಸೀಮೆಯ ಜಿಲ್ಲೆಗಳಿಗೆ ಹರಿಸುತ್ತೇವೆಂದು ಹೇಳುವ ಮೂಲಕ ಪಶ್ಚಿಮಘಟ್ಟವನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಅವರು ವಿಷಾದಿಸಿದರು.

ಪಶ್ವಿಮಘಟ್ಟಗಳು ಉಳಿದರೆ ಮಾತ್ರ ನೇತ್ರಾವತಿ ನದಿ ಕಣಿವೆಗಳಲ್ಲಿ ಮಳೆ ನೀರು ಹರಿಯಲು ಸಾಧ್ಯ. ಆದರೆ, ಎತ್ತಿನಹೊಳೆ ಯೋಜನೆಯಡಿ ಪಶ್ಚಿಮಘಟ್ಟಗಳು ನಾಶ ಮಾಡಿದರೆ ಮಳೆಯೆ ಇಲ್ಲವಾಗಿ ಇಡೀ ರಾಜ್ಯದ ಜನತೆ ಬರಗಾಲಕ್ಕೆ ತುತ್ತಾಗಬೇಕಾಗುತ್ತದೆ. ಹೀಗಾಗಿ ರಾಜ್ಯ ಸರಕಾರ ಕೂಡಲೆ ಎತ್ತಿನಹೊಳೆ ಯೋಜನೆಯನ್ನು ಸ್ಥಗಿತಗೊಳಿಸುವುದೊಂದೆ ಪರಿಹಾರವೆಂದು ಅವರು ಹೇಳಿದರು.

ಕಾನೂನು ತಜ್ಞ ಕೆ.ಎನ್.ಸೋಮಶೇಖರ್ ಮಾತನಾಡಿ, ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ಕೆಲವು ಭ್ರಷ್ಟರು ಈ ಯೋಜನೆಯಡಿ ಹಣ ಮಾಡುವುದಕ್ಕೆ ಮಾತ್ರ ಸೀಮಿತವಾಗಿದೆ. ಈ ಯೋಜನೆಯಿಂದ ಬಯಲುಸೀಮೆಯ ಪ್ರದೇಶಕ್ಕೆ ನೀರು ಹರಿಸುತ್ತೇವೆಂದು ಹೇಳುತ್ತಿರುವುದು ಕೇವಲ ಕಟ್ಟುಕತೆಯಷ್ಟೆ ಎಂದು ಆರೋಪಿಸಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿಯಿಂದ ಈಗಾಗಲೆ ಪಶ್ಚಿಮಘಟ್ಟ ಸಮಸ್ಯೆಗೆ ಸಿಲುಕಿದ್ದು, ಜೀವ ವೈವಿಧ್ಯಗಳು ಅಪಾಯಕ್ಕೆ ಸಿಲುಕಿವೆ. ಹೀಗಾಗಿ ಜನಸಾಮಾನ್ಯರಿಗೆ, ಪರಿಸರಕ್ಕೆ ಹಾಗೂ ಜೀವ ಸಂಕುಲಕ್ಕೆ ಹಾನಿಯನ್ನುಂಟು ಮಾಡುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಈ ಕೂಡಲೆ ನಿಲ್ಲಿಸಬೇಕೆಂದು ಕಾನೂನು ಹೋರಾಟ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಮಾತನಾಡಿ, ಪಶ್ಚಿಮಘಟ್ಟ ಉಳಿಸಿ ಹೋರಾಟವನ್ನು ರಾಜಕೀಯ ವಿಷಯವಾಗಿ ರೂಪಿಸಬೇಕು. ಜನಪರ, ಪರಿಸರ ಪರವಾಗಿ ಚಿಂತಿಸುವ ಜನಪ್ರತಿನಿಧಿಗಳು, ಕಾನೂನು ತಜ್ಞರು, ಸಾಹಿತಿಗಳು, ರೈತ ಸಂಘಟನೆಗಳ ಹೋರಾಟಗಾರರನ್ನು ಒಳಗೊಂಡಂತೆ ದೊಡ್ಡ ಮಟ್ಟದ ಆಂದೋಲನ ಹಾಗೂ ಜನಜಾಗೃತಿಯಿಂದ ಪಶ್ಚಿಮಘಟ್ಟವನ್ನು ಉಳಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಈ ವೇಳೆ ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನೇತ್ರಾವತಿ ನದಿ ಕಣಿವೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ನಡೆಯುತ್ತಿರುವ ಮರಗಳ ನಾಶ, ಬೆಟ್ಟ, ಗುಡ್ಡಗಳನ್ನು ಕೊರೆದಿರುವುದನ್ನು ಛಾಯಾಚಿತ್ರಗಳ ಮೂಲಕ ವೀಕ್ಷಿಸಿ ಬೇಸರ ವ್ಯಕ್ತಪಡಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪರಿಸರವಾದಿ ದಿನೇಶ್ ಹೊಳ್ಳ, ನೀರಾವರಿ ತಜ್ಞ ನರಸಿಂಹಪ್ಪ, ಛಾಯಾಚಿತ್ರಗಾರ ಸುಧೀರ್ ಶೆಟ್ಟಿ ಮತ್ತಿತರರಿದ್ದರು.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ಕಪ್ಪತ್ತುಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಖಾಸಗಿ ಕಂಪೆನಿಗೆ ಒತ್ತೆ ಇಡಲಾಗಿತ್ತು, ಆದರೆ, ಇದರ ವಿರುದ್ಧ ಜನಾಂದೋಲನ ರೂಪಿತಗೊಂಡು ಅದನ್ನು ಉಳಿಸಿಕೊಳ್ಳಲಾಯಿತು, ಅದೇ ಮಾದರಿಯಲ್ಲಿ ಪಶ್ಚಿಮಘಟ್ಟ ಪ್ರದೇಶವನ್ನು ಉಳಿಸಿಕೊಳ್ಳಲು ಜನಾಂದೋಲನ ರೂಪಿಸಿಕೊಳ್ಳಬೇಕಾದ ಅಗತ್ಯವಿದೆ.

-ಎಸ್.ಆರ್.ಹಿರೇಮಠ, ಸಾಮಾಜಿಕ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X