Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ದಿ ಕ್ವಿಂಟ್’ ಸಂಪಾದಕ ರಾಘವ ಬಹ್ಲ್...

‘ದಿ ಕ್ವಿಂಟ್’ ಸಂಪಾದಕ ರಾಘವ ಬಹ್ಲ್ ವಿರುದ್ಧ ಅಕ್ರಮ ಹಣ ವಹಿವಾಟು ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Jun 2019 6:12 PM IST
share
‘ದಿ ಕ್ವಿಂಟ್’ ಸಂಪಾದಕ ರಾಘವ ಬಹ್ಲ್ ವಿರುದ್ಧ ಅಕ್ರಮ ಹಣ ವಹಿವಾಟು ಪ್ರಕರಣ ದಾಖಲು

 ಹೊಸದಿಲ್ಲಿ,ಜೂ.8: ಜಾರಿ ನಿರ್ದೇಶನಾಲಯ (ಈ.ಡಿ.)ವು ಮಾಧ್ಯಮ ಉದ್ಯಮಿ ರಾಘವ ಬಹ್ಲ್ ವಿರುದ್ಧ ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಲಂಡನ್‌ನಲ್ಲಿ ಆಸ್ತಿ ಖರೀದಿಗೆ ಬಳಕೆಯಾಗಿದ್ದ ಸುಮಾರು 2.45 ಕೋ.ರೂ.ಗಳನ್ನು ಬಹಿರಂಗಗೊಳಿಸದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಯು ಬಹ್ಲ್ ವಿರುದ್ಧ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಈ ಪ್ರಕರಣವು ಆಧರಿಸಿದೆ. ಬಹ್ಲ್ ಒಡೆತನದ ಕ್ವಿಂಟಿಲಿಯನ್ ಮೀಡಿಯಾವು ಸುದ್ದಿ ಜಾಲತಾಣ ‘ದಿ ಕ್ವಿಂಟ್’ ಅನ್ನು ನಡೆಸುತ್ತಿದೆ. ಕಳೆದ ವಾರ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿ ಪತ್ರಿಕಾ ಹೇಳಿಕೆಯೊಂದನ್ನು ಹೊರಡಿಸಿದ್ದ ಬಹ್ಲ್ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದಿದ್ದು, ಎಲ್ಲ ತೆರಿಗೆಗಳನ್ನು ಪ್ರಾಮಾಣಿಕವಾಗಿ ಮತ್ತು ಶ್ರದ್ಧೆಯಿಂದ ಪಾವತಿಸಿದ್ದರೂ,ಯಾವುದೇ ತಪ್ಪು ಮಾಡಿರದಿದ್ದರೂ ತನ್ನನ್ನು ಬೇಟೆಯಾಡುತ್ತಿರುವಂತೆ ಭಾಸವಾಗುತ್ತಿದೆ. ಅಲ್ಲದೆ ತಾನು ಅಥವಾ ತನ್ನ ಉದ್ಯಮಗಳು ಯಾವುದೇ ಸಾಲ ಬಾಕಿಯನ್ನು ಉಳಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಲಂಡನ್‌ನಲ್ಲಿ ಆಸ್ತಿ ಖರೀದಿಸಲು ಪಾವತಿಸಿದ್ದ 2.73 ಲಕ್ಷ ಪೌಂಡ್ ಹಣಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನು 2019,ಮೇ 13ರಷ್ಟು ಹಿಂದೆಯೇ ತಾನು ತನ್ನ ಅಧಿಕೃತ ಪ್ರತಿನಿಧಿಯ ಮೂಲಕ ಒದಗಿಸಿದ್ದೇನೆ. ಈ ಹಣ ಪಾವತಿಯ ಕುರಿತು ಮಾಹಿತಿಯನ್ನು ಬಹಿರಂಗಗೊಳಿಸುವಲ್ಲಿ ವಿಫಲನಾಗಿದ್ದೇನೆ ಎಂದು ತೆರಿಗೆ ಇಲಾಖೆಯು ಹೇಳಿದ ಬಳಿಕ ಈ ವಿವರಗಳನ್ನು ತಾನು ಸ್ಪಷ್ಟಪಡಿಸಿದ್ದೇನೆ. ಮೇ 1ರಂದು ತನಗೆ ಅವರು ಜಾರಿಗೊಳಿಸಿದ್ದ ಎರಡು ಶೋಕಾಸ್ ನೋಟಿಸ್‌ಗಳಲ್ಲಿ ಈ ಹಣವನ್ನು ಕಪ್ಪುಹಣವೆಂದು ಅವರು ಉಲ್ಲೇಖಿಸಿದ್ದರು ಎಂದಿದ್ದಾರೆ.

ತಾನು ಮತ್ತು ತನ್ನ ಪತ್ನಿ ರಿತು ಕಪೂರ್ ತಮ್ಮ ಆದಾಯ ತೆರಿಗೆ ರಿಟರ್ನ್‌ಗಳಲ್ಲಿ ಎಲ್ಲ ವಿವರಗಳನ್ನು ಬಹಿರಂಗಗೊಳಿಸಿದ್ದೇವೆ ಮತ್ತು ತಾನೀಗಾಗಲೇ ಶೋಕಾಸ್ ನೋಟಿಸ್‌ಗಳನ್ನು ಮತ್ತು ನಂತರದ ಕ್ರಮಗಳನ್ನು ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೇನೆ ಎಂದು ಪತ್ರದಲ್ಲಿ ಬರೆದಿರುವ ಅವರು,ಕೇವಲ ತನ್ನೊಬ್ಬನ ಪರವಾಗಿ ಹಸ್ತಕ್ಷೇಪ ಕೋರಿ ತಾನು ಈ ಪತ್ರವನ್ನು ಬರೆಯುತ್ತಿಲ್ಲ,ಅಕ್ರಮ ಹಣ ವಹಿವಾಟುದಾರರು ಮತ್ತು ಕಪ್ಪುಹಣದ ಖದೀಮರನ್ನು ಪತ್ತೆ ಹಚ್ಚುವ ಅಭಿಯಾನವು ಅಮಾಯಕರನ್ನು ಬೇಟೆಯಾಡಲು ಬಳಕೆಯಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ ಎಂದಿದ್ದಾರೆ.

 ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಬಹ್ಲ್ ಅವರ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಲೇಖನವೊಂದನ್ನು ಪ್ರಕಟಿಸಿದ್ದ ಕ್ವಿಂಟ್, ಈ ದಾಳಿ ಸಮೀಕ್ಷೆಯೋ ಶೋಧ ಕಾರ್ಯಾಚರಣೆಯೋ ಎನ್ನುವುದನ್ನು ಖಚಿತಪಡಿಸಲು ಆದಾಯ ತೆರಿಗೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಇದು ಖಂಡಿತ ವಿಶ್ವಾಸವನ್ನು ಮೂಡಿಸುವುದಿಲ್ಲ ಮತ್ತು ಭಿನ್ನ ಉದ್ದೇಶಕ್ಕಾಗಿ ದಾಳಿ ನಡೆದಿದೆ ಹಾಗೂ ಭಿನ್ನಾಭಿಪ್ರಾಯದ ಧ್ವನಿಗಳನ್ನು ಉಡುಗಿಸುವ ಒಟ್ಟಾರೆ ಸಂದೇಶದ ಭಾಗವಾಗಿದೆ ಎಂಬ ಪ್ರಾಮಾಣಿಕ ಶಂಕೆಗಳನ್ನುಂಟು ಮಾಡಿದೆ ಎಂದು ಬರೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X