Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೂಳು ತೆರವಿನಿಂದ ನೇತ್ರಾವತಿಯಲ್ಲಿ ಹರಿದ...

ಹೂಳು ತೆರವಿನಿಂದ ನೇತ್ರಾವತಿಯಲ್ಲಿ ಹರಿದ ನೀರು !

ಜಕ್ರಿಬೆಟ್ಟುವಿನಿಂದ ಹೆಚ್ಚುವರಿ ನೀರು ತುಂಬೆ ಡ್ಯಾಂಗೆ ಹರಿವು

ವಾರ್ತಾಭಾರತಿವಾರ್ತಾಭಾರತಿ7 Jun 2019 10:39 PM IST
share
ಹೂಳು ತೆರವಿನಿಂದ ನೇತ್ರಾವತಿಯಲ್ಲಿ ಹರಿದ ನೀರು !

ಬಂಟ್ವಾಳ, ಜೂ. 7: ಪುರಸಭಾ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ದೆಸೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಅವಿರತ ಶ್ರಮದಿಂದಾಗಿ ನೇತ್ರಾವತಿಯಲ್ಲಿ ಸಾಕಷ್ಟು ನೀರು ಹರಿಯಲಾರಂಭಿಸಿದ್ದು, ಶುಕ್ರವಾರ ಸಂಜೆ ಹೆಚ್ಚುವರಿ ನೀರನ್ನು ತುಂಬೆ ಡ್ಯಾಂನತ್ತ ಬಿಡಲಾಯಿತು.

ಇದರಿಂದಾಗಿ ಬಂಟ್ವಾಳ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರು ನಿಟ್ಟುಸಿರು ಬಿಡುವಂತಾಗಿದೆ. ಶುಕ್ರವಾರ ಬೆಳಿಗ್ಗೆಯಿಂದ ತುಂಬೆ ಡ್ಯಾಂನಲ್ಲಿ 2.34 ಮೀ. ನೀರು ಇದ್ದು, ಮಂಗಳೂರಿಗೆ ನೀರು ಪೂರೈಕೆ ಹಿನ್ನಲೆಯಲ್ಲಿ ಪಂಪಿಂಗ್ ಕಾರ್ಯ ನಡೆದರೂ ಸಂಜೆ 6ಗಂಟೆಯ ವೇಳೆಗೆ ತುಂಬೆ ಡ್ಯಾಂನಲ್ಲಿ ಯಥಾಸ್ತಿತಿಯಲ್ಲಿತ್ತು.

ನೆಕ್ಕಿಲಾಡಿ ಡ್ಯಾಂನಿಂದ ಹೆಚ್ಚುವರಿ ನೀರು ಹರಿದುಬಂದು ಎಂಆರ್‍ಪಿಎಲ್ ಡ್ಯಾಂನ ಅಲ್ಲಲ್ಲಿ ಶೇಖರಣೆಯಾಗಿತ್ತು. ನಾಲ್ಕು ದಿನಗಳ ಹಿಂದೆ ಶಾಸಕ ರಾಜೇಶ್ ನಾಯ್ಕ್ ಮತ್ತು ಅಧಿಕಾರಿಗಳ ತಂಡ ಎಂಆರ್‍ಪಿಎಲ್ ಡ್ಯಾಂಗೆ ತೆರಳಿ ನೀರಿನ ಮಟ್ಟವನ್ನು ಪರಿಶೀಲಿಸಿದಾಗ ಹೂಳು ತುಂಬಿ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿತ್ತು. ಕಳೆದ 2 ದಿನಗಳಿಂದ ಶಾಸಕರ ನೇತೃತ್ವದಲ್ಲಿ ಪುರಸಭಾ ಸದಸ್ಯ ಗೋವಿಂದ ಪ್ರಭು ಅವರು ಮುತುವರ್ಜಿ ವಹಿಸಿ, ಡ್ಯಾಂನ ಗೇಟ್ ಮತ್ತು ಪರಿಸರದಲ್ಲಿ ತುಂಬಿದ್ದ ಹೂಳನ್ನು ತೆರವುಗೊಳಿಸಿದ ಪರಿಣಾಮ ನೀರು ಕೊಂಚ ಹರಿಯಲಾರಂಬಿಸಿ ಶುಕ್ರವಾರ ಜಕ್ರಿಬೆಟ್ಟುವಿನಲ್ಲಿರುವ ಇಂಟೆಕ್‍ವೆಲ್‍ನಲ್ಲಿ ನೀರು ಶೇಖರಣೆಯಾಗಿದೆ. ಸಂಜೆ ನೀರಿನ ಒಳ ಹರಿವು ಹೆಚ್ಚಾದರಿಂದ ಈ ಮೊದಲು ಇಂಟೆಕ್‍ವೆಲ್ ಸಮೀಪ ಕಟ್ಟಿದ್ದ ಕಟ್ಟವನ್ನು ತೆರವು ಮಾಡಿ ಹೆಚ್ಚುವರಿ ನೀರನ್ನು ತುಂಬೆ ಡ್ಯಾಂನತ್ತ ಹರಿಯಬಿಡಲಾಯಿತು.

ಶಾಸಕರಿಂದ ವೀಕ್ಷಣೆ

ಈ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯಕ್ ಶುಕ್ರವಾರ ಸಂಜೆ ಜಕ್ರಿಬೆಟ್ಟುವಿನ ಇಂಟಕ್‍ವೆಲ್‍ಗೆ ಭೇಟಿ ಪಂಪಿಂಗ್ ವ್ಯವಸ್ಥೆಯನ್ನು ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಸರಪಾಡಿ ಎಂಆರ್‍ಪಿಎಲ್ ಡ್ಯಾಂ ಬಳಿ ಡ್ರೆಜ್ಜಿಂಗ್ ಮೆಷಿನ್ ಬಳಸಿ ಹೂಳು ಮೇಲೆತ್ತುತಿದ್ದಂತೆ ಅಲ್ಲಲ್ಲಿ ಶೇಖರಣೆಯಾಗಿದ್ದ ನೀರು ಜಕ್ರಿಬೆಟ್ಟುವಿನ ಜಾಕ್‍ವೆಲ್‍ನಲ್ಲಿ ತುಂಬಿ ಕೊಂಡಿದೆ. ಮೊನ್ನೆ ರಾತ್ರಿ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರು ತುಂಬಲು ಸಾಧ್ಯವಿಲ್ಲ. ಡ್ರಜ್ಜಿಂಗ್ ಮೂಲಕ ಗೋವಿಂದ ಪ್ರಭು ಅವರ ಸತತ ಪ್ರಯತ್ನದಿಂದ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಬಂದಿದೆ.

ಇಲ್ಲಿನ ಕಟ್ಟದಲ್ಲಿ ಸಂಗ್ರಹಿಸಿಟ್ಟಿದ್ದ ಹೆಚ್ಚುವರಿ ನೀರನ್ನು ಮಂಗಳೂರಿನ ನಾಗರಿಕರು ಕೂಡಾ ಬಳಸಿಕೊಳ್ಳುವ ನಿಟ್ಟಿನಲ್ಲಿ ತುಂಬೆ ಡ್ಯಾಂನತ್ತ ಹರಿಯಲು ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಸದ್ಯಕ್ಕೆ ಬಂಟ್ವಾಳದ ನಾಗರಿಕರಿಗರ ನೀರಿನ ಅಭಾವವಿಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಆದರೂ, ಜನರು ನೀರಿನ ಅಗತ್ಯತೆಯನ್ನು ತಿಳಿದುಕೊಂಡು ಮಿತವಾಗಿ ಬಳಸುವಂತೆ ಮನವಿ ಮಾಡಿಕೊಂಡರು.

ಶಾಸಕರಿಂದ ಶ್ಲಾಘನೆ: ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಗೋವಿಂದ ಪ್ರಭು ಅವರು ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹಗಲು-ರಾತ್ರಿ ಅವಿರತವಾಗಿ ಶ್ರಮಿಸಿ, ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಾಥ್ ನೀಡಿದ್ದು, ಇವರ ಈ ಕಾರ್ಯಕ್ಕೆ ಪುರವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಗೋವಿಂದ ಪ್ರಭು, ಮಾಜಿ ಸದಸ್ಯ ದೇವದಾಸ್ ಶೆಟ್ಟಿ, ಸರಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ದನಂಜಯ್ ಶೆಟ್ಟಿ, ಸಂತೋಷ್ ರಾಯಿಬೆಟ್ಟು, ಸುದರ್ಶನ ಬಜ, ಅಭಿಷೇಕ್ ರೈ, ಕಾರ್ತಿಕ್ ಬಲ್ಲಾಳ್, ಪುರುಷೋತ್ತಮ ಶೆಟ್ಟಿ, ಜೋಕಿಂ ಡಿಸೋಜ, ಶಿವರಾಮ ಶೆಟ್ಟಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X