Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಎಂಎ ಸಂಸ್ಥೆಯೊಂದಿಗೆ ಯಾವುದೆ...

ಐಎಂಎ ಸಂಸ್ಥೆಯೊಂದಿಗೆ ಯಾವುದೆ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ: ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ12 Jun 2019 8:17 PM IST
share
ಐಎಂಎ ಸಂಸ್ಥೆಯೊಂದಿಗೆ ಯಾವುದೆ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ: ಝಮೀರ್ ಅಹ್ಮದ್ ಖಾನ್

ಬೆಂಗಳೂರು, ಜೂ.12: ಐಎಂಎ ಸಂಸ್ಥೆಯ ಮಾಲಕ ಮನ್ಸೂರ್ ಖಾನ್‌ಗೆ ನಗರದ ರಿಚ್‌ಮಂಡ್ ಟೌನ್‌ನಲ್ಲಿರುವ ನನ್ನ ನಿವೇಶನವನ್ನು ಕಾನೂನಾತ್ಮಕವಾಗಿ ಮಾರಾಟ ಮಾಡಿದ್ದನ್ನು ಹೊರತು ಪಡಿಸಿದಂತೆ ಮತ್ಯಾವ ವ್ಯವಹಾರವನ್ನು ನಾನು ಮಾಡಿಲ್ಲವೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಎಂಎ ಸಂಸ್ಥೆಯವರು ಸುಮಾರು 13ವರ್ಷಗಳಿಂದ ನಗರದಲ್ಲಿ ವ್ಯವಹಾರ ನಡೆಸುತ್ತಿದ್ದರು. ಅವರೊಂದಿಗೆ ನಿಕಟವಾದ ಯಾವುದೆ ಸಂಪರ್ಕ ಇರಲಿಲ್ಲ. ಆದರೆ, 2017ರ ಡಿಸೆಂಬರ್‌ನಲ್ಲಿ ರಿಚ್‌ಮಂಡ್ ಟೌನ್‌ನಲ್ಲಿರುವ ನನ್ನ ನಿವೇಶವನ್ನು ಕೊಳ್ಳುವುದಾಗಿ ಐಎಂಎ ಸಂಸ್ಥೆಯ ಮಾಲಕ ಮನ್ಸೂರ್ ಖಾನ್ ಒತ್ತಾಯಿಸಿದ್ದರು. ಹೀಗಾಗಿ ವ್ಯವಹಾರದ ಹಿನ್ನೆಲೆಯಲ್ಲಿ ಕಾನೂನಾತ್ಮಕವಾಗಿ ಆಗಿನ ಮಾರುಕಟ್ಟೆಯ ದರದಂತೆ ಒಟ್ಟು 9.98 ಕೋಟಿ ರೂ.ಗೆ ಮಾರಾಟ ಮಾಡಿದೆ ಎಂದರು.

ನನ್ನ ನಿವೇಶನದ ಮಾರಾಟದ ಎಲ್ಲ ಪ್ರಕ್ರಿಯೆಯ ಕಾನೂನಾತ್ಮಕವಾಗಿಯೆ ಇದೆ. ಮೊದಲಿಗೆ ಡಿ.11, 2017ರಂದು ಐಎಂಎ ಸಂಸ್ಥೆಯು 5 ಕೋಟಿ ರೂ.ನ್ನು ಮುಂಗಡವಾಗಿ ಆರ್‌ಟಿಜಿಎಸ್ ಮೂಲಕ ನನ್ನ ಖಾತೆಗೆ ಹಾಕಿದ್ದಾರೆ. ನಂತರ ಜೂ.5, 2018ರಂದು ಉಳಿದ ಹಣವನ್ನು ಪಡೆದು ಕಾನೂನಾತ್ಮಕವಾಗಿ ನನ್ನ ನಿವೇಶನವನ್ನು ಅವರ ಹೆಸರಿಗೆ ನೋಂದಣಿ ಮಾಡಿಕೊಟ್ಟಿದ್ದೇನೆಂದು ಅವರು ಮಾಹಿತಿ ನೀಡಿದರು.

ಐಎಂಎ ಸಂಸ್ಥೆಯ ಮಾಲಕನ ಹೆಸರಿನಲ್ಲಿರುವ ಎಲ್ಲ ಆಸ್ತಿ ವಿವರಗಳ ಮಾಹಿತಿಯನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ನೀಡಿದ್ದೇವೆ. ಹಾಗೂ ಮನ್ಸೂರು ಖಾನ್ ಮಾಡಿರುವ ಬೇನಾಮಿ ಆಸ್ತಿಯ ಬಗ್ಗೆ ಹುಡುಕಾಟ ನಡೆಸುತ್ತಿದ್ದೇವೆ. ಒಟ್ಟಾರೆ, ಬಡವರ ಹಣವನ್ನು ಹಿಂದಿರುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಐಎಂಎ ಮಾಲಕನಿಗೆ ಮನವಿ: ಸಾವಿರಾರು ಸಂಖ್ಯೆಯಲ್ಲಿ ಬಡವರು ತಮ್ಮ ಮನೆ ಹಾಗೂ ವಾಹನಗಳನ್ನು ಮಾರಾಟ ಮಾಡಿ ಐಎಂಎ ಸಂಸ್ಥೆಯನ್ನು ಹಣ ಹೂಡಿಕೆ ಮಾಡಿದ್ದಾರೆ. ಈಗ ಏಕಾಏಕಿ ಐಎಂಎ ಸಂಸ್ಥೆಯ ಮಾಲಕ ತಲೆಮರೆಸಿಕೊಂಡರೆ ಜನಸಾಮಾನ್ಯರ ಗತಿ ಏನು. ಹೀಗಾಗಿ ಎಲ್ಲಿಯೆ ಇದ್ದರೂ ಮನ್ಸೂರ್‌ಖಾನ್ ಬಂದು ಬಡವರ ಹಣ ವಾಪಸ್ ನೀಡುವ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

ಐಎಂಎ ಸಂಸ್ಥೆಯ ಮಾಲಕ ಮನ್ಸೂರ್ ಖಾನ್ ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಹಣ ನೀಡಲಾಗಿದೆಯೆಂದು ಆಡಿಯೋದಲ್ಲಿ ಹೇಳಲಾಗಿದೆ. ಯಾರ್ಯಾರಿಗೆ ಎಷ್ಟೆಷ್ಟು ಹಣ ನೀಡಿದ್ದಾರೆಂದು ಗೊತ್ತಾಗಬೇಕಾದರೆ ಅವರೇ ಬರಬೇಕು. ಸರಕಾರ ಅವರ ಬೆಂಬಲಿಕ್ಕಿದ್ದು, ರಾಜಕಾರಣಿಗಳಿಂದ, ಅಧಿಕಾರಿಗಳಿಂದ ಹಣ ಪಡೆದು ಬಡವರ ಹಣ ವಾಪಾಸ್ ಕೊಡಬಹುದು. ಹೀಗಾಗಿ ಮನ್ಸೂರ್ ಖಾನ್ ಎಲ್ಲಿದ್ದರೂ ಬರಬೇಕೆಂದು ಅವರು ಹೇಳಿದರು.

ಡಿಸೆಂಬರ್, 2017ಕ್ಕೂ ಮೊದಲು ಐಎಂಎ ಸಂಸ್ಥೆಯ ಮಾಲಕ ಮನ್ಸೂರ್‌ಖಾನ್‌ನೊಂದಿಗೆ ನಾನು ಯಾವುದೆ ಅವ್ಯವಹಾರ ನಡೆಸಿಲ್ಲ. ಅವರನ್ನು ಮೂರರಿಂದ ನಾಲ್ಕು ಬಾರಿ ಭೇಟಿ ಆಗಿರಬಹುದಷ್ಟೆ. ಕಳೆದ 13 ವರ್ಷದಿಂದ ಅವರು ನಗರದಲ್ಲಿ ಅಪಾರ್ಟ್‌ಮೆಂಟ್, ಮೆಡಿಕಲ್, ಶಿಕ್ಷಣ ಸಂಸ್ಥೆಗಳು ಹಾಗೂ ಜ್ಯುವೆಲರಿ ಅಂಗಡಿ ನಡೆಸುತ್ತಿದ್ದರಿಂದ ಅವರ ಮೇಲೆ ವಿಶ್ವಾಸ ಇತ್ತು.

ಕಳೆದ ತಿಂಗಳು ಐಎಂಎ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ ಕೆಲವರು ನನಗೆ ವಾಟ್ಸ್ ಆ್ಯಪ್ ಮೆಸೇಜ್ ಮಾಡಿ, ಎರಡು ಮೂರು ತಿಂಗಳಿಂದ ಹಣ ಕೊಡುತ್ತಿಲ್ಲವೆಂದು ಆರೋಪಿಸಿದ್ದರು. ಹೀಗಾಗಿ ನಾನೇ ಐಎಂಎ ಜ್ಯುವೆಲ್ಸ್ ಅಂಗಡಿಗೆ ಖುದ್ದಾಗಿ ಹೋಗಿ ಭೇಟಿ ನೀಡಿ ವಿಚಾರಿಸಿದ್ದೆ. ಆ ಸಂದರ್ಭದಲ್ಲಿ ಮನ್ಸೂರ್ ಖಾನ್ ವ್ಯವಹಾರದಲ್ಲಿ ಯಾವುದೆ ಸಮಸ್ಯೆಯಿಲ್ಲ. ಈದುಲ್ ಫಿತ್ರ್ ಹಬ್ಬದ ನಂತರ ಹಣ ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು. ಈಗ ಬಡವರಿಗೆ ಮೋಸ ಮಾಡಿ ಹೋಗಿದ್ದಾನೆ ಎಂದು ಹೇಳಿದರು.

ಐಎಂಎ ವಂಚನೆ ಪ್ರಕರಣವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಸ್‌ಐಟಿಗೆ(ವಿಶೇಷ ತನಿಖಾ ತಂಡಕ್ಕೆ) ವಹಿಸಿರುವುದು ಅಭಿನಂದನೀಯ. ನಮ್ಮ ರಾಜ್ಯದ ಪೊಲೀಸರ ಮೇಲೆ ವಿಶ್ವಾಸವಿದೆ. ಆದರೆ, ಇದರಿಂದಲೂ ಸರಿಯಾದ ತನಿಖೆ ನಡೆಯುತ್ತಿಲ್ಲವೆಂದು ಅನುಮಾನ ಬಂದರೆ, ಸಿಬಿಐಗೆ ಒತ್ತಾಯಿಸಲಾಗುವುದು 

-ಝಮೀರ್ ಅಹ್ಮದ್ ಖಾನ್, ಸಚಿವ, ಆಹಾರ ಮತ್ತು ನಾಗರಿಕ ಸರಬರಾಜು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X