Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮಕರಣಿಕರು ಗ್ರಾಮೀಣ ಜನರ...

ಗ್ರಾಮಕರಣಿಕರು ಗ್ರಾಮೀಣ ಜನರ ಸಮಸ್ಯೆಗಳಿಗೆ ಧ್ವನಿಯಾಗಬೇಕು-ಐವನ್ ಡಿ'ಸೋಜ

ವಾರ್ತಾಭಾರತಿವಾರ್ತಾಭಾರತಿ11 Jun 2019 11:30 PM IST
share
ಗ್ರಾಮಕರಣಿಕರು ಗ್ರಾಮೀಣ ಜನರ ಸಮಸ್ಯೆಗಳಿಗೆ ಧ್ವನಿಯಾಗಬೇಕು-ಐವನ್ ಡಿಸೋಜ

ಪುತ್ತೂರು: ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳು ಗ್ರಾಮಕರಣಿಕರ ಮೂಲಕವೇ ಸರಕಾರದ ಗಮನಕ್ಕೆ ಬರಬೇಕಾಗಿದೆ. ಹಾಗಾಗಿ ಗ್ರಾಮೀಣ ಜನರ ಸಮಸ್ಯೆಗಳಿಗೆ ಗ್ರಾಮಕರಣಿಕರು ಧ್ವನಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಮುಖ್ಯ ಮಂತ್ರಿಗಳ ಸಂಸದೀಯ ಸಂಸದೀಯ ಕಾರ್ಯದರ್ಶಿ(ಕಂದಾಯ) ಐವನ್ ಡಿ'ಸೋಜ ಹೇಳಿದರು

ಅವರು ಮಂಗಳವಾರ ಪುತ್ತೂರು ಮಿನಿ ವಿಧಾನ ಸೌಧದಲ್ಲಿರುವ ಸಹಾಯಕ ಆಯುಕ್ತ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ನಡೆದ ಸಾರ್ವಜನಿಕರ ಕುಂದುಕೊರತೆಗಳ ಸಭೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಗ್ರಾಮಕರಣಿಕರಿಗೆ ಬಹಳಷ್ಟು ಜವಾಬ್ದಾರಿಯಿದೆ. ಸರಕಾರ ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೂ ದೊರೆಯುವಂತೆ ಮಾಡುವುದು ಮಾತ್ರವಲ್ಲದೆ ಸರಕಾರದಿಂದ ದೊರೆಯಬೇಕಾದ ಪಿಂಚನಿಗಳು ಕೆಲವೊಂದು ಭಾರಿ ವಿಳಂಬವಾದಾಗ ಜನರ ಮನವೊಳಿಸುವ ಕೆಲಸ ಮಾಡುವುದು ಬಹಳ ಮುಖ್ಯವಾಗಿದೆ ಎಂದರು.

ಸರಕಾರ ಜಾರಿಗೆ ತರುವ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪುವಲ್ಲಿ ಕಂದಾಯ ಇಲಾಖೆಯ ಪಾತ್ರ ಮಹತ್ವದ್ದು. ಸರಕಾರಕ್ಕೆ ಬರುವ ಒಳ್ಳೆಯ ಹಾಗೂ ಕೆಟ್ಟ ಹೆಸರಿನಲ್ಲಿ ನೀವೂ ಭಾಜನರು. ಈ ನಿಟ್ಟಿನಲ್ಲಿ ಗ್ರಾಮಕರಣಿಕರು, ಕಂದಾಯ ನಿರೀಕ್ಷಕರು ಸೇರಿದಂತೆ ಪ್ರತಿಯೊಬ್ಬ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು. 

ಪಿಂಚನಿ ಅದಾಲತ್ ಹಾಗೂ ಕಂದಾಯ ಅದಾಲತ್ ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳುವುದು, ಅತೀ ಆವಶ್ಯಕವಾದ ಪಡಿತರ ಚೀಟಿ ಶೀಘ್ರ ವಿತರಿಸುವುದು, 94ಸಿ ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ ಮೊದಲಾದ ಕಂದಾಯ ಇಲಾಖೆಯ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪುತ್ತೂರು ತಾಲೂಕಿನಲ್ಲಿ ಉಪವಿಭಾಗಾಧಿಕಾರಿ, ತಹಶೀಲ್ದಾರ್, ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮಕರಣಿಕರು ಸೇರಿದಂತೆ ಅಧಿಕಾರಿಗಳು ಉತ್ತಮ ತಂಡವಿದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು ಇಲ್ಲಿನ ಅಧಿಕಾರಿಗಳ ತಂಡ ಅಭಿನಂದನಾರ್ಹರು. ಇಲ್ಲಿನ ತಂಡದ ಕೆಲಸ ಕಾರ್ಯಗಳ ಬಗ್ಗೆ ನಾನು ಜಿಲ್ಲಾಧಿಕಾರಿ ಹಾಗೂ ಮುಖ್ಯ ಮಂತ್ರಿಗಳ ಸಭೆಯಲ್ಲಿಯೂ ಉಲ್ಲೇಖ ಮಾಡುತ್ತಿದ್ದೇನೆ ಎಂದರು. 

ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ತುರ್ತು ಕ್ರಮಕೈಗೊಳ್ಳುವುದು ಹಾಗೂ ಶೀಘ್ರವಾಗಿ ಮಾಹಿತಿ ನೀಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಆ್ಯಪ್ ಮಾಡಿದ್ದಾರೆ. ಅದರಂತೆ ಪುತ್ತೂರಿನಲ್ಲಿಯೂ ಮೊಬೈಲ್ ಆ್ಯಪ್ ರಚಿಸಿ ಅದರ ಮಳೆಗಾಲದಲ್ಲಿ ಉಂಟಾಗಬಹುದಾದ ವಿಕೋಪಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರವಾಗಿ ತಲುಪಿಸುವುದು ಹಾಗೂ ತುರ್ತು ಪರಿಹಾರ ಕ್ರಮಕೈಗೊಳ್ಳುವುದು ಸಾಧ್ಯ. ಇದರಿಂದಾಗಿ ಜನರು ಕಛೇರಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಐವನ್ ಡಿ'ಸೋಜ ಸಲಹೆ ನೀಡಿದರು.

ಕಂದಾಯ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವಲ್ಲಿ ಗ್ರಾಮಕರಣಿಕರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಇತರ ಅಧಿಕಾರಿಗಳಂತೆ ಗ್ರಾಮಕರಣಿಕರಿಗೂ ಪ್ರಯಾಣ ಭತ್ತೆ, ಹಾಗೂ ಮೊಬೈಲ್ ಸಿಮ್ ಸರಕಾರದ ವತಿಯಿಂದ ಒದಗಿಸುವಂತೆ ಸಹಾಯಕ ಆಯುಕ್ತ ಕೃಷ್ಣ ಮೂರ್ತಿ ಎಚ್.ಕೆ ಮನವಿ ಮಾಡಿದರು. ಕೆಲವು ಗ್ರಾಮಗಳಲ್ಲಿ ಗ್ರಾಮಕರಣಿಕರಿಗೆ ಸರಿಯಾದ ಕಛೇರಿ ಕಟ್ಟಡಗಳೇ ಇಲ್ಲ. ಮೂಲಭೂತ ಸೌಲಭ್ಯಗಳೂ ಇಲ್ಲ ಎಂದು ಸಂಸದೀಯ ಕಾರ್ಯದರ್ಶಿಯವರ ಗಮನಕ್ಕೆ ತಂದರು.

ಕಳೆದ ಬಾರಿ ಅಡಿಕೆ ತೋಟಗಳಿಗೆ ಬಾಧಿಸಿದ ಕೊಳೆರೋಗದ ಪರಿಹಾರಕ್ಕಾಗಿ ರೈತರು ಅರ್ಜಿ ಹಾಕಿದ್ದು ತಾಲೂಕಿನಲ್ಲಿ ಕೇವಲ ಶೇ.10ಮಂದಿ ರೈತರಿಗೆ ಮಾತ್ರ ಇದರ ಪ್ರಯೋಜನ ಪಡೆದಿದ್ದಾರೆ. ಶೇ.90ರಷ್ಟು ಮಂದಿ ರೈತರಿಗೆ ಇನ್ನೂ ಇದರ ಪ್ರಯೋಜನ ದೊರೆತಿಲ್ಲ. ಕಂದಾಯ ಇಲಾಖೆಯಲ್ಲಿ ವಿಚಾರಿಸಿದರೆ ಸ್ಪಷ್ಟ ಉತ್ತರ ದೊರೆಯುತ್ತಿಲ್ಲ ಎಂದು ಕಾವು ಹೇಮನಾಥ ಶೆಟ್ಟಿಯವರು ಆರೋಪಿಸಿದರು. ಕೊಳೆರೋಗ ಪರಿಹಾರ ನೇರವಾಗಿ ರೈತರ ಖಾತೆಗೆ ಜಮೆ ಆಗುತ್ತಿದೆ. ಇದರ ಬಗ್ಗೆ ತಾಲೂಕಿಗೆ ಯಾವುದೇ ಮಾಹಿರಿಗಳು ದೊರೆಯುವುದಿಲ್ಲ. ಜಿಲ್ಲಾಧಿಕಾರಿ ಕಚೇರಿಯಿಂದ ಮಾಹಿತಿ ಸಂಗ್ರಹಿಸಿ ತಿಳಿಸುವುದಾಗಿ ಸಹಾಯಕ ಆಯುಕ್ತ ಕೃಷ್ಣಮೂರ್ತಿ ತಿಳಿಸಿದರು. 

ಅಕ್ರಮ ಸಕ್ರಮ ಯೋಜನೆಯ ಫಾರಂ50ಹಾಗೂ 53ರಲ್ಲಿ ಮಂಜೂರಾದ ಜಾಗವನ್ನು 15 ವರ್ಷದ ಬಳಿಕ ಆವಶ್ಯಕತೆಗೆ ಅನುಗುಣವಾಗಿ ಮಾರಾಟ ಮಾಡಲು ಹಿಂದೆ ಜಿಲ್ಲಾಧಿಕಾರಿಗಳಿಗೆ ನಿರಾಕ್ಷೇಪನಾ ಪತ್ರ ನೀಡಲು ಅವಕಾಶವಿತ್ತು. ಆದರೆ ಈಗ ಸರಕಾರದ ಮಟ್ಟದಲ್ಲಿ ನಡೆಯುತ್ತಿದ್ದು ರೈತರು ಸಮಸ್ಯೆ ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಹಿಂದಿನಂತೆ ಜಿಲ್ಲಾಧಿಕಾರಿಗಳು ನಿರಾಕ್ಷೇಪನೆ ನೀಡಿ ಕ್ರಯ ಚೀಟಿ ಹಾಗೂ ವಿಭಾಗ ಪತ್ರ ಮಾಡಿಕೊಳ್ಳುವಂತೆ ಅವಕಾಶ ನೀಡಬೇಕು ಹಾಗೂ ಪೋಡಿ ಮುಕ್ತ ಗ್ರಾಮದಲ್ಲಿ ಏಕ ವ್ಯಕ್ತಿ ಪ್ಲಾಟಿಂಗ್‍ಗೆ ಅವಕಾಶ ನೀಡುವಂತೆ ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್ ಮನವಿ ಮಾಡಿದರು.

ಜಿ.ಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಸದಸ್ಯ ಸರ್ವೋತ್ತಮ ಗೌಡ, ತಾ.ಪಂ ಸದಸ್ಯೆ ಕೆ.ಟ ವಲ್ಸಮ್ಮ, ನಗರ ಸಭಾ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X