Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ವಂಚನೆ ಪ್ರಕರಣ: ಸಿಬಿಐ ತನಿಖೆಗೆ...

ಐಎಂಎ ವಂಚನೆ ಪ್ರಕರಣ: ಸಿಬಿಐ ತನಿಖೆಗೆ ಶಾಸಕ ರೋಷನ್ ಬೇಗ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Jun 2019 8:04 PM IST
share
ಐಎಂಎ ವಂಚನೆ ಪ್ರಕರಣ: ಸಿಬಿಐ ತನಿಖೆಗೆ ಶಾಸಕ ರೋಷನ್ ಬೇಗ್ ಆಗ್ರಹ

ಬೆಂಗಳೂರು, ಜೂ.12: ಐ ಮಾನಿಟರಿ ಅಡ್ವೈಸರಿ(ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿಬಿಐಗೆ ಶಿಫಾರಸ್ಸು ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ರೋಷನ್ ಬೇಗ್ ಆಗ್ರಹಿಸಿದರು.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಸರಕಾರ ಎಸ್‌ಐಟಿ ರಚನೆ ಮಾಡಿರುವುದಕ್ಕೆ ನನ್ನ ಸ್ವಾಗತವಿದೆ. ಆದರೆ, ಈ ಪ್ರಕರಣದ ತ್ವರಿತ ವಿಚಾರಣೆಗಾಗಿ ಸಿಬಿಐ ತನಿಖೆ ಸೂಕ್ತ ಎಂದರು.

ಈ ವಿಚಾರದಲ್ಲಿ ನಾನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ವಂಚಕ ಮನ್ಸೂರ್ ಖಾನ್, ಆತನ ವ್ಯವಹಾರಗಳಿಗೆ ನನಗಾಗಲಿ, ನನ್ನ ಕುಟುಂಬದ ಸದಸ್ಯರಿಗಾಗಲಿ ಯಾವುದೇ ರೀತಿಯ ಸಂಬಂಧವಿಲ್ಲ. ಆತನ ಸಂಸ್ಥೆಯಲ್ಲಿ ಹೂಡಿಕೆ ಮಾಡುವಂತೆ ನಾನು ಯಾರಿಗೂ ಪ್ರೋತ್ಸಾಹವನ್ನು ನೀಡಿಲ್ಲ ಎಂದು ಅವರು ಹೇಳಿದರು.

ಐಎಂಎ ಸಂಸ್ಥೆಯ ಹಗರಣದ ಜೊತೆಗೆ ಆಂಬಿಡೆಂಟ್, ಇಂಜಾಝ್, ಆಲಾ, ಕ್ಯಾಪಿಟಲ್, ಬುರಾಕ್ ಸೇರಿದಂತೆ ಸುಮಾರು 13 ಕಂಪೆನಿಗಳು ಇಂತಹ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿವೆ. ಈ ಎಲ್ಲ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ರೋಷನ್ ಬೇಗ್ ಹೇಳಿದರು.

ಮನ್ಸೂರ್ ಖಾನ್ ನಾಪತ್ತೆಯಾಗುವ ಮುನ್ನ 36 ಗಂಟೆಯಲ್ಲಿ ಆತ ಯಾರ ಜೊತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ವಾಟ್ಸ್ ಆ್ಯಪ್‌ನಲ್ಲಿ ಆತನ ಜೊತೆ ಸಂಪರ್ಕದಲ್ಲಿದ್ದವರು ಯಾರು? ಎಂಬುದರ ಬಗ್ಗೆ ಕಾಲ್ ಡಿಟೇಲ್ಸ್ ತೆಗೆಯಲಿ, ಸತ್ಯಾಂಶ ಹೊರ ಬರುತ್ತದೆ. ಯಾರೋ ಒಬ್ಬ ವಂಚಕ ನನಗೆ 400 ಕೋಟಿ ರೂ.ಕೊಟ್ಟಿದ್ದೇನೆ ಎಂದು ಆಡಿಯೋ ಕಳುಹಿಸಿ ಬಿಟ್ಟರೆ ಅದನ್ನು ನಂಬುವುದು ಹೇಗೆ. ಈ ಪ್ರಕರಣ ಸಿಬಿಐ ಮೂಲಕ ತನಿಖೆಯಾಗಲಿ ಎಂದು ಅವರು ಹೇಳಿದರು.

ಸಿಬಿಐ ತನಿಖೆಗೆ ಒಪ್ಪಿಸಿದರೆ ಅವರು ರೆಡ್ ಅಲರ್ಟ್ ಘೋಷಣೆ ಮಾಡಿ, ತ್ವರಿತ ಗತಿಯಲ್ಲಿ ತನಿಖೆ ಮಾಡುತ್ತಾರೆ. ಮನ್ಸೂರ್ ಖಾನ್ ತನ್ನ ಖಾತೆಗೆ ಒಂದು ಸಾವಿರ ಕೋಟಿ ರೂ.ಗಳನ್ನು ಹಾಕಿಸಿಕೊಂಡಿದ್ದಾನೆ ಎಂಬ ಮಾಹಿತಿಯಿದೆ. ಆತನ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿ, ಆ ಹಣವನ್ನು ಹೂಡಿಕೆದಾರರಿಗೆ ಹಂಚಿಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ನಾನು ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋಗಿದ್ದೆ. ಈ ವೇಳೆ ಒಂದು ಮನ್ಸೂರ್ ಖಾನ್ ಅವರದ್ದು ಎನ್ನಲಾದ ಆಡಿಯೋ ಬಿಡುಗಡೆಯಾಗಿ, ಅದರಲ್ಲಿ ನಾನು 400 ಕೋಟಿ ರೂ.ಗಳನ್ನು ಪಡೆದಿರುವುದಾಗಿ ಆಪಾದಿಸಲಾಗಿದೆ. ನಾನಾಗಲಿ, ನನ್ನ ಮಗನಾಗಲಿ ಐಎಂಎ ಸಂಸ್ಥೆಯಿಂದ ಯಾವುದೇ ಹಣವನ್ನು ಪಡೆದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ನನ್ನ ಉರ್ದು ದಿನಪತ್ರಿಕೆ ‘ಸಿಯಾಸತ್’ಗೆ ನೆರವು ನೀಡುವುದಾಗಿ ಹೇಳಿ ಕಳೆದ ಒಂದೂವರೆ ವರ್ಷದಿಂದ ಅವರು ಸಹಕಾರ ನೀಡುತ್ತಿದ್ದರು. ಅಲ್ಲದೇ, ನನ್ನ ಮತ ಕ್ಷೇತ್ರದಲ್ಲಿನ ವಿ.ಕೆ.ಉಬೇದುಲ್ಲಾ ಸರಕಾರಿ ಉರ್ದು ಶಾಲೆಯನ್ನು ಖಾಸಗಿ ಸಹಭಾಗಿತ್ವದಡಿಯಲ್ಲಿ ಅಭಿವೃದ್ಧಿಪಡಿಸಿದ್ದಾರೆ ಎಂದು ರೋಷನ್ ಬೇಗ್ ಹೇಳಿದರು.

ಸಚಿವ ಝಮೀರ್ ಅಹ್ಮದ್ ಖಾನ್ ನನ್ನ ಕಿರಿಯ ಸಹೋದರ. ಆತನ ಮೇಲೆ ನನಗೆ ಅಪನಂಬಿಕೆಯಿಲ್ಲ. ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ಧ್ವನಿ ಎತ್ತುತ್ತಿದ್ದಂತೆ ನನ್ನ ವಿರುದ್ಧ ಈ ರೀತಿಯ ಆಧಾರ ರಹಿತವಾದ ಗಂಭೀರ ಆಪಾದನೆಗಳನ್ನು ಮಾಡಲಾಗುತ್ತಿದೆ. ನಾನು ಐಎಂಎ ಸಂಸ್ಥೆಯಿಂದ ಚೆಕ್ ಮೂಲಕ ಐದು ಕೋಟಿ ರೂ.ಗಳನ್ನು ಪಡೆದಿಲ್ಲ ಎಂದು ಅವರು ಹೇಳಿದರು.

ರಾಜಕೀಯವಾಗಿ ನನ್ನನ್ನು ಮುಗಿಸಲು ಈ ಐಎಂಎ ಸಂಸ್ಥೆಯ ಹಗರಣವನ್ನು ಸೃಷ್ಟಿಸಲಾಗಿದೆ ಎಂಬ ಅನುಮಾನ ಮೂಡುತ್ತಿದೆ. ನಾನು ಕೇವಲ ಒಬ್ಬ ರಾಜಕಾರಣಿಯಲ್ಲ, ಹೋರಾಟಗಾರ. ವಂಚನೆಗೆ ಒಳಗಾಗಿರುವ ಸಾಮಾನ್ಯರ ಜನರ ಜೊತೆ ನಾನಿದ್ದೇನೆ. ಎಸ್‌ಐಟಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ನನ್ನ ಮತಕ್ಷೇತ್ರದಲ್ಲಿ ಹಣ ಕಳೆದುಕೊಂಡಿರುವವರನ್ನು ಭೇಟಿ ಮಾಡುತ್ತೇನೆ ಎಂದು ರೋಷನ್ ಬೇಗ್ ಹೇಳಿದರು.

ರಾಜಕೀಯವಾಗಿ ನನ್ನ ಜೀವನದಲ್ಲಿ ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳಿಂದಾಗಿ, ನನ್ನ ಹಿತೈಷಿಗಳು ಎನಿಸಿಕೊಂಡವರೇ ಒಳಸಂಚು ಮಾಡಿ ನನಗೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಐಎಂಎ ವಂಚನೆ ಪ್ರಕರಣದ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೋಷನ್ ಬೇಗ್ ಪುತ್ರ ರೂಮಾನ್ ಬೇಗ್, ಬಿಬಿಎಂಪಿ ಸದಸ್ಯರಾದ ಗುಣಶೇಖರ್, ಶಕೀಲ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X