Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಸಿದ...

ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಸಿದ ಬಿಎಂಟಿಸಿ

ವಾರ್ತಾಭಾರತಿವಾರ್ತಾಭಾರತಿ14 Jun 2019 10:41 PM IST
share

ಬೆಂಗಳೂರು, ಜೂ.14: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು(ಬಿಎಂಟಿಸಿ) ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರ ಏರಿಕೆಯ ಬರೆ ಹಾಕಿದೆ. 100 ರೂ. ನಿಂದ 250 ರೂ.ವರೆಗೆ ಬಸ್ ಪಾಸ್ ದರವನ್ನು ಹೆಚ್ಚಳ ಮಾಡಲಾಗಿದೆ. ಕೆಸ್ಸಾರ್ಟಿಸಿಯೂ ವಿದ್ಯಾರ್ಥಿ ಬಸ್ ಪಾಸ್ ದರವನ್ನು ಜಾಸ್ತಿ ಮಾಡಲು ತೀರ್ಮಾನಿಸಿದ್ದು, ಅಧಿಕೃತ ಆದೇಶ ಹೊರ ಬಿದ್ದಿದೆ.

ಬಿಎಂಟಿಸಿಯು ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಂದ ಕೇವಲ 200 ರೂ. ಸೇವಾ ಶುಲ್ಕ ಪಡೆದು ಪಾಸ್‌ಗಳನ್ನು ವಿತರಣೆ ಮಾಡಲಿದೆ. ಸ್ಮಾರ್ಟ್‌ಕಾರ್ಡ್ ನವೀಕರಣಕ್ಕೆ 170 ರೂ. ಶುಲ್ಕ ನಿಗದಿಪಡಿಸಲಾಗಿದೆ. ದರ ಏರಿಕೆಯ ಬಿಸಿಯು ಈ ವಿದ್ಯಾರ್ಥಿಗಳಿಗೆ ತಟ್ಟುವುದಿಲ್ಲ.

ಪ್ರೌಢಶಾಲಾ ವಿದ್ಯಾರ್ಥಿಗಳ ಬಸ್ ದರವು ಸೇವಾ ಶುಲ್ಕ ಹೊರತುಪಡಿಸಿ 100 ರೂ., ಪಿಯುಸಿ 150 ರೂ., ಪದವಿ, ಸ್ನಾತಕೋತ್ತರ ಪದವಿ 160 ರೂ., ವೃತ್ತಿಪರ ಕಾಲೇಜು 250 ರೂ., ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು 240 ರೂ. ಹಾಗೂ ಸಂಜೆ ಕಾಲೇಜು ವಿದ್ಯಾರ್ಥಿಗಳ ಬಸ್ ದರವು 200 ರೂ. ಹೆಚ್ಚಳವಾಗಿದೆ. 2013-14ರಲ್ಲಿ ಪಾಸ್ ದರ ಜಾಸ್ತಿ ಮಾಡಲಾಗಿತ್ತು. ಆನಂತರ 2014-15 ರಿಂದ 2017-18ರವರೆಗೆ ಪ್ರತಿ ವರ್ಷ ಸೇವಾ ಶುಲ್ಕವನ್ನು 30 ರೂ. ಏರಿಕೆ ಮಾಡಲಾಗಿತ್ತು. ಸದ್ಯ ಸೇವಾ ಶುಲ್ಕವು 200 ರೂ. ಇದೆ.

2019-20ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸ್ವಿಕರಿಸಿ, ಸ್ಮಾರ್ಟ್‌ಕಾರ್ಡ್ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಮತ್ತು ಪಿಯುಸಿ ವಿದ್ಯಾರ್ಥಿಗಳು ಹೊಸ ಸ್ಮಾರ್ಟ್‌ಕಾರ್ಡ್ ಅಥವಾ ಹಿಂದಿನ ಸಾಲಿನ ಸ್ಮಾರ್ಟ್‌ಕಾರ್ಡ್ ನವೀಕರಣಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಪದವಿ, ವೃತ್ತಿಪರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ವಿತರಣೆ ಬಗ್ಗೆ ಶೀಘ್ರದಲ್ಲೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಬಿಎಂಟಿಸಿಯು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಪಠ್ಯಕ್ರಮ ಹೊಂದಿರುವ 10ನೇ ತರಗತಿವರೆಗಿನ ವಿದ್ಯಾರ್ಥಿಗಳ ಅರ್ಜಿಗಳನ್ನು ಸಂಸ್ಥೆಯೇ ಪರಿಶೀಲಿಸಿ ಅನುಮೋದನೆ ನೀಡಲಾಗುವುದು. ರಾಜ್ಯ ಪಠ್ಯಕ್ರಮ ಹೊರತುಪಡಿಸಿ, ಇತರೆ ಶಿಕ್ಷಣ ಸಂಸ್ಥೆಗಳು ಬಿಎಂಟಿಸಿ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕಿದೆ. ಪಾಸಿನ ಅರ್ಜಿಯನ್ನು ಅನುಮೋದಿಸಿದ ಬಳಿಕ ವಿದ್ಯಾರ್ಥಿಗಳು ತಮ್ಮ ಸಮೀಪದ ಪಾಸು ವಿತರಣಾ ಕೇಂದ್ರ, ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿಕೊಳ್ಳಬೇಕು. ಕೇಂದ್ರಕ್ಕೆ ತೆರಳುವ ಸಂದರ್ಭದಲ್ಲಿ ದಿನಾಂಕ, ಸಮಯವನ್ನು ನಿಗದಿಪಡಿಸಿಕೊಂಡ ಸ್ವೀಕೃತಿ ಪತ್ರ, ಶಾಲಾ, ಕಾಲೇಜಿನ ಗುರುತಿನ ಚೀಟಿ, ಶುಲ್ಕ ಪಾವತಿ ರಸೀದಿ, ಶಾಲಾ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ಪತ್ರವನ್ನು ಹಾಜರುಪಡಿಸಬೇಕು. ರವಿವಾರ ಮತ್ತು ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30ರವರೆಗೆ ಎಲ್ಲ ಪ್ರಮುಖ ಬಸ್ ನಿಲ್ದಾಣಗಳು, ಟಿಟಿಎಂಸಿಗಳಲ್ಲಿ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X