Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇದ್ದರೂ...

ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇದ್ದರೂ ಕರಾಟೆಯಲ್ಲಿ ಚಿನ್ನದ ಬೇಟೆ: ದೇಶಕ್ಕೆ ಕೀರ್ತಿ ತಂದ ಕೋಲಾರದ ‘ಕೌಸರ್’

-ಸಮೀರ್ ದಳಸನೂರು-ಸಮೀರ್ ದಳಸನೂರು9 Jun 2019 10:06 PM IST
share
ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇದ್ದರೂ ಕರಾಟೆಯಲ್ಲಿ ಚಿನ್ನದ ಬೇಟೆ: ದೇಶಕ್ಕೆ ಕೀರ್ತಿ ತಂದ ಕೋಲಾರದ ‘ಕೌಸರ್’

ಬೆಂಗಳೂರು, ಜೂ.9: ಕ್ರೀಡಾಪಟಗಳು ಕೆಲವೊಮ್ಮೆ ಅನಾರೋಗ್ಯಕ್ಕೆ ಗುರಿಯಾದರೆ, ಕ್ರೀಡೆಯನ್ನು ತೊರೆಯುವ ಸಾಧ್ಯತೆಗಳೇ ಹೆಚ್ಚು. ಆದರೆ, ಕೆಲ ಕ್ರೀಡಾಪಟುಗಳು ಅಂಥ ನ್ಯೂನತೆಯನ್ನು ಮೆಟ್ಟಿ ನಿಂತು ಸಾಧನೆ ಶಿಖರವೇರಿದ ಉದಾಹರಣೆಗಳು ನಮ್ಮಲ್ಲಿ ಸಾಕಷ್ಟಿವೆ. ಅಂಥವರ ಸಾಲಿಗೆ ಕೋಲಾರ ಜಿಲ್ಲೆಯ ‘ರುಮಾನಾ ಕೌಸರ್’ ಸೇರಿದ್ದಾರೆ.

ಹೌದು.., ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಿಕೊಂಡು, ಚಿಕಿತ್ಸೆಗೆ ಒಳಗಾದರೂ, ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸುವುದರ ಮೂಲಕ ಕೋಲಾರದ ಶ್ರೀನಿವಾಸಪುರ ತಾಲೂಕಿನ ಎಸ್.ವಿ.ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ರುಮಾನಾ ಕೌಸರ್ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಮೂಲಕ ಇತರ ಕ್ರೀಡಾ ಪಟುಗಳ ಆತ್ಮಸ್ಥೈರ್ಯವನ್ನು ಇಮ್ಮಡಿಗೊಳಿಸಿದ್ದಾರೆ. ರುಮಾನಾ ಅವರ ತಂದೆ ರಷೀದ್ ಅಹ್ಮದ್ ಆಟೊ ಚಾಲಕರಾದರೆ, ತಾಯಿ ಶಬಾನಾ ಗೃಹಿಣಿ. ಇವರಿಬ್ಬರೂ ತಮ್ಮ ಮಗಳ ಸಾಧನೆಗೆ ಬೆನ್ನೆಲುಬಾಗಿ ನಿಂತು ಮಗಳ ಆಸೆಗೆ ನೀರೆರೆದರು. ಓದಿನಲ್ಲಿ ಮುಂದಿದ್ದ ಮಗಳ ವಿದ್ಯಾಭ್ಯಾಸ ಹಾಗೂ ಕರಾಟೆ ತರಬೇತಿಗೆ ಅಗತ್ಯವಾದ ಅನುಕೂಲ ಕಲ್ಪಿಸಿದರು.

ಮೇ.3ರಂದು ಮಲೇಷ್ಯಾದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಪೂರ್ವಭಾವಿಯಾಗಿ ಹೊಸದಿಲ್ಲಿಯಲ್ಲಿ ನಡೆದ ಎಲ್ಲ ಕಠಿಣ ಸ್ಪರ್ಧೆಗಳಲ್ಲೂ ಕೌಸರ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಆದರೆ, ಇದರ ಮಧ್ಯೆ ಮಲೇಷ್ಯಾಕ್ಕೆ ತೆರಳಲು ಹಣದ ಸಮಸ್ಯೆಯಾದರೆ, ಮತ್ತೊಂದೆಡೆ ದಿಲ್ಲಿಯಿಂದ ಆಯ್ಕೆಯಾಗಿ ಮನೆಗೆ ಬರುತ್ತಿದ್ದಂತೆ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಿಕೊಂಡಿತು. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಲೇಸರ್ ಚಿಕಿತ್ಸೆ ಮೂಲಕ ಕಿಡ್ನಿ ಕಲ್ಲು ಸಮಸ್ಯೆ ನಿವಾರಿಸಲಾಯಿತು. ಆದರೆ ಹಣದ ಸಮಸ್ಯೆ ಹೆಚ್ಚಾಯಿತು. ಪ್ರತಿಭೆಯಿದ್ದರೂ ಹಣದ ಕೊರತೆ ಅಡ್ಡಿಯಾಯಿತು. ಆಗ ಕೌಸರ್ ಅವರ ನೆರವಿಗೆ ಬಂದದ್ದು, ಎಸ್.ವಿ.ಪ್ಯಾರಾ ಮೆಡಿಕಲ್ ಕಾಲೇಜಿನ ಅಧ್ಯಕ್ಷ ವೈ.ವಿ.ವೆಂಕಟಾಚಲ, ಸಿಎಂಆರ್ ಟೊಮೆಟೊ ಮಂಡಿ ಮಾಲಕ ಹರಿಕೃಷ್ಣ, ಎಚ್.ಪಿ.ಪೆಟ್ರೋಲ್ ಬಂಕ್‌ನ ನವೀದ್, ನಾರಾಯಣ ಚಿತ್ರ ಮಂದಿರದ ಹರಿಕೃಷ್ಣ, ದಾನಿಗಳಾದ ಕಷ್ಣಪ್ಪ ಹಾಗೂ ಗೋವಿಂದಗೌಡ ಎನ್ನುತ್ತಾರೆ ಕೌಸರ್.

ಸಾಧನೆ ಮಾಡಬೇಕು ಎಂಬ ರುಮಾನಾ ಕೌಸರ್ ಅವರ ತುಡಿತಕ್ಕೆ ಬಲ ನೀಡಿದವರು, ಅವರ ಮಾವ ಅಲ್ತಾಫ್ ಪಾಷಾ. ಉತ್ತಮ ಕರಾಟೆ ಪಟುವಾಗಿರುವ ಅಲ್ತಾಫ್ ಪಾಷಾ ನೀಡಿದ ತರಬೇತಿಯ ಫಲವಾಗಿ ಕೌಸರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವಂತಾಯಿತು. ಅದರ ಹಿಂದೆ ಅವರು ಚಿಕ್ಕ ವಯಸ್ಸಿನಿಂದಲೇ ಪಡೆದ ಕಠಿಣ ತರಬೇತಿ ಹಾಗೂ ಶ್ರಮ ಅಡಗಿದೆ.

‘ಸರಕಾರ ನೆರವು ನೀಡಲಿ’

ರುಮಾನಾ ಅವರ ಚಿನ್ನದ ಬೇಟೆಯಿಂದ ನಾಡಿಗೆ ಮಾತ್ರವಲ್ಲದೆ ದೇಶಕ್ಕೆ ಕೀರ್ತಿ ಬಂದಿದೆ. ಸರಕಾರ ರುಮಾನಾ ಕೌಸರ್ ಅವರ ನೆರವಿಗೆ ಬರಬೇಕು. ಅವರ ಪ್ರತಿಭೆ ಇನ್ನಷ್ಟು ಪ್ರಜ್ವಲಿಸುವುದಕ್ಕೆ ಅಗತ್ಯವಾದ ಎಲ್ಲ ನೆರವು ನೀಡಬೇಕು ಎಂಬುದು ಕ್ರೀಡಾ ಆಸಕ್ತರ ಬಯಕೆ.

‘200 ಸ್ಪರ್ಧಿಗಳು’

ಮಲೇಷ್ಯಾ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ 20 ದೇಶಗಳಿಂದ 200 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸ್ಪರ್ಧೆ ಕಷ್ಟವಾಗಿದ್ದರೂ, ಚಿನ್ನದ ಪದಕ ಗೆದ್ದಾಗ ಅತೀವ ಸಂತೋಷವಾಯಿತು. ಗೆಲುವಿಗೆ ಕಾರಣರಾದ ತಾಯ್ನಾಡಿನ ಪ್ರತಿಯೊಬ್ಬರನ್ನೂ ಮನಸ್ಸಿನಲ್ಲಿ ಸ್ಮರಿಸಿದೆ. ಪದಕವೂ ಕೊರಳಿಗೇರಿತು. 2 ಲಕ್ಷ ನಗದು ಬಹುಮಾನ ದೊರೆಯಿತು ಎಂದು ಹೇಳಿ, ರುಮಾನಾ ಕೌಸರ್ ನಗೆಬೀರಿದರು.

share
-ಸಮೀರ್ ದಳಸನೂರು
-ಸಮೀರ್ ದಳಸನೂರು
Next Story
X