Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಾವೆಂದು ಪಾಠ ಕಲಿಯುವುದು?

ನಾವೆಂದು ಪಾಠ ಕಲಿಯುವುದು?

-ಇಸ್ಮತ್ ಪಜೀರ್, ಮಂಗಳೂರು-ಇಸ್ಮತ್ ಪಜೀರ್, ಮಂಗಳೂರು11 Jun 2019 11:52 PM IST
share

ಮಾನ್ಯರೇ,

ಕೊಡಗಿಗೆ ಕೊಡಗೇ ಮುಳುಗಿ ಹೋಗಿದ್ದು ಇತಿಹಾಸದ ಪುಟ ಸೇರುವಷ್ಟು ಹಳತಾಗಿಲ್ಲ. ಬರೀ ಒಂದು ವರ್ಷ. ಮತ್ತೆ ಹಳೆಯ ಕೊಡಗು ನಿರ್ಮಿಸಲು ಕನಿಷ್ಠವೆಂದರೂ ಇಪ್ಪತ್ತು ವರ್ಷಗಳೇ ಬೇಕಾದೀತು. ಅದು ನಮ್ಮ ತಲೆಯನ್ನು ಇನ್ನೂ ಕೊರೆಯಬೇಕಿತ್ತು. ನಮಗೆ ಅದನ್ನು ನೆನಪಿಸಿಕೊಂಡಾಗ ನಮ್ಮ ಬೆನ್ನು ಮೂಳೆಯಲ್ಲಿ ಚಳಿ ಹುಟ್ಟಬೇಕಾಗಿತ್ತು. ಪ್ಲಾಂಟರ್- ಕೂಲಿಗಳೆಂಬ ಭೇದವಿಲ್ಲದೆ, ದಣಿ-ಆಳು ಎಂಬ ಭೇದವಿಲ್ಲದೇ ನಿರಾಶ್ರಿತರ ಪುನರ್ವಸತಿ ಕೇಂದ್ರಗಳಲ್ಲಿ ಯಾರ್ಯಾರೋ ಕೊಡುವ ತುಂಡು ಬಟ್ಟೆಗಾಗಿ ಕೈ ಚಾಚಿದ್ದು, ತಟ್ಟೆ ಹಿಡಿದು ಒಪ್ಪೊತ್ತಿನ ಗಂಜಿಗಾಗಿ ಸರತಿ ಸಾಲಲ್ಲಿ ನಿಂತಿದ್ದು ಇದೆಂದೂ ಮರೆತು ಹೋಗದು ಎಂದೇ ಭಾವಿಸಿದ್ದ ನಮಗೆ ಇದೀಗ ಮತ್ತೆ ನಿರಾಶೆಯಾಗುತ್ತಿದೆ. ನಮ್ಮ ಪ್ರಭುತ್ವ ಕೆಟ್ಟ ಮೇಲೂ ಪಾಠ ಕಲಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಈಗಾಗಲೇ ಅರೆ ಬೋಳಾದ ಕೊಡಗನ್ನು ಮತ್ತೆ ಬೋಳಾಗಿಸುವ ಕೆಲಸ ಭರದಿಂದ ಸಾಗುತ್ತಿದೆ. ಕೊಡಗಿನ ಕೆ.ನಿಡುಗಣೆ ಗ್ರಾಮದಲ್ಲಿ ಉಳ್ಳವರಿಗೆ ರಜಾ ದಿನಗಳಲ್ಲಿ ಬಂದು ಮಜಾ ಮಾಡಲೆಂದು ಬೃಹತ್ ರೆಸಾರ್ಟ್ ನಿರ್ಮಿಸುವ ಸಲುವಾಗಿ ಬರೋಬ್ಬರಿ ಎಂಟು ನೂರ ಎಂಟು ಮರಗಳನ್ನು ಕಡಿಯಲು ಸರಕಾರ ಹಸಿರು ನಿಶಾನೆ ತೋರಿಸಿ ಈಗಾಗಲೇ ನೂರು ಬೃಹತ್ ಮರಗಳನ್ನು ಧರಾಶಾಯಿಯಾಗಿಸಿ ಬಿಟ್ಟಿದೆ.

ಮರ ಕಡಿಯುವ ಕೆಲಸ ಶುರುವಾಗಿ ಈಗಾಗಲೇ ಎರಡು ತಿಂಗಳುಗಳು ಕಳೆದಿವೆ. ಮೂರ್ನಾಲ್ಕು ದಿನಗಳ ಹಿಂದಷ್ಟೇ ಅದು ಬೆಳಕಿಗೆ ಬಂದಿದೆ. ಅವರಲ್ಲಿ ಪ್ರಶ್ನಿಸಿದರೆ ಸಂಬಂಧಿತ ಇಲಾಖೆಯಿಂದ ಪಡೆದ ಅನುಮತಿ ಪತ್ರವನ್ನು ತೋರಿಸುತ್ತಾರೆ..

ಅತಿವೃಷ್ಟಿಯೋ...ಅನಾವೃಷ್ಟಿಯೋ... ಇವೆರಡನ್ನು ತಡೆಯಬಹುದಾದ ಪ್ರಬಲ ಶಕ್ತಿಯಿರುವುದು ಮರಗಳಿಗೆ ಎಂಬ ವಾಸ್ತವ ನಾವು ಮರೆಯದಿರೋಣ. ಮರಗಳು, ಬೆಟ್ಟಗಳು ಭೂಮಿಯನ್ನು ಹಿಡಿದು ನಿಲ್ಲಿಸಿದ ಆಧಾರಸ್ತಂಭಗಳು ಎನ್ನುವುದನ್ನು ಮರೆಯದಿರೋಣ. ಕೊಡಗಿನ ಉಸ್ತುವಾರಿ ಸಚಿವರು, ಅರಣ್ಯ ಸಚಿವರು ಮತ್ತು ಮುಖ್ಯಮಂತ್ರಿಗಳು ಕೂಡಲೇ ಮರಗಳ ಸಂಹಾರವನ್ನು ತಡೆಯಬೇಕೆಂದು ಕೈ ಮುಗಿದು ಕೇಳುತ್ತಿದ್ದೇನೆ. ಈಗಾಗಲೇ ನೀಡಿದ ಅನುಮತಿಯನ್ನು ಜನಹಿತ ದೃಷ್ಟಿಯಿಂದ, ರಾಜ್ಯದ ಹಿತದ ದೃಷ್ಟಿಯಿಂದ ಹಿಂಪಡೆಯಬೇಕು.

share
-ಇಸ್ಮತ್ ಪಜೀರ್, ಮಂಗಳೂರು
-ಇಸ್ಮತ್ ಪಜೀರ್, ಮಂಗಳೂರು
Next Story
X