Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅವಧಿಗೆ ಮುನ್ನವೇ ಬಿಬಿಎಂಪಿಯಲ್ಲಿ...

ಅವಧಿಗೆ ಮುನ್ನವೇ ಬಿಬಿಎಂಪಿಯಲ್ಲಿ ಗರಿಗೆದರಿದ ರಾಜಕೀಯ ಲೆಕ್ಕಾಚಾರ !

ವಾರ್ತಾಭಾರತಿವಾರ್ತಾಭಾರತಿ4 Jun 2019 10:39 PM IST
share
ಅವಧಿಗೆ ಮುನ್ನವೇ ಬಿಬಿಎಂಪಿಯಲ್ಲಿ ಗರಿಗೆದರಿದ ರಾಜಕೀಯ ಲೆಕ್ಕಾಚಾರ !

ಬೆಂಗಳೂರು, ಜೂ.4: ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿಯಿದ್ದು, ಪಾಲಿಕೆಯಲ್ಲಿ ಇಂದಿನಿಂದಲೇ ಮುಂದಿನ ಅವಧಿಗೆ ಅಧಿಕಾರ ಹಿಡಿಯಲು ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ರಾಜಕೀಯ ಲೆಕ್ಕಾಚಾರ ಗರಿಗೆದರಿದೆ.

ಕಳೆದ ವಾರದಲ್ಲಿ ನಡೆದ ಬಿಬಿಎಂಪಿ ಉಪಚುನಾವಣೆಯಲ್ಲಿ ಬಿಜೆಪಿ ಒಂದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಒಂದು ಸ್ಥಾನದಲ್ಲಿ ಗೆದ್ದಿವೆ. ಅಲ್ಲದೆ, ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಗೆಲುವು ಸಾಧಿಸಿದ್ದು, ಇದೀಗ ಬಿಜೆಪಿಗೆ ಎರಡು ಸ್ಥಾನಗಳು ಹೆಚ್ಚಿವೆ. ಬಿಜೆಪಿಗೆ ಒಂದಂಕಿ ಹೆಚ್ಚಿದ್ದರೆ, ಮೈತ್ರಿ ಪಕ್ಷಗಳಿಗೆ ಒಂದಂಕಿ ಕುಸಿದಿದೆ. ಹೀಗಾಗಿ, ಪಾಲಿಕೆಯಲ್ಲಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಹಲವು ರೀತಿಯಲ್ಲಿ ಕಸರತ್ತು ನಡೆಸುತ್ತಿದೆ.

ಪ್ರಸ್ತುತ ಮೇಯರ್ ಮತ್ತು ಉಪಮೇಯರ್ ಮತದಾರರ ಪಟ್ಟಿಯಲ್ಲಿ 262 ಮಂದಿ ಮತದಾರರಿದ್ದು, 132 ಮ್ಯಾಜಿಕ್ ಸಂಖ್ಯೆಯಾಗಿದೆ. ಬಿಜೆಪಿಯಲ್ಲಿ ಬಿಬಿಎಂಪಿ ಸದಸ್ಯರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಸೇರಿ 125 ಮತದಾರರಿದ್ದಾರೆ. ಇನ್ನು ಉಳಿದ 7 ಮತಗಳು ಹೊಂದಿಸಲು ಬಿಜೆಪಿ ಹಲವು ರೀತಿಯಲ್ಲಿ ಪ್ರಯತ್ನಕ್ಕೆ ಮುಂದಾಗಿದ್ದು, ಇದರ ನಡುವೆ ಆಪರೇಷನ್ ಕಮಲ ನಡೆಸಲು ತಂತ್ರ ರೂಪಿಸಿದೆ ಎನ್ನಲಾಗಿದೆ.

ಬಿಬಿಎಂಪಿಯಲ್ಲಿ ಮೈತ್ರಿ ಪಕ್ಷಗಳ ವಿರುದ್ಧ ಅಸಮಾಧಾನಗೊಂಡಿರುವ ಜೆಡಿಎಸ್ ಸದಸ್ಯರಾದ ಮಂಜುಳಾ ನಾರಾಯಣಸ್ವಾಮಿ ಹಾಗೂ ದೇವದಾಸ್ ಬಿಜೆಪಿ ಜತೆಗೆ ಗುರುತಿಸಿಕೊಳ್ಳುತ್ತಿದ್ದಾರೆ. ಮೇಯರ್ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ವಿರುದ್ಧವಾಗಿ ಮತ ಹಾಕಬಹುದು ಎಂದು ಅಂದಾಜಿಸಲಾಗಿದೆ.

ಇನ್ನುಳಿದಂತೆ ಪಾಲಿಕೆಯಲ್ಲಿ ಅತೃಪ್ತ ಸದಸ್ಯರನ್ನು ಸೆಳೆಯಲು ಬಿಜೆಪಿ ತಂತ್ರಗಾರಿಕೆ ರೂಪಿಸಿದ್ದು, ಹಿಂಬಾಗಿಲಿನಿಂದ ಕೆಲಸವನ್ನೂ ಆರಂಭಿಸಿದೆ. ಅಲ್ಲದೆ, ಈ ಬಾರಿಯ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಪಕ್ಷೇತರ ಸದಸ್ಯರ ಪಾತ್ರ ನಿರ್ಣಾಯಕವಾಗಿರಲಿದ್ದು, ಬಿಜೆಪಿಯು ಅವರನ್ನು ಸೆಳೆಯಲು ಈಗಾಗಲೇ ಕಾರ್ಯರೂಪಕ್ಕಿಳಿದಿದೆ ಎನ್ನಲಾಗಿದೆ.

ಬಿಜೆಪಿಯು ಎಷ್ಟೇ ರೀತಿಯಲ್ಲಿ ಅಧಿಕಾರ ಹಿಡಿಯಲು ಮುಂದಾದರೂ ಅದು ಫಲ ನೀಡುವುದಿಲ್ಲ. ಅವರ ಆಪರೇಷನ್ ಕಮಲ ಇಲ್ಲಿ ಕೂಡಿಬರುವುದಿಲ್ಲ. ನಾಲ್ಕು ಬಾರಿಯಂತೆ ಈ ಬಾರಿಯೂ ಮೈತ್ರಿ ಪಕ್ಷಗಳಿಗೆ ಅಧಿಕಾರ ಸಿಗುತ್ತದೆ. ನಮ್ಮವರೇ ಬಿಬಿಎಂಪಿಯಲ್ಲಿ ಮೇಯರ್ ಹಾಗೂ ಉಪ ಮೇಯರ್ ಆಗಲಿದ್ದಾರೆ.

-ಎಂ.ಶಿವರಾಜು, ಮಾಜಿ ಆಡಳಿತ ಪಕ್ಷದ ನಾಯಕ

ಒಟ್ಟು ಮತದಾರರು: 262

ಮ್ಯಾಜಿಕ್ ನಂಬರ್: 132

ಕಾಂಗ್ರೆಸ್: ಬಿಬಿಎಂಪಿ ಸದಸ್ಯರು: 76

ಲೋಕಸಭಾ ಸದಸ್ಯರು: 1

ರಾಜ್ಯಸಭಾ ಸದಸ್ಯರು: 6

ಶಾಸಕರು: 15

ವಿಧಾನಪರಿಷತ್ ಸದಸ್ಯರು: 10

ಒಟ್ಟು: 108

ಜೆಡಿಎಸ್: ಬಿಬಿಎಂಪಿ ಸದಸ್ಯರು: 14

ಲೋಕಸಭಾ ಸದಸ್ಯರು: 00

ರಾಜ್ಯಸಭಾ ಸದಸ್ಯರು: 1

ಶಾಸಕರು: 2

ವಿಧಾನಪರಿಷತ್ ಸದಸ್ಯರು: 5

ಒಟ್ಟು: 22

ಬಿಜೆಪಿ: ಬಿಬಿಎಂಪಿ ಸದಸ್ಯರು: 101

ಲೋಕಸಭಾ ಸದಸ್ಯರು: 4

ರಾಜ್ಯಸಭಾ ಸದಸ್ಯರು: 2

ಶಾಸಕರು: 11

ವಿಧಾನಪರಿಷತ್ ಸದಸ್ಯರು: 7

ಒಟ್ಟು: 125

ಪಕ್ಷೇತರ ಸದಸ್ಯರು: 07

share
ವಾರ್ತಾಭಾರತಿ
ವಾರ್ತಾಭಾರತಿ
Next Story
X