Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಕೃತಿ ಕಾಪಾಡದಿದ್ದರೆ ಮನುಕುಲ ನಾಶ:...

ಪ್ರಕೃತಿ ಕಾಪಾಡದಿದ್ದರೆ ಮನುಕುಲ ನಾಶ: ಸಂಸದೆ ಸುಮಲತಾ

ಮಂಡ್ಯ: ಸ್ವಚ್ಛ ಮೇವ ಜಯತೇ ಜನಾಂದೋಲನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Jun 2019 11:49 PM IST
share
ಪ್ರಕೃತಿ ಕಾಪಾಡದಿದ್ದರೆ ಮನುಕುಲ ನಾಶ: ಸಂಸದೆ ಸುಮಲತಾ

ಮಂಡ್ಯ, ಜೂ.11: ಪ್ರಕೃತಿಯನ್ನು ಕಾಪಾಡದಿದ್ದರೆ ಮನುಕುಲ ನಾಶವಾಗುತ್ತದೆ ಎಂದು ಎಚ್ಚರಿಸಿರುವ ಸಂಸದೆ ಸುಮಲತಾ ಅಂಬರೀಷ್,  ಪರಿಸರವನ್ನು ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆ ಎಂದು ಕರೆ ನೀಡಿದ್ದಾರೆ.

ತಾಲೂಕಿನ ಕೀಲಾರ ಗ್ರಾಮದಲ್ಲಿ ಮಂಗಳವಾರ ಸ್ವಚ್ಛ ಮೇವ ಜಯತೇ ಜನಾಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಊರಿಗೆ ರಸ್ತೆ, ಕಟ್ಟಡ, ಸೇತುವೆ ನಿರ್ಮಾಣದ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ ವಿನಾ ಶುದ್ಧ ಗಾಳಿ, ಕುಡಿಯುವ ನೀರು ಹಾಗೂ ಉತ್ತಮ ವಾತಾವರಣದ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ ಎಂದು ವಿಷಾದಿಸಿದರು.

ಹುಟ್ಟಿದಾಗಿನಿಂದ ಸಾಯುವವರೆಗೂ ಜೀವಂತವಾಗಿ ನೋಡಿಕೊಳ್ಳೋದು ಪ್ರಕೃತಿ. ಅಭಿವೃದ್ದಿಗಾಗಿ ಮರಗಿಡ ಕಡಿದರೆ ಅದರಿಂದಾಗುವ ಅನಾನುಕೂಲ ಏನೆಂಬುದನ್ನು ತಿಳಿಯಬೇಕು. ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಲು ಶಿಕ್ಷಕರು ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

ಕೆಲಸದಾಕೆ ಬರಲಿಲ್ಲವೆಂದು ನಮ್ಮ ಮನೆ ಕ್ಲೀನ್ ಮಾಡಿಕೊಳ್ಳುವಂತೆ, ಯಾರು ಮಾಡಲಿ ಬಿಡಲಿ ನಮ್ಮ ಪರಿಸರವನ್ನು ನಾವು ಉಳಿಸಬೇಕಿದೆ. ಯುವ ಶಕ್ತಿ ಮುಂದೆ ಯಾವ ಸರಕಾರಗಳು ಏನು ಮಾಡಲು ಸಾಧ್ಯವಿಲ್ಲ. ಹೀಗಾಗಿ ಪರಿಸರದ ಬಗ್ಗೆ ಯುವಶಕ್ತಿ ಕಾಳಜಿ ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಒಂದು ಕೊಡ ನೀರಿಗಾಗಿ ಕಿಲೋ ಮೀಟರ್ ದೂರ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಸುವ ಬಗ್ಗೆ ಪ್ರತಿಯೊಬ್ಬರಿಗೂ ಜವಾಬ್ಧಾರಿ ಇರಬೇಕು ಎಂದು ಅವರು ತಿಳಿಸಿದರು.

ಶಾಸಕ ಎಂ.ಶ್ರೀನಿವಾಸ್ ಮಾತನಾಡಿ, ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಅನೇಕ ರೋಗಗಳಿಂದ ದೂರವಿರಬಹುದಾಗಿದೆ. ಪ್ರತಿಯೊಬ್ಬರು ಸ್ವಪ್ರೇರಿತರಾಗಿ ಪ್ರಕೃತಿಯ ಬೆಳೆಸಲು ಹಾಗೂ ಸ್ವಚ್ಛತೆ ಕಾಪಾಡಲು ಮುಂದಾಗಬೇಕು ಎಂದರು.

ಜಿಪಂ ಸದಸ್ಯೆ ರಾಣಿ ಸಿದ್ಧರಾಜು, ತಾಪಂ ಸದಸ್ಯ ಕೆ.ಎನ್.ಶಿವರುದ್ರ, ಕೀಲಾರ ಗ್ರಾಪಂ ಅಧ್ಯಕ್ಷ ಕೆ.ಎನ್.ರಾಜಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ ಪ್ರಕಾಶ್ ಉಪಸ್ಥಿತರಿದ್ದರು.

ದಳಪತಿಗಳು ಗೈರು: ಶಾಸಕ ಎಂ.ಶ್ರೀನಿವಾಸ್ ಹೊರತುಪಡಿಸಿ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಸಚಿವ ಸಿ.ಎಸ್.ಪುಟ್ಟರಾಜು ಸೇರಿ ಎಲ್ಲಾ ಜೆಡಿಎಸ್ ಶಾಸಕರು ಮತ್ತು ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಕಾರ್ಯಕ್ರಮಕ್ಕೆ ಗೈರಾಗಿದ್ದು ಚರ್ಚೆಗೆ ಗ್ರಾಸವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X