ಸಿಎಂ ಗ್ರಾಮ ವಾಸ್ತವ್ಯ: ಅಫ್ಜಲ್ಪುರದ ಹೆರೂರು ಗ್ರಾಮಕ್ಕೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ
ಕಲಬುರಗಿ, ಜೂ. 9: ಮುಖ್ಯಮಂತ್ರಿ ಕುಮಾರಸ್ವಾಮಿ ಜೂ.22ಕ್ಕೆ ಗ್ರಾಮ ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಂಡಿರುವ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಹೆರೂರು(ಬಿ) ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರವಿವಾರ ಸ್ಥಳೀಯ ಅಧಿಕಾರಿಗಳೊಂದಿಗೆ ಹೆರೂರು ಗ್ರಾಮದ ಸರಕಾರಿ ಶಾಲೆಗೆ ಖುದ್ದು ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ, ಸಿಎಂ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮ, ಭದ್ರತೆ ಸೇರಿದಂತೆ ಇನ್ನಿತರ ವ್ಯವಸ್ಥೆ ಹಾಗೂ ಸಿದ್ದತೆ ಸಂಬಂಧ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಂ.ವೈ.ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ್ ಸೇರಿದಂತೆ ಮತ್ತಿತರಿದ್ದರು.
Next Story