Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಖಿನ್ನತೆ ನಿವಾರಕಗಳ ಸೇವನೆ ವೃದ್ಧರಲ್ಲಿ...

ಖಿನ್ನತೆ ನಿವಾರಕಗಳ ಸೇವನೆ ವೃದ್ಧರಲ್ಲಿ ಪೃಷ್ಠದ ಮೂಳೆಮುರಿತದ ಅಪಾಯವನ್ನು ಹೆಚ್ಚಿಸಬಹುದು

ವಾರ್ತಾಭಾರತಿವಾರ್ತಾಭಾರತಿ4 Jun 2019 10:21 PM IST
share
ಖಿನ್ನತೆ ನಿವಾರಕಗಳ ಸೇವನೆ ವೃದ್ಧರಲ್ಲಿ ಪೃಷ್ಠದ ಮೂಳೆಮುರಿತದ ಅಪಾಯವನ್ನು ಹೆಚ್ಚಿಸಬಹುದು

ವಯಸ್ಸಾದ ವ್ಯಕ್ತಿಗಳು ಆಗಾಗ್ಗೆ ಖಿನ್ನತೆಗೊಳಗಾಗುವುದು ಸಾಮಾನ್ಯ ಸಮಸ್ಯೆಯಾಗಿದ್ದು, 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಪ್ರಾಯದ ವ್ಯಕ್ತಿಗಳನ್ನು ಹೆಚ್ಚಾಗಿ ಕಾಡುತ್ತದೆ. ವೃದ್ಧರಲ್ಲಿ ಖಿನ್ನತೆಯು ಕಡೆಗಣಿಸುವ ವಿಷಯವಲ್ಲ. ಖಿನ್ನತೆಯಿಂದ ಪಾರಾಗಲು ಅವರಿಗೆ ಖಿನ್ನತೆ ನಿವಾರಕಗಳನ್ನು ನೀಡಲಾಗುತ್ತದೆ. ಆದರೆ ಖಿನ್ನತೆ ನಿವಾರಕಗಳ ಸೇವನೆಯು ಆರೋಗ್ಯಕ್ಕೆ ಹಾನಿಕರವಾಗಬಹುದು.

ಇತ್ತೀಚಿನ ಅಧ್ಯಯನವೊಂದು ಖಿನ್ನತೆ ನಿವಾರಕಗಳ ಅಡ್ಡ ಪರಿಣಾಮಗಳನ್ನು ವಿವರಿಸಿದೆ.

ಖಿನ್ನತೆ ನಿವಾರಕಗಳನ್ನು ಸೇವಿಸುವ ವಯಸ್ಸಾದ ವ್ಯಕ್ತಿಗಳು ಆಕಸ್ಮಿಕವಾಗಿ ಬಿದ್ದರೆ ಪೃಷ್ಠದ ಮೂಳೆ ಮುರಿತದ ಹೆಚ್ಚಿನ ಸಾಧ್ಯತೆಯಿರುತ್ತದೆ ಎಂದು ಅಧ್ಯಯನವು ತಿಳಿಸಿದೆ. ಮಾನಸಿಕ ಆರೋಗ್ಯವನ್ನು ಹೆಚ್ಚಿಸುವ ಹಲವಾರು ಔಷಧಿಗಳನ್ನು ಸೇವಿಸುವ ವಯಸ್ಸಾದವರು ಪೃಷ್ಠದ ಮೂಳೆ ಮುರಿತಕ್ಕೆ ಗುರಿಯಾಗುವ ಹೆಚ್ಚಿನ ಸಾಧ್ಯತೆಯನ್ನು ಎದುರಿಸುತ್ತಿರುತ್ತಾರೆ ಎಂದು ಅದು ಹೇಳಿದೆ. ಈ ಔಷಧಿಗಳನ್ನು ವಿವಿಧ ಮಾನಸಿಕ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಈ ಔಷಧಿಗಳು ಬುದ್ಧಿಮಾಂದ್ಯತೆಯಂತಹ ಸಮಸ್ಯೆಗಳ ಚಿಕಿತ್ಸೆಗೂ ಬಳಕೆಯಾಗುತ್ತವೆ.

ಖಿನ್ನತೆ ನಿವಾರಕಗಳು,ಔಷಧಿಯಾಗಿ ಬಳಕೆಯಾಗುವ ಅಮಲು ಪದಾರ್ಥಗಳು,ಆತಂಕ-ಉದ್ವೇಗವನ್ನು ನಿವಾರಿಸಲು ಬಳಕೆಯಾಗುವ ಬೆಂರೊಡಯಾಝೆಪಿನ್‌ಗಳು,ಸ್ಕಿರೆಫ್ರೇನಿಯಾ ಮತ್ತು ಬೈಪೋಲಾರ್ ಡಿಸಾರ್ಡರ್‌ಗೆ ಚಿಕಿತ್ಸೆ ನೀಡುವ ಆ್ಯಂಟಿಸೈಕೊಟಿಕ್‌ಗಳು ಪೃಷ್ಠದ ಮೂಳೆ ಮುರಿತದ ಅಪಾಯವನ್ನು ಹೆಚ್ಚಿಸುತ್ತವೆ ಎಂದು ಯುನಿವರ್ಸಿಟಿ ಆಫ್ ಸೌಥ್ ಆಸ್ಟ್ರೇಲಿಯಾ ನಡೆಸಿದ ಅಧ್ಯಯನವು ಬೆಟ್ಟು ಮಾಡಿದೆ. ಅಧ್ಯಯನ ವರದಿಯು ಆಸ್ಟ್ರೇಲಿಯನ್ ಪ್ರಿಸ್ಕೈಬರ್ ಜರ್ನಲ್‌ನಲ್ಲಿ ಪ್ರಕಟಗೊಂಡಿದೆ.

ಈ ಔಷಧಿಗಳನ್ನು ಜಂಟಿಯಾಗಿ ಸೇವಿಸಿದರೆ ಅಪಾಯವು ಇನ್ನಷ್ಟು ಹೆಚ್ಚುತ್ತದೆ. ಖಿನ್ನತೆ ನಿವಾರಕಗಳು ಮತ್ತು ಆತಂಕ ಶಮನದ ಔಷಧಿಗಳನ್ನು ಒಟ್ಟಾಗಿ ಸೇವಿಸುತ್ತಿದ್ದರೆ ಈ ಅಪಾಯವು ಐದು ಪಟ್ಟುಗಳವರೆಗೆ ಹೆಚ್ಚುತ್ತದೆ ಎನ್ನುತ್ತದೆ ವರದಿ.

 ಕಡಿಮೆ ಪ್ರಮಾಣದಲ್ಲಿ ಇಂತಹ ಔಷಧಿಗಳ ಸೇವನೆ,ಹೆಚ್ಚಿನ ವ್ಯಾಯಾಮ ಅಥವಾ ವೃತ್ತಿಪರ ಮಾನಸಿಕ ಚಿಕಿತ್ಸೆಯಂತಹ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನೂ ಅಧ್ಯಯನವು ಸೂಚಿಸಿದೆ.

ವಯಸ್ಸಾದ ವ್ಯಕ್ತಿಗಳಲ್ಲಿ ಖಿನ್ನತೆಯನ್ನು ನೈಸರ್ಗಿಕವಾಗಿಯೂ ನಿರ್ವಹಿಸಬಹುದಾಗಿದ್ದು,ಇದರಿಂದ ಖಿನ್ನತೆ ನಿವಾರಕದ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಬಹುದು. ನಿಯಮಿತವಾಗಿ ಲಘು ವ್ಯಾಯಾಮ,ಜನರೊಂದಿಗೆ ಸಂವಾದಕ್ಕೆ ಅವಕಾಶ ಕಲ್ಪಿಸುವ ಕ್ಲಬ್ ಅಥವಾ ಗುಂಪಿಗೆ ಸೇರಿಕೊಳ್ಳುವುದು,ತಮ್ಮ ನೆಚ್ಚಿನ ಸಂಗೀತವನ್ನು ಆಲಿಸುವುದು ಅಥವಾ ಚಲನಚಿತ್ರವನ್ನು ವೀಕ್ಷಿಸುವುದು,ಮೊಮ್ಮಕ್ಕಳು ಅಥವಾ ಸಾಕುಪ್ರಾಣಿಗಳೊಂದಿಗೆ ಸಮಯ ಕಳೆಯುವುದು ಇವೆಲ್ಲ ಇಂತಹ ಕ್ರಮಗಳಲ್ಲಿ ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X