Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ನಾಡ್ ನಿಧನ ವೈಚಾರಿಕ ಕ್ಷೇತ್ರಕ್ಕೆ...

ಕಾರ್ನಾಡ್ ನಿಧನ ವೈಚಾರಿಕ ಕ್ಷೇತ್ರಕ್ಕೆ ದೊಡ್ಡ ನಷ್ಟ: ಇಲ್ಯಾಸ್ ಮುಹಮ್ಮದ್ ತುಂಬೆ

ವಾರ್ತಾಭಾರತಿವಾರ್ತಾಭಾರತಿ10 Jun 2019 7:04 PM IST
share
ಕಾರ್ನಾಡ್ ನಿಧನ ವೈಚಾರಿಕ ಕ್ಷೇತ್ರಕ್ಕೆ ದೊಡ್ಡ ನಷ್ಟ: ಇಲ್ಯಾಸ್ ಮುಹಮ್ಮದ್ ತುಂಬೆ

ಬೆಂಗಳೂರು, ಜೂ. 10: ದೇಶದ ಅಪ್ರತಿಮ ವೈಚಾರಿಕ ಸಾಹಿತಿ, ಸಿನಿಮಾ ಹಾಗೂ ನಾಟಕ ರಂಗದ ದಿಗ್ಗಜರೂ ಆದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್‌ರ ನಿಧನದಿಂದ ಸಾಹಿತ್ಯ ಹಾಗೂ ವೈಚಾರಿಕ ರಂಗಕ್ಕೆ ಬಹುದೊಡ್ಡ ನಷ್ಟವುಂಟಾಗಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಸಂತಾಪ ಸೂಚಿಸಿದ್ದಾರೆ.

ಕಾರ್ನಾಡ್‌ ರಚಿಸಿದ ಸಾಹಿತ್ಯ ಹಾಗೂ ಸಿನಿಮಾ ಮತ್ತು ನಾಟಕಗಳಲ್ಲಿ ಸಮಾಜದಲ್ಲಿ ಬೀಡುಬಿಟ್ಟಿರುವ ಅಂಧ ಶ್ರದ್ಧೆ, ಕಂದಾಚಾರ ಹಾಗೂ ಶೋಷಣೆಯ ವಿರುದ್ಧ ತೀವ್ರ ಪ್ರತಿರೋಧ ಹಾಗೂ ತೀಕ್ಷ್ಣ ಬಂಡಾಯದ ಸಂದೇಶವಿದೆ. ಸಮಾಜಕ್ಕೆ ಮನಮುಟ್ಟುವಂತೆ ಮಾನವೀಯತೆಯ ಸಂದೇಶ ನೀಡುತ್ತಿದ್ದ ಅವರ ಸಾಹಿತ್ಯ, ನಾಟಕ ಹಾಗೂ ಸಿನಿಮಾಗಳು ಕ್ರಾಂತಿಕಾರಕ ಬದಲಾವಣೆಯ ಪ್ರೇರಣಾ ಶಕ್ತಿಯಾಗಿದೆ ಎಂದಿದ್ದಾರೆ.

ಕಾರ್ನಾಡ್‌ರವರು ಬಹುತ್ವ, ಜಾತ್ಯತೀತತೆಯ ಪ್ರತಿಪಾದಕರಾಗಿದ್ದು ತನ್ನ ನಿರ್ಭಿತ ಹಾಗೂ ನೇರ ವಿಚಾರಗಳ ಪ್ರತಿಪಾದನೆಯಿಂದ ಮನೆಮಾತಾಗಿದ್ದರು. ಸಮಾಜದ ತಳಮಟ್ಟದ ಜನರ ಬದುಕು, ಬವಣೆ ಗ್ರಾಮೀಣ ಜನಜೀವನದ ಸೊಗಡು, ಪುರೋಹಿತಶಾಹಿಗಳ ಶೋಷಣೆ, ಊಳಿಗಮಾನ್ಯತೆ ವಿರುದ್ಧ ಅವರ ಸಿನಿಮಾ, ನಾಟಕ, ಸಾಹಿತ್ಯದ ಮೂಲಕ ಪರಿವರ್ತನೆಗೆ ಮಾರ್ಗದರ್ಶಿಯಾಗಿದ್ದವು ಎಂದು ಹೇಳಿದ್ದಾರೆ.

ಕನ್ನಡದ ಕಣ್ಮಣಿಯಾಗಿ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನಿತ್ತು ಕಾರ್ನಾಡ್ 1998ರಲ್ಲಿ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟಿದ್ದಾರೆ. ರಾಜಕೀಯದಲ್ಲಿ ಭದ್ರವಾಗಿ ಬೇರುಬಿಟ್ಟಿರುವ ಕೋಮುವಾದ, ದ್ರುವೀಕರಣ, ಬಲಪಂಥೀಯ, ರಾಷ್ಟೀಯವಾದ ಹಾಗೂ ಫ್ಯಾಶಿಸಂನ್ನು ಅತ್ಯಂತ ಕಟುವಾಗಿ ವಿರೋಧಿಸುತ್ತಿದ್ದ ಕಾರ್ನಾಡ್‌ರದು ನಿರ್ಭೀತ, ನೇರ, ತೀಕ್ಷ್ಣ ವೈಚಾರಿಕ ವ್ಯಕ್ತಿತ್ವವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಟಕಕಾರ ಗಿರೀಶ್‌ಕಾರ್ನಾಡ್ ನಾಟಕ ಪ್ರಪಂಚದ ಅನರ್ಘ್ಯ ರತ್ನ. ವಿದೇಶದಲ್ಲಿದ್ದಾಗಲೆ ಕನ್ನಡ ನಾಟಕಗಳನ್ನು ಬರೆದು ರಾಜ್ಯಕ್ಕೆ ಬಂದು ಹೊಸ ನಾಟಕಗಳ ಓದು ಪ್ರದರ್ಶನಕ್ಕೆ ದಾರಿ ಮಾಡಿಕೊಟ್ಟರು. ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಹಲವು ಭಾರತೀಯ ಭಾಷೆಗಳಿಗೆ ಅವರ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡಿವೆ. ಕನ್ನಡ ಮಟ್ಟಿಗೆ ನಾಟಕ ಪ್ರಕಾರದ ಸಾಹಿತ್ಯಕ್ಕೆ ಹೊಸ ಮೆರುಗು ನೀಡಿದ ಪ್ರಮುಖರಲ್ಲಿ ಅವರೂ ಒಬ್ಬರು. ಅವರ ನಿಧನದಿಂದಾಗಿ ಕನ್ನಡ ಸಾರಸ್ವತ ಲೋಕ ಅಮೂಲ್ಯ ಜೀವವೊಂದನ್ನು ಕಳೆದುಕೊಂಡಂತಾಗಿದೆ.

-ಅರವಿಂದ ಮಾಲಗತ್ತಿ, ಅಧ್ಯಕ್ಷ, ಕನ್ನಡ ಸಾಹಿತ್ಯ ಅಕಾಡೆಮಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ್ ಕಾರ್ನಾಡ್ ರಂಗಭೂಮಿ ಹಾಗೂ ಸಿನೆಮಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಕನ್ನಡ ಭಾಷೆ, ಸಂಸ್ಕೃತಿಗಳಿಗೆ ಜಾಗತಿಕ ಮನ್ನಣೆ ತಂದುಕೊಟ್ಟವರು. ಅವರು ಕೇವಲ ಸಾಂಸ್ಕೃತಿಕ ವ್ಯಕ್ತಿ ಮಾತ್ರವಲ್ಲದೆ ಪ್ರಗತಿಪರ ಚಿಂತಕರಾಗಿದ್ದರು. ಜಾತ್ಯತೀತ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬದ್ಧರಾಗಿದ್ದರು. ಸಂಘಪರಿವಾರದ ಕೋಮು ರಾಜಕಾರಣದ ತೀವ್ರ ಟೀಕಾಕಾರರಾಗಿದ್ದರು. ಅವರ ಅಗಲಿಕೆಯಿಂದಾಗಿ ನಾಡಿನ ಸಾಂಸ್ಕೃತಿಕ ರಂಗ ಬಡವಾಗಿದೆ.

-ಎಚ್.ವಿ.ಅನಂತಸುಬ್ಬರಾವ್, ಅಧ್ಯಕ್ಷ, ಎಐಟಿಯುಸಿ

ಹಿರಿಯ ನಾಟಕಕಾರ ಗಿರೀಶ್‌ ಕಾರ್ನಾಡ್ ಕನ್ನಡ ರಂಗಭೂಮಿ ಹಾಗೂ ಸಾಹಿತ್ಯ ಲೋಕದ ಅನರ್ಘ್ಯ ರತ್ನ. ನಾಟಕಕಾರರಾಗಿ, ಸಿನೆಮಾ ನಟರಾಗಿ ಕನ್ನಡ ಸಾಹಿತ್ಯ, ಸಿನೆಮಾ ಕ್ಷೇತ್ರಕ್ಕೆ ಅಪ್ರತಿಮ ಸೇವೆಗೈದ ಅಪರೂಪದ ವ್ಯಕ್ತಿತ್ವ. ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ತೆಲುಗು, ತಮಿಳು ಹಾಗೂ ಹಿಂದಿ ಸಿನೆಮಾ ಕ್ಷೇತ್ರದಲ್ಲಿ ಅತ್ಯುತ್ತಮ ನಟನೆಂದು ಖ್ಯಾತಿ ಗಳಿಸಿದವರು. ಇಂತಹ ಬಹುಮುಖಿ ಪ್ರತಿಭೆಯ ಕಾರ್ನಾಡರ ನಿಧನದಿಂದಾಗಿ ಕನ್ನಡ ಸಾಹಿತ್ಯಲೋಕ ಶ್ರೇಷ್ಠ ಚಿಂತಕರೊಬ್ಬರನ್ನು ಕಳೆದುಕೊಂಡಂತಾಗಿದೆ.

-ಪ್ರಿಯಾಂಕ್ ಖರ್ಗೆ, ಸಚಿವರು, ಸಮಾಜ ಕಲ್ಯಾಣ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X