Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಏಕ ವಚನದಲ್ಲಿ ಮಾತಾಡ್ಬೇಡಿ, ಆ್ಯಕ್ಷನ್...

"ಏಕ ವಚನದಲ್ಲಿ ಮಾತಾಡ್ಬೇಡಿ, ಆ್ಯಕ್ಷನ್ ತೆಗೆಯಬೇಕಾಗುತ್ತೆ"

ಸಚಿವರ ಸಮ್ಮುಖದಲ್ಲಿಯೇ ಬಿಜೆಪಿ ಎಂಎಲ್‍ಸಿಗೆ ಮನಪಾ ಆಯುಕ್ತೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ11 Jun 2019 7:42 PM IST
share
ಏಕ ವಚನದಲ್ಲಿ ಮಾತಾಡ್ಬೇಡಿ, ಆ್ಯಕ್ಷನ್ ತೆಗೆಯಬೇಕಾಗುತ್ತೆ

ಶಿವಮೊಗ್ಗ, ಜೂ. 11: "ಸುಮ್ನೆ ಹಂಗೆ ಮಾತಾಡ್‍ಬಾರ್ದು ಸಾರ್. ಏಕವಚನದಲ್ಲಿ ಮಾತಾಡ್ಬೇಡಿ. ನಾವು ನಿಮಗೆ ಗೌರವ ಕೊಡುತ್ತಿಲ್ವಾ? ಸರಿಯಾಗಿ ಮಾತಾಡಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ಆ್ಯಕ್ಷನ್ ತೆಗೆಯಬೇಕಾಗುತ್ತೆ" ಇದು, ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‍ರವರು ಬಿಜೆಪಿಯ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ವಿರುದ್ಧ, ಸಾರ್ವಜನಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣರವರ ಸಮ್ಮುಖದಲ್ಲಿ ವ್ಯಕ್ತಪಡಿಸಿದ ಆಕ್ರೋಶ ಭರಿತ ಮಾತುಗಳು. 

ಮೊದಲೇ ಕೋಪದಿಂದ ಮಾತನಾಡುತ್ತಿದ್ದ ಆಯನೂರು ಮಂಜುನಾಥ್, ಆಯುಕ್ತೆಯ ತಿರುಗೇಟಿಗೆ ಮತ್ತಷ್ಟು ವ್ಯಗ್ರರಾದರು. 'ಅದೇನೋ ಆ್ಯಕ್ಷನ್ ತಗೋತಿಯೋ ತಗೋಳಮ್ಮ' ಎಂದು ಜಗಳಕ್ಕೆ ನಿಂತರು. ಅಷ್ಟರಲ್ಲಿಯೇ ಸಚಿವ ಡಿ.ಸಿ.ತಮ್ಮಣ್ಣರವರೇ ಮಧ್ಯಪ್ರವೇಶಿಸಿ, ಎಂಎಲ್‍ಸಿ ಹಾಗೂ ಆಯುಕ್ತೆಯನ್ನು ಸಮಾಧಾನಗೊಳಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಿದರು. 

ಆಯನೂರು ಹಾಗೂ ಆಯುಕ್ತೆಯ ನಡುವೆ ನಡೆದ ಈ ವಾಕ್ಸಮರಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪ, ಎಂಎಲ್‍ಸಿ ಆರ್.ಪ್ರಸನ್ನಕುಮಾರ್, ಪಾಲಿಕೆಯ ಮೇಯರ್, ಸದಸ್ಯರು, ಉಪ ಮೇಯರ್, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಇತರೆ ಅಧಿಕಾರಿ ವರ್ಗ ಹಾಗೂ ಸಾರ್ವಜನಿಕರು ಸಾಕ್ಷಿಯಾದರು. ಸಚಿವರು ಹೊರತುಪಡಿಸಿದರೆ, ಯಾರೊಬ್ಬರೂ ಇವರನ್ನು ಸಮಾಧಾನಗೊಳಿಸಲು ಮುಂದಾಗಲಿಲ್ಲ.  

ಏನಾಯ್ತು?: ಹಲವು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವರು ನಗರಕ್ಕೆ ಭೇಟಿ ನೀಡಿದ್ದರು. ಸ್ಮಾರ್ಟ್ ಸಿಟಿಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಶರಾವತಿ ನಗರದ ಆದಿಚುಂಚನಗಿರಿ ಶಾಲೆಯ ಬಳಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದ ವೇಳೆ, ಆಯನೂರು ಮಂಜುನಾಥ್‍ರವರು ಮೂಲಸೌಕರ್ಯ ಹಾಗೂ ಬೀದಿ ದೀಪಗಳ ವಿಷಯಕ್ಕೆ ಸಂಬಂಧಿಸಿದಂತೆ ಆಯುಕ್ತೆಯನ್ನು ಪ್ರಶ್ನಿಸಲಾರಂಭಿಸಿದರು.

'ಸ್ಮಾರ್ಟ್ ಸಿಟಿ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ಆಗುತ್ತಿದೆ. ಜನರಿಗೆ ಕೆಲಸ ಮಾಡಿಕೊಡಿ ಅಂದರೆ ಮಾಡಿಕೊಡುತ್ತಿಲ್ಲ. ಬೀದಿ ದೀಪವಿರುವ ಕಂಬಗಳಲ್ಲಿ ಲೈಟ್‍ಗಳಿಲ್ಲ. ಪ್ರತಿಯೊಂದಕ್ಕೂ ಕಾಮಗಾರಿ ನೆಪ ಹೇಳುತ್ತೀರಿ. ಒಂದು ರಾತ್ರಿ ನೀವು ಆ ಜಾಗದಲ್ಲಿ ಇದ್ದು ನೋಡಿ. ಬರೀ ಕಥೆ ಕೇಳಲು ಇದ್ದೇವಾ? ಸುಮ್ನೆ ಮಾತಾಡಬೇಡಿ' ಎಂದು ಏರು ಧ್ವನಿಯಲ್ಲಿ ಆಯುಕ್ತೆ ವಿರುದ್ಧ ಹರಿಹಾಯ್ದರು. 

ಇದಕ್ಕೆ ಆಯುಕ್ತೆ ಪ್ರತಿಕ್ರಿಯೆ ನೀಡಿ, 'ಸಾರ್ ಸುಮ್ನೆ ಹಂಗೆಲ್ಲ ಮಾತಾಡ್ಬಾರ್ದು. ನಾವು ಕೆಲಸ ಮಾಡುತ್ತಿದ್ದೇವೆ' ಎಂದರು. 'ನೀವು ಜನರ ಸಮಸ್ಯೆ ಕೇಳುತ್ತಿಲ್ಲ. ನಿಮಗೆ ಮರ್ಯಾದೆ ಬೇಕು. ಜನರು ಸಾಯಬೇಕಾ? ಹಾಗಾದ್ರೆ ಸಮಸ್ಯೆ ಪರಿಹರಿಸು ನೀನು' ಎಂದರು. 

ಇದಕ್ಕೆ ತಾಳ್ಮೆ ಕಳೆದುಕೊಂಡು ಆಯುಕ್ತೆ, 'ಏಕವಚನದಲ್ಲಿ ಮಾತಾಡ್ಬೇಡಿ. ಸರಿಯಾಗಿ ಮಾತಾಡಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ಆ್ಯಕ್ಷನ್ ತಗೋಬೇಕಾಗುತ್ತೆ.. ಎಂದು ಆಕ್ರೋಶ ವ್ಯಕ್ತಪಡಿಸಿದರು. 'ಯಾರೋ ಕಾರ್ಪೋರೇಟರ್ ಅಲ್ಲ ಬೆದರಿಕೆ ಹಾಕೋಕೆ. ತಗೋ ಆ್ಯಕ್ಷನ್. ನಾನೂ ನೋಡ್ತಿನಿ..' ಎಂದು ಆಯನೂರು ಗುಡುಗಿದರು. ಸಚಿವ ಡಿ.ಸಿ.ತಮ್ಮಣ್ಣರವರು ಮಧ್ಯಪ್ರವೇಶಿಸಿ ಇಬ್ಬರನ್ನು ಸಮಾಧಾನ ಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X