Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕರ್ನಾಟಕ ಜಾನಪದ ಪರಿಷತ್ತಿನ...

ಉಡುಪಿ: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Jun 2019 9:58 PM IST
share

ಉಡುಪಿ, ಜೂ.13:ಕರ್ನಾಟಕ ಜಾಪದ ಕಲೆಗಳ ಪುನರುಜ್ಜೀವನ, ಸಂಶೋಧನೆ ಹಾಗೂ ಸಂರಕ್ಷಣೆಯ ಉದ್ದೇಶದಿಂದ ಖ್ಯಾತ ಜಾನಪದ ಸಂಗ್ರಾಹಕ ಹಾಗೂ ಸಂಶೋಧಕ ಎಚ್.ಎಲ್.ನಾಗೇಗೌಡರಿಂದ ಸ್ಥಾಪಿಸಲ್ಪಟ್ಟ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ ಜೂ.16ರ ರವಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ತಲ್ಲೂರು ಶಿವರಾಮ ಶೆಟ್ಟಿ ಅವರು ಗುರುವಾರ ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. 1979ರಲ್ಲಿ ನಾಡೋಜ ನಾಗೇಗೌಡರಿಂದ ಸ್ಥಾಪನೆಗೊಂಡ ಪರಿಷತ್ತು ಇಂದು ನಾಡಿನ ಜಾನಪದ ಸಂಪತ್ತಿನ ಸಂಶೋಧನೆ, ದಾಖಲೀಕರಣ, ಪ್ರದರ್ಶನ, ತರಬೇತಿ ಹಾಗೂ ಪ್ರಸಾರಗಳಲ್ಲಿ ನಿರತವಾಗಿದೆ ಎಂದರು.

ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆಯೊಂದಿಗೆ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಅಲ್ಲದೇ ತಾಲೂಕು ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣವೂ ಅಂದು ನಡೆಯಲಿದೆ ಎಂದು ಶಿವರಾಮ ಶೆಟ್ಟಿ ತಿಳಿಸಿದರು.

ಇದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಜಾನಪದ ವೈಭವದ ಅನಾವರಣವೂ ಅಂದು ನಡೆಯಲಿದೆ. ಅಪರಾಹ್ನ 3 ರಿಂದ 5 ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಡೋಲು ವಾದನ, ಕಂಗೀಲು ಕುಣಿತ, ಧಪ್, ಆಟಿಕಳೆಂಜ, ಕರಗ ಕೋಲಾಟ, ಪೂಜಾ ಕುಣಿತ, ಕಂಸಾಳೆ ಕುಣಿತ, ವೀರಗಾಸೆ, ಹುಲಿವೇಷ, ಗುಮಟೆ ಕುಣಿತ, ಹೂವಿನಕೋಲು, ಹಾಲಕ್ಕಿ ಸುಗ್ಗಿ ಕುಣಿತ, ಮಾದರ ಮತ್ತು ಮಾಂಕಾಳಿ ಕುಣಿತಗಳ ಕಲಾ ಪ್ರದರ್ಶನವೂ ನಡೆಯಲಿದೆ ಎಂದು ಅವರು ನುಡಿದರು.

ಸಂಜೆ 5:15ಕ್ಕೆ ಸಭಾ ಕಾರ್ಯಕ್ರಮ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪರಿಷತ್‌ನ ಸದಸ್ಯ ಏರ್ಯ ಲಕ್ಷ್ಮೀನಾರಾಯಣ ಆಳ್ವ ಆಶಯ ಭಾಷಣ ಮಾಡಿದರೆ, ಜಾನಪದ ಸಂಶೋಧಕ ಡಾ.ಗಣನಾಥ ಎಕ್ಕಾರು ಪ್ರಧಾನ ಭಾಷಣ ಮಾಡುವರು.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಎಸ್.ಎ.ಕೃಷ್ಣಯ್ಯ, ಬನ್ನಂಜೆ ಬಾಬು ಅಮೀನ್ ಹಾಗೂ ಜಾನಪದ ಸಂಘಟಕ ರಮೇಶ್ ಕಲ್ಮಾಡಿ ಅವರನ್ನು ಸನ್ಮಾನಿಸಲಾಗುವುದು. ಕೊನೆಯಲ್ಲಿ ಪ್ರಮುಖ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನವೂ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ನಿಯೋಜಿತ ಕಾರ್ಯದರ್ಶಿ ರವಿರಾಜ್ ನಾಯಕ್, ಸಂಘಟನಾ ಕಾರ್ಯದರ್ಶಿ ಗೋಪಾಲ ಸಿ.ಬಂಗೇರ, ಸದಸ್ಯರಾದ ಸುನಿಲ್‌ಕುಮಾರ್ ಶೆಟ್ಟಿ, ರಮೇಶ್ ಕಲ್ಮಾಡಿ ಹಾಗೂ ಬ್ರಹ್ಮಾವರ ಘಟಕದ ಅಧ್ಯಕ್ಷ ನೇರಿ ಕರ್ನೇಲಿಯೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X