‘ಉಡುಪಿ ಹೆಲ್ಪ್’ ಆ್ಯಪ್ ಬಿಡುಗಡೆಗೊಳಿಸಿದ ಸಚಿವೆ ಜಯಮಾಲಾ

ಉಡುಪಿ, ಜೂ.11: ಜಿಲ್ಲಾ ಕೇಂದ್ರ ಉಡುಪಿ ನಗರದಲ್ಲಿ ಮಳೆಗಾಲದಲ್ಲಿ ಎದುರಾಗುವ ವಿವಿಧ ಪ್ರಾಕೃತಿಕ ವಿಕೋಪ ಹಾಗೂ ಸಮಸ್ಯೆಗಳ ಕ್ಷಿಪ್ರ ನಿರ್ವಹಣೆಗೆ ಜಾರಿಗೆ ತಂದಿರುವ ಹೊಸ ಆ್ಯಪ್ ‘ಉಡುಪಿ ಹೆಲ್ಪ್’ (UDUPI HELP)ನ್ನು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಮಂಗಳವಾರ ಬಿಡುಗಡೆಗೊಳಿಸಿದರು
ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಚಿವರು ಈ ಹೊಸ ಆ್ಯಪ್ನ್ನು ಬಿಡುಗಡೆಗೊಳಿಸಿದರು. ನಾಗರಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಉಡುಪಿ ಜಿಲ್ಲಾಡಳಿತ ಉತ್ತಮ ಕಾರ್ಯ ಕೈಗೊಂಡಿದೆ. ಮಳೆಗಾಲದಲ್ಲಿ ಹಲವಾರು ರೀತಿಯ ಪ್ರಾಕೃತಿಕ ಸಮಸ್ಯೆಗಳು ಎದುರಾಗುತ್ತವೆ. ಇವುಗಳಿಗೆ ತ್ವರಿತ ಸ್ಪಂದನೆ ತುರ್ತು ಅಗತ್ಯವಾಗಿದೆ. ಉಡುಪಿ ಹೆಲ್ಪ್ಆ್ಯಪ್ ಮೂಲಕ ಜಿಲ್ಲಾಡಳಿತ, ನಾಗರಿಕರಿಗೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಆಡಳಿತಕ್ಕೆ ತಲುಪಿಸಲು ಅನುಕೂಲ ಮಾಡಿದ್ದು, ಜನರು ಕ್ಷಿಪ್ರವಾಗಿ ಪರಿಹಾರ ಪಡೆಯಬಹುದು ಎಂದು ಸಚಿವೆ ಜಯಮಾಲಾ ಹೇಳಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಉಡುಪಿ ಹೆಲ್ಪ್ಆ್ಯಪ್ನಲ್ಲಿ ಬರುವ ನಾಗರಿಕರ ದೂರುಗಳಿಗೆ ಉಡುಪಿ ನಗರಸಭೆ ಆರು ಗಂಟೆಯೊಳಗೆ ಸ್ಪಂಧಿಸಲಿದೆ. ಇದರಲ್ಲಿ ಫೋಟೊ ಹಾಗೂ ವೀಡಿಯೊ ಸಹ ಅಪ್ಲೋಡ್ ಮಾಡಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕ ಸಂತೋಷ್ಕುಮಾ್ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕರು ಮೊಬೈಲ್ನಲ್ಲಿ ಗೂಗಲ್ ಪ್ಲೇ ಸ್ಟೋರ್ನಿಂದ ಆ್ಯಪ್ನ್ನು (UDUPI HELP) ಡೌನ್ಲೋಡ್ ಮಾಡಬಹುದು.









