Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಚಿವ ಝಮೀರ್ ಅಹ್ಮದ್ ಖಾನ್ ರಾಜೀನಾಮೆಗೆ...

ಸಚಿವ ಝಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಅನ್ವರ್ ಮಾಣಿಪ್ಪಾಡಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Jun 2019 10:35 PM IST
share
ಸಚಿವ ಝಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಅನ್ವರ್ ಮಾಣಿಪ್ಪಾಡಿ ಆಗ್ರಹ

ಮಂಗಳೂರು, ಜೂ.13: ಐಎಂಎ ಜ್ಯುವೆಲ್ಲರಿ ಬಹುಕೋಟಿ ಹಗರಣದ ರೂವಾರಿ ಮುಹಮ್ಮದ್ ಮನ್ಸೂರ್ ಖಾನ್‌ನ ನಿಕಟವರ್ತಿ ಸಚಿವ ಝಮೀರ್ ಆಹ್ಮದ್ ಖಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ ಆಗ್ರಹಿಸಿದ್ದಾರೆ.

ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು ಅಲ್ಪಸಂಖ್ಯಾತರ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ನಾಯಕರು ಇಂತಹ ಕೃತ್ಯಗಳಲ್ಲಿ ನಿರಂತರ ಭಾಗಿಯಾಗಿರುವುದು ಖಂಡನೀಯ. ಐಎಂಎ ಜ್ಯುವೆಲ್ಲರಿ ಹಗರಣದ ನೈಜ ಚಿತ್ರಣ ಹೊರಗೆ ಬರಬೇಕಾದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದರು.

ಸಚಿವ ಜಮೀರ್ ಆಹ್ಮದ್‌ಖಾನ್ ತಾನು ಮನ್ಸೂರ್‌ನಿಂದ 9 ಕೋ.ರೂ. ದೇಣಿಗೆ ಪಡೆದಿರುವುದನ್ನು ಒಪ್ಪಿಕೊಂಡಿದ್ದಾರಲ್ಲದೆ, ಅದು ಜಮೀನು ಮಾರಿ ಪಡೆದ ಮೊತ್ತ ಎಂದು ಹೇಳುತ್ತಿದ್ದಾರೆ. ಆದರೆ ಅದಕ್ಕೆ ಯಾವುದೇ ದಾಖಲೆಗಳು ಇಲ್ಲ. ಅಧಿಕೃತವಾಗಿ 9 ಕೋ.ರೂ. ದೇಣಿಗೆ ಪಡೆದಿರುವ ಸಚಿವರು ಅನಧಿಕೃತವಾಗಿ ದೇಣಿಗೆ ಪಡೆದಿರಲಾರರೇ? ಎಂದು ಪ್ರಶ್ನಿಸಿದರು.

 ಮಾಜಿ ಸಚಿವ ರೋಶನ್ ಬೇಗ್ ತನ್ನಿಂದ 400 ಕೋ.ರೂ. ಪಡೆದಿರುವುದಾಗಿ ಮನ್ಸೂರ್ ಹೇಳಿದ್ದಾನೆ. 2018ರ ಚುನಾವಣೆಯಲ್ಲಿ ನಾನು ಚಾಮರಾಜಪೇಟೆ ಕ್ಷೇತ್ರಕ್ಕೆ ಬಿಜೆಪಿಯಿಂದ ಉಸ್ತುವಾರಿಯಾಗಿ ನೇಮಕಗೊಂಡಿದ್ದೆ. ಅದಾಗಲೇ ಐಎಂಎ ರೂವಾರಿ ಮತ್ತು ಜಮೀರ್ ಸಂಬಂಧಗಳ ಬಗ್ಗೆ ಶಂಕೆ ವ್ಯಕ್ತ ಪಡಿಸಿದ್ದೆ. ಚುನಾವಣೆಯಲ್ಲಿ ಆತನಿಂದ ಹಣ ಹಂಚಿಕೆಯಾಗುತ್ತಿದೆ ಎಂದಿದ್ದೆ. ಅಮಾನತ್ ಬ್ಯಾಂಕ್ ಸ್ಥಾಪಿಸುವುದಾಗಿ ಕಾಂಗ್ರೆಸ್ ನಾಯಕ ರಹ್ಮಾನ್ ಖಾನ್ ಜನತೆಗೆ ವಂಚಿಸಿರುವುದು, ವಕ್ಫ್ ಆಸ್ತಿಯ ಕಬಳಿಕೆ, ಇದೀಗ ಐಎಂಎ ಹಗರಣ ಇದೆಲ್ಲವೂ ಕಾಂಗ್ರೆಸಿಗರ ಬಣ್ಣ ಬಯಲು ಮಾಡುತ್ತಿದೆ ಎಂದು ಆರೋಪಿಸಿದರು.

ಕೇರಳ ಮೂಲಕ ಐಎಸ್‌ಐ ಜೊತೆ ಮನ್ಸೂರ್‌ಖಾನ್ ನಂಟು ಬೆಳೆಸಿದ್ದು, ಅದಕ್ಕೂ ಹಣ ಸಹಾಯ ನೀಡುತ್ತಿದ್ದ ಎಂಬ ಮಾಹಿತಿ ಇದೆ. ಈ ಬಗ್ಗೆಯೂ ಸಿಬಿಐ ತನಿಖೆ ಆಗಬೇಕಿದೆ ಎಂದ ಅನ್ವರ್ ಮಾಣಿಪ್ಪಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಪಕ್ಷ ಬದ್ಧವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಮಚಂದ್ರ ಬೈಕಂಪಾಡಿ, ಸತೀಶ್ ಪ್ರಭು ಮತ್ತು ಭಾಸ್ಕರಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X