Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ನಾಡ್ ನಿಧನಕ್ಕೆ ಕಂಬನಿ ಮಿಡಿದ...

ಕಾರ್ನಾಡ್ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ

ವಾರ್ತಾಭಾರತಿವಾರ್ತಾಭಾರತಿ10 Jun 2019 9:22 PM IST
share
ಕಾರ್ನಾಡ್ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ

ಬೆಂಗಳೂರು, ಜೂ.10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್‌ರ ನಿಧನಕ್ಕೆ ಕನ್ನಡ ಚಿತ್ರರಂಗದ ಖ್ಯಾತನಾಮರು ಕಂಬಿನಿ ಮಿಡಿದಿದ್ದಾರೆ. ಕಾರ್ನಾಡ್ ಚಿತ್ರ ನಿರ್ದೇಶನದ ಒಂದಾನೊಂದು ಕಾಲದಲ್ಲಿ, ಗೋಧೂಳಿ ಚಿತ್ರದ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಹಿರಿಯ ನಿರ್ದೇಶಕ ನಾಗಾಭರಣ ಮಾತನಾಡಿ, ಅವರೊಬ್ಬರ ಅದ್ಭುತ ಗುರುವಾಗಿದ್ದರು. ಎಡಿಟಿಂಗ್ ಬಗೆಗೆ ನಾನು ಮೊದಲು ಕಲಿತದ್ದು ಅವರ ಜತೆಗಿದ್ದಾಗ. ಅನ್ವೇಷಣೆ, ನೆನಪಿನ ದೋಣಿ, ಮೈಸೂರು ಮಲ್ಲಿಗೆ ಚಿತ್ರಗಳಲ್ಲಿ ನಾನು ಅವರಿಗೆ ಆಕ್ಷನ್ ಕಟ್ ಹೇಳುವುದಕ್ಕೆ ಅವಕಾಶ ದೊರಕಿತ್ತು. ಅವರೇ ಕಲಿಸಿದ್ದನ್ನು ನಾನು ಅವರ ಮೇಲೆ ಪ್ರಯೋಗಿಸಿದ್ದೆ ಎಂದು ನಾಗಾಭರಣ ನೆನಪು ಮಾಡಿಕೊಂಡರು.

ಜ್ಞಾನಪೀಠ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಹಾಗೂ ಮೇರು ಕಲಾವಿದರಲ್ಲೊಬ್ಬರಾದ ಗಿರೀಶ್ ಕಾರ್ನಾಡ್ ವಿಧಿವಶರಾಗಿರುವುದು ಕನ್ನಡ ಸಾಹಿತ್ಯ ಹಾಗೂ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ನಟ ದರ್ಶನ್ ಹೇಳಿದ್ದಾರೆ.

ಪದ್ಮಶ್ರೀ, ಪದ್ಮಭೂಷಣ, ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಮ್ಮನ್ನು ಅಗಲಿದ್ದಾರೆ. ಸಾಹಿತ್ಯ ಲೋಕಕ್ಕೆ ಹಾಗೂ ರಂಗಭೂಮಿಗೆ ಅವರು ನೀಡಿದ ಕೊಡುಗೆ ಅಪಾರ. ಅವರ ಜೊತೆ ಎರಡು ಚಿತ್ರಗಳಲ್ಲಿ ಅಭಿನಯಿಸಿದ ಭಾಗ್ಯ ನನ್ನದು ಎಂದು ಪವರ್ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್ ಕಂಬನಿ ಮಿಡಿದಿದ್ದಾರೆ.

ಗಿರೀಶ್ ಕಾರ್ನಾಡ್‌ರು ಶ್ರೇಷ್ಠ ಬರಹಗಾರರು, ನಾನು ಅವರ ಸಾಹಿತ್ಯದ ಅಭಿಮಾನಿ. ಅವರೊಟ್ಟಿಗೆ ನಟಿಸಿದ್ದು ನನ್ನ ಪುಣ್ಯ ಎಂದು ನಟ ಸುದೀಪ್ ಎಂದರೆ, ಕನ್ನಡ ಸಾಹಿತ್ಯ ಲೋಕಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು, ಚಿಂತಕರು, ನಿರ್ದೇಶಕರು, ಹಿರಿಯ ಸಾಹಿತಿ ಹಾಗೂ ನಟರಾದ ಗಿರೀಶ್ ಕಾರ್ನಾಡ್‌ರವರ ಕೊಡುಗೆ ಅಪಾರ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಭಾವಪೂರ್ಣ ಶ್ರದ್ಧಾಂಜಲಿಗಳು ಎಂದು ನಟ ಉಪೇಂದ್ರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಹಿರಿಯ ರಂಗಕರ್ಮಿ ಸಮಾಜದ ಬಗ್ಗೆ ಸದಾ ಯೋಚಿಸುತ್ತಿದ್ದ ಹಿರಿಯ ನಟರೂ ಆದ ಜ್ಞಾನಪೀಠ ಪುರಸ್ಕೃತರು ಆದ ಗಿರೀಶ್ ಕಾರ್ನಾಡ್ ನಮ್ಮನ್ನೆಲ್ಲ ಬಿಟ್ಟು ಅಗಲಿದ್ದಾರೆ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಂಬನಿ ಮಿಡಿದಿದ್ದಾರೆ.

ನಟರಾದ ಗಣೇಶ್, ಶ್ರೀಮುರುಳಿ, ಸೃಜನ್ ಲೋಕೇಶ್, ನೀನಾಸಂ ಸತೀಶ್, ನಿರ್ದೇಶಕ ಶಶಾಂಕ್ ಸಂತಾಪ ಸೂಚಿಸಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಪದ್ಯದ ಮೂಲಕ ಕಾರ್ನಾಡರಿಗೆ ನುಡಿನಮನ ಸಲ್ಲಿಸಿದ್ದಾರೆ. ಅವರು ಪುಟಗಳಲ್ಲಿ ಜೀವಂತ, ರಂಗದಲ್ಲಿ ಜೀವಂತ, ಪರದೆಯಲ್ಲಿ ಜೀವಂತ, ತುಂಬು ಸ್ಮತಿಗಳಲ್ಲಿ ಜೀವಂತ, ಬದುಕಿದ್ದಾಗ ಬಾಳಿದ್ದಕ್ಕಿಂತ ಹೊರಟ ನಂತರ ಶಾಶ್ವತವಾಗಿ ಬದುಕುವುದು ಎಂದರೆ ಸಾಮಾನ್ಯವೇ?! ತಮಗೆ ಹೃತ್ಪೂರ್ವಕ ನಮನ ಎಂದು ಪದ್ಯದ ಮೂಲಕ ನುಡಿನಮನ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X