Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾಸಾಗರರ ನೂತನ ಪ್ರತಿಮೆ...

ವಿದ್ಯಾಸಾಗರರ ನೂತನ ಪ್ರತಿಮೆ ಅನಾವರಣಗೊಳಿಸಿದ ಮಮತಾ

“ಬಂಗಾಳ ಗುಜರಾತ್ ಅಲ್ಲ”

ವಾರ್ತಾಭಾರತಿವಾರ್ತಾಭಾರತಿ11 Jun 2019 7:01 PM IST
share
ವಿದ್ಯಾಸಾಗರರ ನೂತನ ಪ್ರತಿಮೆ ಅನಾವರಣಗೊಳಿಸಿದ ಮಮತಾ

ಕೋಲ್ಕತಾ, ಜೂ.11: ಸಮಾಜ ಸುಧಾರಕ ಈಶ್ವರಚಂದ್ರ ವಿದ್ಯಾಸಾಗರ್ ಅವರ ನೂತನ ಪ್ರತಿಮೆಯನ್ನು ಕಾಲೇಜು ಸ್ಟ್ರೀಟ್‌ನಲ್ಲಿರುವ ಶಾಲಾ ಮೈದಾನದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅನಾವರಣಗೊಳಿಸಿದರು.

ಟಿಎಂಸಿ ಮುಖಂಡರು, ಪಶ್ಚಿಮ ಬಂಗಾಳ ಸರಕಾರದ ಸಚಿವರು, ಧಾರ್ಮಿಕ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಿಗದಿತ ಕಾರ್ಯಕ್ರಮದಂತೆ ಅನಾವರಣಗೊಂಡ ಪ್ರತಿಮೆಯನ್ನು ಹರೆ ಶಾಲಾ ಮೈದಾನದಿಂದ ಸ್ಥಳಾಂತರಿಸಿ, ವಿದ್ಯಾಸಾಗರ ಕಾಲೇಜಿನಲ್ಲಿ ಪ್ರತಿಷ್ಠಾಪಿಸಲಾಗುವುದು. ವಿದ್ಯಾಸಾಗರ ಕಾಲೇಜಿನಲ್ಲಿದ್ದ ಈಶ್ವರಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆ ಕಳೆದ ಮೇ ತಿಂಗಳಿನಲ್ಲಿ ನಡೆದ ರಾಜಕೀಯ ಗಲಭೆಯ ಸಂದರ್ಭ ಹಾನಿಗೀಡಾಗಿತ್ತು. ಪ್ರತಿಮೆ ಧ್ವಂಸಗೊಳಿಸಿದ ಬಳಿಕ ಬಿಜೆಪಿ ಇದೀಗ ಬಿಜೆಪಿ ಬಂಗಾಳದ ಸಂಸ್ಕೃತಿಯನ್ನು ಹಾಳುಗೆಡವಲು ಯತ್ನಿಸುತ್ತಿದೆಯೇ ಎಂದು ಪ್ರಶ್ನಿಸಿದ ಮಮತಾ, ಬಂಗಾಳವು ಗುಜರಾತ್ ಅಲ್ಲ ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು ಎಂದರು.

ಚುನಾವಣೋತ್ತರ ಹಿಂಸಾಚಾರದಲ್ಲಿ ರಾಜ್ಯದಲ್ಲಿ 10 ಮಂದಿ ಪ್ರಾಣತೆತ್ತಿದ್ದು ಇದರಲ್ಲಿ 8 ಮಂದಿ ಟಿಎಂಸಿ ಕಾರ್ಯಕರ್ತರು. ಇಬ್ಬರು ಬಿಜೆಪಿ ಕಾರ್ಯಕರ್ತರು. ಎಲ್ಲಾ ಸಾವೂ ದುರದೃಷ್ಟಕರ. ಮೃತಪಟ್ಟ ಎಲ್ಲಾ ವ್ಯಕ್ತಿಗಳ ಕುಟುಂಬದವರಿಗೆ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸುತ್ತೇನೆ ಎಂದು ಮಮತಾ ಹೇಳಿದರು.

ಪ್ರತಿಮೆ ಧ್ವಂಸಗೊಂಡ ಸ್ಥಳದಲ್ಲಿ ಪಂಚಲೋಹದಲ್ಲಿ ನಿರ್ಮಿಸಿದ ನೂತನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮೇ 16ರಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು. ಆದರೆ ಮೋದಿಯ ಪ್ರಸ್ತಾವನೆಯನ್ನು ಸಾರ್ವಜನಿಕ ಸಭೆಯಲ್ಲಿ ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ರಾಜ್ಯದ ಬಳಿ ಪ್ರತಿಮೆ ನಿರ್ಮಿಸಲು ಅಗತ್ಯವಿರುವ ಹಣ ವಿದೆ ಎಂದು ಹೇಳಿದ್ದರು.

ಮಂಗಳವಾರ ನಡೆದ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ವಿದ್ಯಾಸಾಗರರ 200ನೇ ಜನ್ಮದಿನಾಚರಣೆ ಸಮಿತಿಯ ಸಹಯೋಗದಲ್ಲಿ ಪಶ್ಚಿಮ ಬಂಗಾಳದ ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಇಲಾಖೆ ಹಮ್ಮಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಹರೆ ಶಾಲೆಯ ಆವರಣದಲ್ಲಿ ವಿದ್ಯಾಸಾಗರರ 8.5 ಅಡಿ ಎತ್ತರದ ಫೈಬರ್‌ಗ್ಲಾಸ್‌ನ ಪ್ರತಿಮೆಯನ್ನೂ ಮಮತಾ ಅನಾವರಣಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X