Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದ ಸಾರ್ವಜನಿಕ ಸುರಕ್ಷತಾ...

ಜಮ್ಮು ಕಾಶ್ಮೀರದ ಸಾರ್ವಜನಿಕ ಸುರಕ್ಷತಾ ಕಾಯ್ದೆ ಕುರಿತ ಆ್ಯಮ್ನೆಸ್ಟಿ ವರದಿ ಬಿಡುಗಡೆಗೆ ಅನುಮತಿ ನಿರಾಕರಣೆ

“ಕಾಯ್ದೆಯಿಂದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆ”

ವಾರ್ತಾಭಾರತಿವಾರ್ತಾಭಾರತಿ13 Jun 2019 1:06 PM IST
share
ಜಮ್ಮು ಕಾಶ್ಮೀರದ ಸಾರ್ವಜನಿಕ ಸುರಕ್ಷತಾ ಕಾಯ್ದೆ ಕುರಿತ ಆ್ಯಮ್ನೆಸ್ಟಿ ವರದಿ ಬಿಡುಗಡೆಗೆ ಅನುಮತಿ ನಿರಾಕರಣೆ

ಹೊಸದಿಲ್ಲಿ, ಜೂ.13:  ಜಮ್ಮು ಕಾಶ್ಮೀರದ ವಿವಾದಿತ ಸಾರ್ವಜನಿಕ ಸುರಕ್ಷತಾ ಕಾಯಿದೆಯ ಕುರಿತಾದ ವರದಿಯನ್ನು ಬಿಡುಗಡೆಗೊಳಿಸುವ ಉದ್ದೇಶದಿಂದ ಬುಧವಾರ ಶ್ರೀನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಲು ಉದ್ದೇಶಿಸಿದ್ದ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಗೆ  ಅನುಮತಿ ನಿರಾಕರಿಸಲಾಗಿದೆ. ಪ್ರಸಕ್ತ `ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ' ಕಾರಣ ನೀಡಿ ಜಿಲ್ಲಾಡಳಿತ ಈ ಪತ್ರಿಕಾಗೋಷ್ಠಿಗೆ ಅನುಮತಿ ನಿರಾಕರಿಸಿದೆ.

ಶ್ರೀನಗರ ಜಿಲ್ಲಾಧಿಕಾರಿ ಕಚೇರಿಯ ಕೆಲ ಅಧಿಕಾರಿಗಳು ಈ ಕುರಿತಂತೆ ಮೌಖಿಕ ಮಾಹಿತಿ ನೀಡಿದ್ದಾರೆಂದು ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ಮಾಧ್ಯಮ ಘಟಕದ ಉಸ್ತುವಾರಿ ಹೊಂದಿರುವ ನದಿಯಾ ಈರಂ ತಿಳಿಸಿದ್ದಾರೆ.

ಆಮ್ನೆಸ್ಟಿ ವರದಿ ‘ಟೈರೆನ್ನಿ ಆಫ್ ಎ ಲಾಲೆಸ್ಸ್ ಲಾ : ಡಿಟೆನ್ಶನ್ ವಿದೌಟ್ ಚಾರ್ಜ್ ಆರ್ ಟ್ರಯಲ್ ಅಂಡರ್ ದಿ ಜೆ & ಕೆ ಪಬ್ಲಿಕ್ ಸೇಫ್ಟಿ ಆ್ಯಕ್ಟ್'' ಅನ್ನು  ಜಾಗತಿಕವಾಗಿ ಆನ್‍ಲೈನ್ ಮೂಲಕ ಬಿಡುಗಡೆಗೊಳಿಸಲಾಗಿದ್ದು, ಈ ವಿವಾದಿತ ಕಾಯಿದೆಯನ್ನು ವಾಪಸ್ ಪಡೆಯಬೇಕೆಂದು ವರದಿಯಲ್ಲಿ ಆಮ್ನೆಸ್ಟಿ ಆಗ್ರಹಿಸಿದೆ.

ರಾಜ್ಯದ ಆಡಳಿತ ಹಾಗೂ ಸ್ಥಳೀಯ ಜನರ ನಡುವೆ ಉದ್ವಿಗ್ನತೆಯನ್ನು ಈ ಕಾಯಿದೆ ಪ್ರಚೋದಿಸುತ್ತಿದೆಯೆಂದೂ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮುಖ್ಯಸ್ಥ ಆಕಾರ್ ಪಟೇಲ್ ಹೇಳಿದ್ದಾರೆ.

ರಾಜ್ಯದ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಈ ಕಾಯಿದೆಯಡಿ ಎರಡು ವರ್ಷಗಳ ತನಕ  ಬಂಧಿಸಬಹುದಾಗಿದೆ ಹಾಗೂ ವ್ಯಕ್ತಿಯೊಬ್ಬ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಕಾರ್ಯಾಚರಿಸಿದರೆ ಒಂದು ವರ್ಷ ತನಕ ಬಂಧನದಲ್ಲಿಡುವ ಅಧಿಕಾರವನ್ನು ಆಡಳಿತಕ್ಕೆ ಈ ಕಾನೂನು  ಒದಗಿಸುವುದಲ್ಲದೆ ಬಂಧನದ ಸಮಯ ಯಾವುದೇ ಮಾಹಿತಿ ನೀಡುವ ಅಗತ್ಯವೂ ಇಲ್ಲವಾಗಿದೆ.

ಈ ಕಾಯಿದೆಯಡಿ 2007 ಹಾಗೂ 2016ರ ನಡುವೆ  2,400 ಜನರನ್ನು ಬಂಧಿಸಲಾಗಿತ್ತಾದರೂ ಅವುಗಳಲ್ಲಿ ಶೇ 58ರಷ್ಟು ಮಂದಿಯನ್ನು ನ್ಯಾಯಾಲಯಗಳು ಖುಲಾಸೆಗೊಳಿಸಿದ್ದವು.

ಈ ಕಾಯಿದೆಯಡಿಯಲ್ಲಿ 2012-2018ರ ಅವಧಿಯಲ್ಲಿ 210 ಜನರ ಬಂಧನ ಪ್ರಕರಣಗಳನ್ನು ತನ್ನ ವರದಿ ಸಿದ್ಧ ಪಡಿಸುವಾಗ ಆಮ್ನೆಸ್ಟಿ ಪರಿಶೀಲಿಸಿತ್ತಲ್ಲದೆ ಈ ಕಾನೂನನ್ನು ದುರುಪಯೋಗ ಪಡಿಸಲಾಗುತ್ತಿದೆಯೆಂದೂ ಕಂಡು ಕೊಂಡಿತ್ತು. ಬಂಧಿತರಿಗೆ ಜಾಮೀನು ನಿರಾಕರಿಸುವ ನಿಟ್ಟಿನಲ್ಲಿ ನ್ಯಾಯಾಧೀಶರು ನೀಡುತ್ತಿರುವ ಆದೇಶಗಳು ಒಂದೇ ರೀತಿಯಾಗಿದ್ದವು.  ಈ ಕಾಯಿದೆಯು ಅಂತಾರಾಷ್ಟ್ರೀಯ  ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆಯೂ ಆಗಿದೆ ಎಂದು ಆಮ್ನೆಸ್ಟಿ ಹೇಳಿದೆ.

ಈ ಕಾಯಿದೆ ಮತ್ತದರ ಜಾರಿ ಕುರಿತಾದ ವರದಿಗಳನ್ನು ಆಮ್ನೆಸ್ಟಿ 2011 ಹಾಗೂ 2012ರಲ್ಲಿಯೂ ಪ್ರಕಟಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X