Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಾಂಜ್ ಬಂಧನ ಮನವಿ ತಿರಸ್ಕರಿಸಿದ...

ಅಸಾಂಜ್ ಬಂಧನ ಮನವಿ ತಿರಸ್ಕರಿಸಿದ ಸ್ವೀಡನ್ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ4 Jun 2019 10:42 PM IST
share
ಅಸಾಂಜ್ ಬಂಧನ ಮನವಿ ತಿರಸ್ಕರಿಸಿದ ಸ್ವೀಡನ್ ನ್ಯಾಯಾಲಯ

ಸ್ಟಾಕ್‌ಹೋಮ್ (ಸ್ವೀಡನ್), ಜೂ. 4: 2010ರ ಅತ್ಯಾಚಾರ ಪ್ರಕರಣವೊಂದರಲ್ಲಿ ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್‌ರನ್ನು ಓರ್ವ ಶಂಕಿತ ಎಂಬುದಾಗಿ ತಾನು ಪರಿಗಣಿಸಿರುವುದಾಗಿ ಸ್ವೀಡನ್‌ನ ನ್ಯಾಯಾಲಯವೊಂದು ಸೋಮವಾರ ಹೇಳಿದೆ. ಆದರೆ, ಅವರ ಬಂಧನಕ್ಕೆ ಆದೇಶ ಹೊರಡಿಸಬೇಕೆಂಬ ಪ್ರಾಸಿಕ್ಯೂಟರ್ ಮನವಿಯನ್ನು ತಿರಸ್ಕರಿಸಿದೆ.

ಇದರೊಂದಿಗೆ, ಅಸಾಂಜ್‌ರನ್ನು ಕ್ಷಿಪ್ರವಾಗಿ ಬ್ರಿಟನ್‌ನಿಂದ ಸ್ವೀಡನ್‌ಗೆ ಗಡಿಪಾರು ಮಾಡಿಸಿಕೊಳ್ಳುವ ಪ್ರಾಸಿಕ್ಯೂಟರ್ ಉತ್ಸಾಹಕ್ಕೆ ತಣ್ಣೀರೆರಚಿದಂತಾಗಿದೆ.

ಪ್ರಸಕ್ತ ಅಸಾಂಜ್ ಬ್ರಿಟನ್‌ನ ಜೈಲಿನಲ್ಲಿ ಇರುವುದರಿಂದ, ಅವರನ್ನು ಪ್ರಶ್ನಿಸುವುದಕ್ಕಾಗಿ ಔಪಚಾರಿಕವಾಗಿ ಸ್ವೀಡನ್ ‌ನಲ್ಲಿ ಬಂಧಿಸಬೇಕಾದ ಅಗತ್ಯವಿಲ್ಲ ಎಂದು ಅಪ್ಸಲ ಜಿಲ್ಲಾ ನ್ಯಾಯಾಲಯವು ಹೇಳಿದೆ.

‘‘ಜೂಲಿಯನ್ ಅಸಾಂಜ್ ಪ್ರಸಕ್ತ ಜೈಲಿನಲ್ಲಿರುವುದರಿಂದ, ಯುರೋಪಿಯನ್ ತನಿಖಾ ಆದೇಶವೊಂದರ ಸಹಾಯದಿಂದ ತನಿಖೆ ಮುಂದುವರಿಯಬಹುದಾಗಿದೆ. ಇದಕ್ಕೆ ಜೂಲಿಯನ್ ಅಸಾಂಜ್‌ ರನ್ನು ಸ್ವೀಡನ್‌ ನಲ್ಲಿ ಬಂಧಿಸಬೇಕಾದ ಅಗತ್ಯವಿಲ್ಲ. ಹಾಗಾಗಿ, ಜೂಲಿಯನ್ ಅಸಾಂಜ್‌ ರನ್ನು ಬಂಧಿಸುವುದು ಸರಿಯಾದ ಕ್ರಮವೆಂದು ನ್ಯಾಯಾಲಯ ಭಾವಿಸುವುದಿಲ್ಲ’’ ಎಂದು ಹೇಳಿಕೆಯೊಂದರಲ್ಲಿ ನ್ಯಾಯಾಲಯ ತಿಳಿಸಿದೆ.

ಅಮೆರಿಕದ ಹಲವು ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸುವ ಮೂಲಕ ಆ ದೇಶದ ಆಕ್ರೋಶಕ್ಕೆ ತುತ್ತಾಗಿರುವ ಆಸ್ಟ್ರೇಲಿಯ ಪ್ರಜೆ ಅಸಾಂಜ್ 7 ವರ್ಷಗಳ ಕಾಲ ಲಂಡನ್‌ನಲ್ಲಿರುವ ಇಕ್ವೆಡಾರ್‌ನ ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆದಿದ್ದರು. ಎಪ್ರಿಲ್ 11ರಂದು ಇಕ್ವೆಡಾರ್ ಆಶ್ರಯವನ್ನು ಹಿಂದಕ್ಕೆ ಪಡೆದುಕೊಂಡ ಬಳಿಕ, ಲಂಡನ್ ಪೊಲೀಸರು ಅಸಾಂಜ್ ರನ್ನು ಬಂಧಿಸಿದರು. ಜಾಮೀನು ಶರತ್ತುಗಳನ್ನು ಉಲ್ಲಂಘಿಸಿದ ಆರೋಪವನ್ನು ಅಸಾಂಜ್ ಹೊಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X