Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನು ಮುಂದೆ ಗ್ರಾ.ಪಂ.ಗಳಿಗೆ ಕೆಡಿಪಿ...

ಇನ್ನು ಮುಂದೆ ಗ್ರಾ.ಪಂ.ಗಳಿಗೆ ಕೆಡಿಪಿ ಸಭೆ ನಡೆಸುವ ಅಧಿಕಾರ: ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ14 Jun 2019 7:54 PM IST
share
ಇನ್ನು ಮುಂದೆ ಗ್ರಾ.ಪಂ.ಗಳಿಗೆ ಕೆಡಿಪಿ ಸಭೆ ನಡೆಸುವ ಅಧಿಕಾರ: ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜೂ. 14: ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟಗಳಲ್ಲಿ ನಡೆಯುತ್ತಿದ್ದ ಕೆಡಿಪಿ ಸಭೆಗಳನ್ನು ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳಲ್ಲಿಯೂ ನಡೆಸಲು ಅಧಿಕಾರ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೆಗೌಡ ಹೇಳಿದ್ದಾರೆ.

ಶುಕ್ರವಾರ ಇಲ್ಲಿನ ಜಕ್ಕೂರಿನಲ್ಲಿರುವ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಸ್ಯಾಟ್ ಕಾಂ ಮೂಲಕ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಎಲ್ಲ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳೊಂದಿಗೆ ಸಂವಾದ ನಡೆಸುತ್ತಿದ್ದ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಕಟಿಸಿದರು. ಈ ಸಂಬಂಧ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು.

ಗ್ರಾ.ಪಂ.ಗಳಲ್ಲಿ ತೆರಿಗೆ ವಸೂಲಾತಿಗೆ ಹೆಚ್ಚಿನ ಒತ್ತು ಕೊಡಬೇಕು. ಈ ತೆರಿಗೆಗಳಿಂದ ಗ್ರಾ.ಪಂ.ಗಳು ಆರ್ಥಿಕವಾಗಿ ಬಲಗೊಳ್ಳುತ್ತವೆ ಮತ್ತು ತಮಗೆ ಬೇಕಾದ ಕಾರ್ಯಗಳನ್ನು ಹಮ್ಮಿಕೊಳ್ಳಲು ಉಪಯೋಗವಾಗುತ್ತದೆ ಎಂದು ಕೃಷ್ಣಭೈರೇಗೌಡ ಇದೇ ವೇಳೆ ಹೇಳಿದರು.

ಕಳೆದ ವರ್ಷ ಒಟ್ಟು 462 ಕೋಟಿ ರೂ.ಗಳನ್ನು ಗ್ರಾ.ಪಂ.ಗಳು ತೆರಿಗೆಯಿಂದ ವಸೂಲಿ ಮಾಡಿವೆ ಎಂದ ಅವರು, ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಸ್ವಚ್ಛಮೇವ ಜಯತೆ ಆಂದೋಲನವನ್ನು ಎಲ್ಲ ಗ್ರಾ.ಪಂ.ಗಳು ಗಂಭೀರವಾಗಿ ತೆಗೆದುಕೊಳ್ಳಬೇಕು. ತಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಸದ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲು ಪ್ರಯತ್ನಿಸಬೇಕು. ಮುಖ್ಯವಾಗಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಗ್ರಾಮಸ್ಥರನ್ನು ಮನವೊಲಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯವನ್ನು ಗ್ರಾ.ಪಂ.ಗಳೆ ಸಂಗ್ರಹಿಸಿ ಅವುಗಳನ್ನು ಬೇಕು ಬೇಕಾದವರಿಗೆ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು. ಹಸಿ ಮತ್ತು ಒಣ ಕಸಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ ಅವೆರಡನ್ನು ಬೇರ್ಪಡಿಸಿ ಇಡುವುದರ ಬಗ್ಗೆ ಜಾಗೃತಿ ತರಬೇಕು ಎಂದು ಅವರು ಹೇಳಿದರು.

ಅಗತ್ಯ ಇರುವ ಕಡೆ ಸಾಮುದಾಯಿಕ ಹಸಿ ತಿಪ್ಪೆಗಳನ್ನು ಮಾಡುವುದರ ಮೂಲಕ ಗೊಬ್ಬರವನ್ನೂ ತಯಾರಿಸಬಹುದು. ನೈರ್ಮಲ್ಯ ಕುರಿತಂತೆ ಈ ಅಂಶಗಳನ್ನು ಜನರಿಗೆ ಮನದಟ್ಟು ಮಾಡಿಕೊಡಲು ಸ್ವಸಹಾಯ ಗುಂಪುಗಳು ಮತ್ತು ಸ್ಥಳೀಯ ಯುವ ಜನರ ಗುಂಪುಗಳನ್ನು ತಂಡಗಳನ್ನಾಗಿ ರಚನೆ ಮಾಡಬಹುದು ಎಂದು ಅವರು ತಿಳಿಸಿದರು.

ಇದರ ಜೊತೆ-ಜೊತೆಗೆ ಜನರಲ್ಲಿ ನೀರಿನ ಮಿತ ಬಳಕೆ ಮತ್ತು ನೀರಿನ ಸಂಗ್ರಹಣೆ ಬಗ್ಗೆ ಅರಿವು ಮೂಡಿಸಬೇಕು. ಅಲ್ಲದೆ ಹಸಿರೀಕರಣಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ.ಗಳಲ್ಲೂ ಗಿಡ ನೆಡುವ ಕಾರ್ಯ ಕೈಗೊಳ್ಳಬೇಕು. ಮುಂದಿನ 2ತಿಂಗಳಲ್ಲಿ ರಾಜ್ಯದಲ್ಲಿ 2 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ನಿರ್ದೇಶಕ ಯಾಲಕ್ಕಿಗೌಡ ಹಾಗೂ ಇಲಾಖೆ ಸಲಹೆಗಾರ ಕೆಂಪೇಗೌಡ ಹಾಜರಿದ್ದರು.

ವಾಟ್ಸ್ ಆ್ಯಪ್ ಗ್ರೂಪ್‌ಗಳ ರಚನೆ

ಗ್ರಾ.ಪಂ.ವ್ಯಾಪ್ತಿಯಲ್ಲಿ ಗ್ರಾಮ ವಾಣಿ ಎಂಬ ವಾಟ್ಸ್ ಆ್ಯಪ್ ಗ್ರೂಪ್ ರಚನೆ ಮಾಡಬೇಕು. ಇದರಲ್ಲಿ ಇಲಾಖೆಗೆ ಹಾಗೂ ಸರಕಾರದ ಎಲ್ಲ ಯೋಜನೆಗಳ ಮಾಹಿತಿ ದೈನಂದಿನ ಸುತ್ತೋಲೆ ಸೂಚನೆಗಳನ್ನು ಕಳುಹಿಸಬೇಕು. ಇದರ ಜೊತೆಗೆ ಜಾಗೃತಿ ಮೂಡಿಸುವ ಸಂದೇಶಗಳನ್ನು ಕಳುಹಿಸಬಹುದು. ಆದರೆ, ಈ ಗುಂಪುಗಳಲ್ಲಿ ರಾಜಕೀಯ ಪ್ರೇರಿತ ಸುದ್ದಿಗಳು, ಅನಾವಶ್ಯಕ ಸಂಗತಿಗಳನ್ನು ಹಾಕಬಾರದೆಂದು ಸಚಿವ ಕೃಷ್ಣಭೈರೇಗೌಡ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X