Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ.ಬಂಗಾಳ: ಮರಗಳಿಂದ ನೇತಾಡುತ್ತಿದ್ದ...

ಪ.ಬಂಗಾಳ: ಮರಗಳಿಂದ ನೇತಾಡುತ್ತಿದ್ದ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಶವಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ11 Jun 2019 10:17 PM IST
share
ಪ.ಬಂಗಾಳ: ಮರಗಳಿಂದ ನೇತಾಡುತ್ತಿದ್ದ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಶವಗಳು ಪತ್ತೆ

 ಕೋಲ್ಕತಾ,ಜೂ.11: ರವಿವಾರ ಹಿರಿಯ ಆರೆಸ್ಸೆಸ್ ಸದಸ್ಯನೋರ್ವನ ಶವವು ಅಟ್ಚಟಾ ಗ್ರಾಮದ ಮರವೊಂದರಲ್ಲಿ ತೂಗಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಿಗೇ ಸೋಮವಾರ ಹೌರಾದ ಅಮ್ಟಾದ ಸರ್ಪೋಟಾ ಗ್ರಾಮದ ಮರವೊಂದರಲ್ಲಿ ಬಿಜೆಪಿ ಕಾರ್ಯಕರ್ತ ಸಮತುಲ್ ದೋಲುಯಿ ಎಂಬಾತನ ಶವವು ತೂಗಾಡುತ್ತಿದ್ದುದು ಪತ್ತೆಯಾಗಿದೆ.

 ಇದರೊಂದಿಗೆ ರಾಜ್ಯದಲ್ಲಿ ತೃಣಮೂಲ ಮತ್ತು ಬಿಜೆಪಿ ನಡುವೆ ರಾಜಕೀಯ ಹಿಂಸಾಚಾರ ಮತ್ತು ಆರೋಪ-ಪ್ರತ್ಯಾರೋಪಗಳು ಕಾವು ಪಡೆದುಕೊಳ್ಳುತ್ತಿವೆ. ದೋಲುಯಿ ಹತ್ಯೆಯ ಹಿಂದೆ ತೃಣಮೂಲ ಕೈವಾಡವಿದೆ ಎಂದು ಆತನ ಕುಟುಂಬ ಮತ್ತು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ದೋಲುಯಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದ. ಲೋಕಸಭಾ ಚುನಾವಣೆಯಲ್ಲಿ ತನ್ನ ಬೂತ್‌ನಲ್ಲಿ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ದೊರಕಿಸಿಕೊಟ್ಟಿದ್ದ. ತನ್ನ ಬಡಾವಣೆಯಲ್ಲಿ ಜೈ ಶ್ರೀರಾಮ ರ್ಯಾಲಿಗಳನ್ನು ಆಯೋಜಿಸಿದ ಬಳಿಕ ಆತನಿಗೆ ಜೀವ ಬೆದರಿಕೆಗಳು ಬಂದಿದ್ದವು. ಚುನಾವಣೆಯ ಬೆನ್ನಲ್ಲೇ ತೃಣಮೂಲ ಬೆಂಬಲಿತ ಸಮಾಜವಿರೋಧಿಗಳು ಆತನ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದರು ಎಂದು ಬಿಜೆಪಿಯ ಹೌರಾ(ಗ್ರಾಮೀಣ) ಘಟಕದ ಅಧ್ಯಕ್ಷ ಅನುಪಮ್ ಮಲಿಕ್ ಹೇಳಿದರು.

ದೋಲುಯಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸುತ್ತಿದ್ದಾಗ ಕೆಲವು ದುಷ್ಕರ್ಮಿಗಳು ಅದನ್ನು ಅಪಹರಿಸಲು ಪ್ರಯತ್ನಿಸಿದ್ದರು. ಇದನ್ನು ಗ್ರಾಮಸ್ಥರು ಪ್ರತಿರೋಧಿಸಿದ್ದು,ಜಿಲ್ಲಾಡಳಿತವು ಬಿಗು ಬಂದೋಬಸ್ತ್ ಏರ್ಪಡಿಸಿದೆ.

ರವಿವಾರ ಹಿರಿಯ ಆರೆಸ್ಸೆಸ್ ಕಾರ್ಯಕರ್ತ ಸ್ವದೇಶ ಮನ್ನಾ ಅವರ ಶವ ಅಟ್ಚಟಾ ಗ್ರಾಮದ ಮರವೊಂದರಲ್ಲಿ ನೇತಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮನ್ನಾ ಕೂಡ ಕಳೆದ ಕೆಲವು ದಿನಗಳಿಂದ ಜೈ ಶ್ರೀರಾಮ ರ್ಯಾಲಿಗಳನ್ನು ನಡೆಸುತ್ತಿದ್ದರು.

ಈ ಎರಡೂ ಪ್ರಕರಣಗಳಲ್ಲಿ ತೃಣಮೂಲ ಬೆಂಬಲಿಗರು ನಮ್ಮ ಪಕ್ಷದ ಕಾರ್ಯಕರ್ತರನ್ನು ಹತ್ಯೆಗೈದಿದ್ದಾರೆ ಎಂದು ಮಲಿಕ್ ಆರೋಪಿಸಿದರು.

ಈ ಹತ್ಯೆಗಳು ಪುರುಲಿಯಾದಲ್ಲಿ 2018ರ ಪಂಚಾಯತ್ ಚುನಾವಣೆಗಳಿಗೆ ಮುನ್ನ ನಡೆದಿದ್ದ ಬಿಜೆಪಿ ಕಾರ್ಯಕರ್ತರ ಇಂತಹುದೇ ಹತ್ಯೆಗಳನ್ನು ನೆನಪಿಸಿವೆ. ಆದರೆ ಪುರುಲಿಯಾದಂತೆ ದೋಲುಯಿಯ ಶವಕ್ಕೆ ಯಾವುದೇ ಪೋಸ್ಟರ್‌ನ್ನು ಅಂಟಿಸಿರಲಿಲ್ಲ.

ಈ ಪ್ರಕರಣಗಳಲ್ಲಿ ತನ್ನ ಪಕ್ಷದ ಕಾರ್ಯಕರ್ತರ ಪಾತ್ರವನ್ನು ತೃಣಮೂಲ ಶಾಸಕ ಪುಲಕ್ ರಾಯ್ ನಿರಾಕರಿಸಿದ್ದ್ದಾರೆ.

ಸೋದಪುರದಲ್ಲಿ ಪ್ರತ್ಯೇಕ ಘಟನೆಯಲ್ಲಿ ಶಂಕಿತ ತೃಣಮೂಲ ಕಾರ್ಮಿಕ ಒಕ್ಕೂಟದ ಸದಸ್ಯರು ಇಬ್ಬರು ಭದ್ರತಾ ಸಿಬ್ಬಂದಿಗಳನ್ನು ಕಬ್ಬಿಣದ ಸರಳುಗಳಿಂದ ಥಳಿಸಿದ್ದಾರೆ. ಅವರಿಬ್ಬರೂ ಬಿಜೆಪಿ ಅಧೀನದಲ್ಲಿ ಪ್ರತ್ಯೇಕ ಕಾರ್ಮಿಕ ಒಕ್ಕೂಟವನ್ನು ರಚಿಸಲು ಯತ್ನಿಸಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಎರಡು ದಿನಗಳ ಹಿಂದೆ ಸಂದೇಶಖಾಲಿಯಲ್ಲಿ ನಡೆದ ಹತ್ಯೆಗಳನ್ನು ಪ್ರತಿಭಟಿಸಿ ಬಿಜೆಪಿಯು ಮಂಗಳವಾರ 12 ಗಂಟೆಗಳ ದಕ್ಷಿಣ 24 ಪರಗಣಗಳ ಜಿಲ್ಲಾ ಬಂದ್‌ಗೆ ಕರೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X