Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಿಟಿಷರಿಗೆ ಬರೆದ ಪತ್ರದಲ್ಲಿ ‘ನಾನು...

ಬ್ರಿಟಿಷರಿಗೆ ಬರೆದ ಪತ್ರದಲ್ಲಿ ‘ನಾನು ಪೋರ್ಚುಗಲ್ ಪುತ್ರ’ ಎಂದಿದ್ದ ಸಾವರ್ಕರ್

ಪಠ್ಯಪುಸ್ತಕದಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ14 Jun 2019 8:21 PM IST
share
ಬ್ರಿಟಿಷರಿಗೆ ಬರೆದ ಪತ್ರದಲ್ಲಿ ‘ನಾನು ಪೋರ್ಚುಗಲ್ ಪುತ್ರ’ ಎಂದಿದ್ದ ಸಾವರ್ಕರ್

 ಜೈಪುರ,ಜೂ.14: ರಾಜಸ್ಥಾನದ ಕಾಂಗ್ರೆಸ್ ಸರಕಾರವು ರಾಜ್ಯ ಶಿಕ್ಷಣ ಮಂಡಳಿ ಅಧೀನದ ಶಾಲೆಗಳ ಪಠ್ಯಪುಸ್ತಕಗಳಲ್ಲಿ ಐತಿಹಾಸಿಕ ಘಟನೆಗಳು ಮತ್ತು ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಗಳನ್ನು ಮಾಡಿದೆ. ಫೆ.13ರಂದು ತಾನು ಸ್ಥಾಪಿಸಿದ್ದ ಪಠ್ಯಪುಸ್ತಕ ಪುನರ್‌ಪರಿಶೀಲನಾ ಸಮಿತಿಯ ಶಿಫಾರಸುಗಳ ಆಧಾರದಲ್ಲಿ ಹಿಂದಿನ ಎನ್‌ಡಿಎ ಸರಕಾರವು ಕೈಗೊಂಡಿದ್ದ ಹಲವಾರು ನಿರ್ಧಾರಗಳನ್ನು ಅಶೋಕ ಗೆಹ್ಲೋಟ್ ನೇತೃತ್ವದ ಸರಕಾರವು ಹಿಂದೆಗೆದುಕೊಂಡಿದೆ.

12ನೇ ತರಗತಿಯ ಚರಿತ್ರೆ ಪಠ್ಯಪುಸ್ತಕದಿಂದ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಹೆಸರಿನಲ್ಲಿದ್ದ ಗೌರವ ಸೂಚಕ ‘ವೀರ ’ ಪದವನ್ನು ತೆಗೆದಿರುವುದು ಪ್ರಮುಖ ಬದಲಾವಣೆಗಳಲ್ಲೊಂದಾಗಿದೆ. ಸಾವರ್ಕರ್ ಅಂಡಮಾನ್ ಸೆಲ್ಯುಲರ್ ಜೈಲಿನಲ್ಲಿದ್ದಾಗ ಹೇಗೆ ಬ್ರಿಟಿಷರಿಗೆ ನಾಲ್ಕು ದಯಾಭಿಕ್ಷೆ ಪತ್ರಗಳನ್ನು ಕಳುಹಿಸಿದ್ದರು ಮತ್ತು 1911,ನ.1ರಂದು ಬರೆದಿದ್ದ ತನ್ನ ಎರಡನೇ ಮನವಿಯಲ್ಲಿ ತಾನು ‘ಪೋರ್ಚುಗಲ್‌ನ ಪುತ್ರ’ ಎಂದು ಹೇಳಿಕೊಂಡಿದ್ದರು ಎನ್ನುವುದನ್ನು ಈ ಪುಸ್ತಕದಲ್ಲಿ ಬಣ್ಣಿಸಲಾಗಿದೆ.

ಭಾರತವನ್ನು ಹಿಂದು ರಾಷ್ಟ್ರವನ್ನಾಗಿಸುವ ಅಭಿಯಾನದಲ್ಲಿ ತೊಡಗಿಕೊಂಡಿದ್ದ ಸಾವರ್ಕರ್ 1942ರ ಚಲೇಜಾವ್ ಚಳವಳಿಯನ್ನು ಮತ್ತು 1946ರಲ್ಲಿ ಪಾಕಿಸ್ತಾನದ ಸೃಷ್ಟಿಯನ್ನು ವಿರೋಧಿಸಿದ್ದರು ಎಂದು ಪಠ್ಯಪುಸ್ತಕದಲ್ಲಿನ ಅಧ್ಯಾಯವು ವಿದ್ಯಾರ್ಥಿಗಳಿಗೆ ಬೋಧಿಸುತ್ತಿದೆ. ಮಹಾತ್ಮಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ವಿಚಾರಣೆಯನ್ನು ಉಲ್ಲೇಖಿಸಲಾಗಿದೆಯಾದರೂ,ಅವರನ್ನು ಆರೋಪ ಮುಕ್ತಗೊಳಿಸಲಾಗಿತ್ತು ಎಂದು ಹೇಳಿದೆ.

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೇವಾಡದ ರಾಜ ಮಹಾರಾಣಾ ಪ್ರತಾಪ್ ಮತ್ತು ಮೊಘಲ್ ಚಕ್ರವರ್ತಿ ಅಕ್ಬರ್ ನಡುವಿನ ಹಳ್ದಿಘಾಟಿ ಯುದ್ಧದ ವರ್ಣನೆಯನ್ನು ಪರಿಷ್ಕರಿಸಲಾಗಿದೆ. ಪ್ರತಾಪ್‌ನನ್ನು ಸೆರೆ ಹಿಡಿಯಲು ಮತ್ತು ಕೊಲ್ಲುವಲ್ಲಿ ಹಾಗೂ ಆತನ ಇಡೀ ರಾಜ್ಯವನ್ನು ವಶಪಡಿಸಿಕೊಳ್ಳುವಲ್ಲಿ ಅಕ್ಬರ್ ವಿಫಲನಾಗಿದ್ದ ಎಂದು ಹಿಂದಿನ ಅಧ್ಯಾಯಲ್ಲಿ ಹೇಳಿದ್ದರೆ, ಈಗಿನ ಅಧ್ಯಾಯದಲ್ಲಿ ಪ್ರತಾಪ್‌ನ ಯುದ್ಧಾಶ್ವ ಚೇತಕ್ ಸಾವನ್ನಪ್ಪಿತ್ತು ಮತ್ತು ಆತ ಯುದ್ಧರಂಗವನ್ನು ತೊರೆದಿದ್ದ ಎಂದು ಹೇಳಲಾಗಿದೆ.

ಪಠ್ಯಪುಸ್ತಕ ಪುನರ್‌ಪರಿಶೀಲನಾ ಸಮಿತಿಯು 12ನೇ ತರಗತಿಯ ರಾಜಕೀಯ ವಿಜ್ಞಾನ ಪುಸ್ತಕದಿಂದ ನೋಟು ನಿಷೇಧದ ಎಲ್ಲ ಪ್ರಸ್ತಾವಗಳನ್ನು ಕೈಬಿಟ್ಟಿದೆ. ಇದೇ ರೀತಿ ಈ ಪುಸ್ತಕದಲ್ಲಿನ ‘ಜಾತಿವಾದ ಮತ್ತು ಕೋಮುವಾದ’ಅಧ್ಯಾಯದಲ್ಲಿ ಈ ಮೊದಲು ಜಮಾಅತೆ ಇಸ್ಲಾಂ, ಆಲ್ ಇಂಡಿಯಾ ಮಜ್ಲಿಸೆ ಇತ್ತೆಹಾದುಲ್ ಮತ್ತು ಸಿಮಿಯನ್ನು ಮಾತ್ರ ಉಲ್ಲೇಖಿಸಿದ್ದರೆ, ಈಗ ಹಿಂದು ಮಹಾಸಭಾವನ್ನೂ ಸೇರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X