Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ನಾಡರ ಬದುಕು ಲೇಖಕರಿಗೆ, ಕಲಾವಿದರಿಗೆ...

ಕಾರ್ನಾಡರ ಬದುಕು ಲೇಖಕರಿಗೆ, ಕಲಾವಿದರಿಗೆ ಮಾದರಿ

-ಮಂಜುನಾಥ ದಾಸನಪುರ-ಮಂಜುನಾಥ ದಾಸನಪುರ10 Jun 2019 11:12 PM IST
share
ಕಾರ್ನಾಡರ ಬದುಕು ಲೇಖಕರಿಗೆ, ಕಲಾವಿದರಿಗೆ ಮಾದರಿ

ಬೆಂಗಳೂರು, ಜೂ.10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ್ ಕಾರ್ನಾಡ್ ಅವರಲ್ಲಿ ಪ್ರತಿಭಟನಾಕಾರ, ತನ್ನ ದಿನನಿತ್ಯದ ಆಗುಹೋಗುಗಳನ್ನು ಮಾನವೀಯ ನೆಲೆಯಲ್ಲಿ ಚಿಂತಿಸುವ ಚಿಕಿತ್ಸಕನನ್ನು ತಮ್ಮ ಬದುಕಿನ ಕೊನೆಯ ಉಸಿರಿರುವವರೆಗೆ ಜೋಪಾನವಾಗಿ ಕಾಯ್ದಿಟ್ಟುಕೊಂಡು ಕಲಾವಿದ, ಲೇಖಕನೋರ್ವ ಹೇಗಿರಬೇಕೆಂಬುದನ್ನು ಬದುಕಿ ತೋರಿಸಿ ಹೋಗಿದ್ದಾರೆ.

ಹಿರಿಯ ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹಿಂದೂ ಕೋಮುವಾದಿಗಳ ಕೈಯಲ್ಲಿ ಹತ್ಯೆಯಾದ ಒಂದು ವರ್ಷದ ಸ್ಮರಣೆಗಾಗಿ ಸೆ.5, 2018ರಲ್ಲಿ ಗೌರಿ ಲಂಕೇಶ್ ಬಳಗ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ, ಅಭಿವ್ಯಕ್ತಿ ಸ್ವಾತಂತ್ರದ ಹತ್ಯೆ ವಿರೋಧಿ ಸಮಾವೇಶದಲ್ಲಿ ಗಿರೀಶ್ ಕಾರ್ನಾಡ್ ತನ್ನ ಕುತ್ತಿಗೆಗೆ ನಾನು ಅರ್ಬನ್ ನಕ್ಸಲ್ ಎಂಬ ನಾಪಫಲಕ ಹಾಕಿಕೊಂಡು ವೇದಿಕೆ ಮೊದಲ ಸಾಲಿನಲ್ಲಿ ಕುಳಿತು, ಮೂಲಭೂತ ವ್ಯವಸ್ಥೆಗೆ ಸಡ್ಡು ಹೊಡೆದಿದ್ದರು.

ಆ ದಿನಗಳಲ್ಲಿಯೆ ಗಿರೀಶ್ ಕಾರ್ನಾಡ್‌ರಿಗೆ ಸಲೀಸಾಗಿ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಮೂಗಿಗೆ ಕೃತಕ ಉಸಿರಾಟದ ಪೈಪನ್ನು ಅಳವಡಿಸಿಕೊಂಡು ಅಭಿವ್ಯಕ್ತಿ ಸಮಾವೇಶದಲ್ಲಿ ಭಾಗವಹಿಸಿ, ತಮ್ಮ ನಿಲುವನ್ನು, ಚಿಂತನೆಯನ್ನು ಧೈರ್ಯವಾಗಿ ಸಾರಿದ್ದರು. ಇದನ್ನು ಕನ್ನಡ ಹಾಗೂ ರಾಷ್ಟ್ರೀಯ ಸುದ್ದಿವಾಹಿನಿಗಳು ವಿವಾದಕ್ಕೆ ಈಡು ಮಾಡಿದರೂ ಯಾರಿಗೂ ಅಂಜದೆ ತನ್ನ ನಿಲುವಿಗೆ ಕಟ್ಟಿಬದ್ಧರಾಗಿದ್ದರು.

ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸಿ ದಲಿತ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ನಗರದ ಪುರಭವನದ ಮುಂಭಾಗ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಗಿರೀಶ್ ಕಾರ್ನಾಡ್ ಭಾಗವಹಿಸಿ, ನನ್ನ ಆಹಾರ, ನನ್ನ ಹಕ್ಕು ಎಂಬುದನ್ನು ಘೋಷಣೆ ಮಾಡುವ ಮೂಲಕ ಸರಕಾರಗಳ ನಿಲುವನ್ನು ಪ್ರಬಲವಾಗಿ ಖಂಡಿಸಿದ್ದರು. ಹೀಗೆ ದೇಶದ ಯಾವುದೆ ಮೂಲೆಯಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾದಾಗ ಕೂಡಲೆ ಸ್ಪಂದಿಸುತ್ತಿದ್ದವರಲ್ಲಿ ಗಿರೀಶ್ ಕಾರ್ನಾಡರು ಪ್ರಮುಖರು.

ಪ್ರಭುತ್ವಗಳ ನೀತಿ ನಿಯಮಗಳಲ್ಲಿರುವ ಲೋಪಗಳು, ಧರ್ಮದ, ಸಂಸ್ಕೃತಿಯ, ಆಚಾರ, ವಿಚಾರಗಳ ಹೆಸರಿನಲ್ಲಿ ನಡೆಯುವ ವೌಢ್ಯಗಳು, ಜನಾಂಗೀಯ ದ್ವೇಷಕ್ಕೆ ಪರ್ಯಾಯವಾಗಿ ತಮ್ಮ ನಾಟಕಗಳ ಮೂಲಕ ಹೊಸ ಚಿಂತನೆಗಳನ್ನು ಕಲಾವಿದರ ಮೂಲಕ ಅಭಿವ್ಯಕ್ತಿಸುವಲ್ಲಿ ಯಶಸ್ವಿಯಾದವರು.

ಭಾರತದ ಮೊದಲ ಸ್ವಾತಂತ್ರ ಹೋರಾಟಗಾರ, ಜನಸ್ನೇಹಿ ರಾಜನೆಂದು ಜನಪದರ ಹಾಡುಗಳಲ್ಲಿ ಜನಜನಿತನಾಗಿರುವ ಟಿಪ್ಪು ಸುಲ್ತಾನ್ ಕುರಿತು ಸಂಘಪರಿವಾರ ಹಿಂದೂಗಳಲ್ಲಿ ದ್ವೇಷ ಭಾವನೆ ಹುಟ್ಟುಹಾಕುವ ಪ್ರಯತ್ನದಲ್ಲಿರುವಾಗ ಗಿರೀಶ್ ಕಾರ್ನಾಡ್ ‘ಟಿಪ್ಪು ಸುಲ್ತಾನ್ ಕಂಡ ಕನಸು’ ಎಂಬ ನಾಟಕವನ್ನು ರಚಿಸುವ ಮೂಲಕ ಟಿಪ್ಪು ಸುಲ್ತಾನ್‌ನ ನಿಜವಾದ ಬದುಕನ್ನು ಅನಾವರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅವರ ಮತ್ತೊಂದು ಮಹತ್ವದ ‘ತಲೆದಂಡ’ ನಾಟಕದಲ್ಲಿ ಶರಣ ಚಳವಳಿ, ಹನ್ನೆರಡನೆಯ ಶತಮಾನ ಅತ್ಯಂತ ಪ್ರಗತಿಪರವಾದ ಮಾನವೀಯ ಆಂದೋಲನದ ನಾಯಕನಾದ ಬಸವಣ್ಣನ ಸೋಲು, ಗೆಲುವುಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ನಾಟಕ ರೂಪಕ್ಕೆ ಇಳಿಸಿದ್ದಾರೆ. ಹೀಗೆ ಅವರ ಯಯಾತಿ, ತುಘಲಕ್, ಹಯವದನ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಅಗ್ನಿ ಮತ್ತು ಮಳೆ ಸೇರಿದಂತೆ ಹತ್ತಾರು ನಾಟಕಗಳು ಜನರ ಆಲೋಚನೆಯ ಮಟ್ಟವನ್ನು ಮನವೀಯ ನೆಲೆಯಲ್ಲಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಗಿರೀಶ್ ಕಾರ್ನಾಡರು ಪ್ರಾಚೀನ ಕಾಲದ ವಸ್ತುವಿಷಯಗಳನ್ನೆ ತೆಗೆದುಕೊಂಡು ನಾಟಕದಲ್ಲಿ ಆಧುನಿಕ ಸ್ಪರ್ಶ ನೀಡುವ ಮೂಲಕ ಭೂತ, ವರ್ತಮಾನ ಹಾಗೂ ಭವಿಷ್ಯಗಳ ನಡುವೆ ಸಂಪರ್ಕ ಕಲ್ಪಿಸಿ, ನಾಟಕವನ್ನು ಓದುವವರಲ್ಲಿ ಹಾಗೂ ನೋಡುವವರಲ್ಲಿ ವೈಚಾರಿಕೆ ಪ್ರಜ್ಞೆಯನ್ನು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

share
-ಮಂಜುನಾಥ ದಾಸನಪುರ
-ಮಂಜುನಾಥ ದಾಸನಪುರ
Next Story
X