Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಗಳ ಕಡಿತ ಪ್ರಕರಣ: ಮಡಿಕೇರಿ ಉಪ ಅರಣ್ಯ...

ಮರಗಳ ಕಡಿತ ಪ್ರಕರಣ: ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ವಾರ್ತಾಭಾರತಿವಾರ್ತಾಭಾರತಿ14 Jun 2019 11:36 PM IST
share
ಮರಗಳ ಕಡಿತ ಪ್ರಕರಣ: ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಮಾನತು

ಮಡಿಕೇರಿ, ಜೂ.14 : ಕೊಡಗು ಜಿಲ್ಲೆಯ ವಿವಿಧೆಡೆ ನಿಯಮಬಾಹಿರವಾಗಿ ಮರಗಳ ಕಡಿತಕ್ಕೆ ಅನುಮತಿ ನೀಡಿರುವ ಅಧಿಕಾರಿಯನ್ನು ರಾಜ್ಯ ಸರಕಾರ ಅಮಾನತು ಮಾಡಿದೆ.

ನಗರದ ಹೊರವಲಯದ ಕೆ.ನಿಡುಗಣೆ ಗ್ರಾಮದ 35 ಎಕರೆ ಪ್ರದೇಶದಲ್ಲಿ ಸುಮಾರು 800ಕ್ಕೂ ಅಧಿಕ ಮರಗಳನ್ನು ಕಡಿಯಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು)ಯವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಅವರ ಅಮಾನತಿನಿಂದ ತೆರವಾದ ಹುದ್ದೆಯ ಪ್ರಭಾರವನ್ನು ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ಟುರಾಜ ಅವರಿಗೆ ವಹಿಸಲಾಗಿದ್ದು, ಭಾರೀ ಪ್ರಮಾಣದ ಮರ ಕಡಿತಕ್ಕೆ ಕಾರಣವಾಗಿರುವ ಅಧಿಕಾರಿ ಕೊನೆಗೂ ತಲೆದಂಡ ತೆರುವಂತಾಗಿದೆ.

ಕೆ.ನಿಡುಗಣೆ ಗ್ರಾಮದಲ್ಲಿ ಸುಮಾರು 35 ಎಕರೆ ಪ್ರದೇಶದಲ್ಲಿ ವಿವಿಧ ಜಾತಿಯ ಸುಮಾರು 800ಕ್ಕೂ ಅಧಿಕ ಮರಗಳನ್ನು ಕಡಿದು ಉರುಳಿಸಲಾಗಿತ್ತು. ಇದಾದ ಒಂದೆರಡು ದಿನಗಳಲ್ಲಿ ಉತ್ತರ ಕೊಡಗಿನ ಕೊಡ್ಲಿಪೇಟೆ ಬಳಿಯ ಅವರೆದಾಳು ಗ್ರಾಮದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಸುಮಾರು 22ಎಕರೆ ತೋಟದಲ್ಲಿ 50ಕ್ಕೂ ಅಧಿಕ ಮರಗಳನ್ನು ಕಡಿದಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಡಗಿನಲ್ಲಿ ಮರ ಕಡಿತವನ್ನು ತಡೆಯುವಂತೆ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ನಿರ್ದೇಶನ ನೀಡಿದ್ದರು.

ಮಡಿಕೇರಿಯಲ್ಲಿ ನಡೆದ ಮರ ಕಡಿತ ಸರಕಾರಿ ಉದ್ದೇಶಕ್ಕೆ ಎಂಬಂತೆ ಬಿಂಬಿಸಲಾಗಿತ್ತು. ಮರ ಕಡಿತ ಮಾಡಬೇಕಾಗಿರುವ ಪ್ರದೇಶ ಕರ್ನಾಟಕ ಗೃಹಮಂಡಳಿಗೆ ಸಂಬಂಧಿಸಿದ್ದು ಎಂದು ಬಿಂಬಿಸಿ ಆ ಜಾಗದಲ್ಲಿ ನಿವೇಶನಗಳನ್ನು ನಿರ್ಮಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮರಗಳನ್ನು ಕಡಿಯುವುದು ಅನಿವಾರ್ಯ ಎಂಬಂತೆ ಕಡತಗಳಲ್ಲಿ ತೋರಿಸಲಾಗಿತ್ತು. ಮತ್ತು ಕಡಿದ ಮರಗಳನ್ನು ಕುಶಾಲನಗರದಲ್ಲಿರುವ ಅರಣ್ಯ ಇಲಾಖೆಯ ಮರದ ಡಿಪೋಗೆ ಸಾಗಿಸುವಂತೆ ಆದೇಶದಲ್ಲಿ ತೋರಿಸಲಾಗಿತ್ತು.

ಅತ್ತ ಅವರೆದಾಳು ಗ್ರಾಮದಲ್ಲಿ ನಡೆದಿರುವ ಮರ ಕಡಿತ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂಬುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಅಧಿಕಾರಿಗಳು ಆಮಿಷಕ್ಕೆ ಒಳಗಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. 

ಕೆ. ನಿಡುಗಣೆ ಪಂಚಾಯತ್ ಗೆ ಸೇರಿದ ಗಾಳಿಬೀಡು ರಸ್ತೆಯಲ್ಲಿ ನೂರಾರು ಮರಗಳ ಮಾರಣ ಹೋಮ ನಡೆದಿರುವ ಬಗ್ಗೆ ಮಾಜಿ ಸಚಿವ ಯಂ.ಸಿ. ನಾಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೆ, ಈ ಪ್ರಕರಣದ ಬಗ್ಗೆ ಸರಕಾರ ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

ಜಿಲ್ಲೆಯಲ್ಲಿ ಸ್ವಂತ ಉಪಯೋಗಕ್ಕೆ ಒಂದೆರಡು ಮರ ಕಡಿಯಬೇಕಾದರೆ ಇಲ್ಲಸಲ್ಲದ ಕಾನೂನುಗಳ ನೆಪ ಹೇಳಿ ಅನುಮತಿ ನಿರಾಕರಿಸುವ ಅಧಿಕಾರಿಗಳು ಪ್ರವಾಸೋದ್ಯಮದ ಅಭಿವೃದ್ಧಿ ಹೆಸರಿನಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಹೋಂಸ್ಟೇ, ರೆಸಾರ್ಟ್‍ಗಳ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ‘ಕ್ಲಿಯರ್ ಫೆಲ್ಲಿಂಗ್’ಗೆ ಅನುಮತಿ ನೀಡುತ್ತಿದ್ದುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X