ಹಿದಾಯತ್ ನಗರದಲ್ಲಿ ಮದ್ರಸ ಪ್ರಾರಂಭೋತ್ಸವ
ಮಂಗಳೂರು, ಜೂ.15: ಕೋಟೆಕಾರ್ ಹಿದಾಯತ್ ನಗರದ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಮದ್ರಸ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ಜರಗಿತು.
ಅಹ್ಮದ್ ಕಬೀರ್ ಸಅದಿ ಉಳ್ಳಾಲ ದುಆಗೈದು ಶುಭ ಹಾರೈಸಿದರು. ಮದ್ರಸ ಸದರ್ ಮುಅಲ್ಲಿಂ ಯು.ಎ.ಅಬ್ದುಲ್ ಅಝೀಝ್ ಸಖಾಫಿ ಸಾಂದರ್ಭಿಕವಾಗಿ ಮಾತನಾಡಿದರು. ಎನ್.ಎಸ್.ಉಮರ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ಅಧ್ಯಕ್ಷ ಸಬೀರ್ ಅಶ್ಅರಿ ಸಹಿತ ಹಲವಾರು ಮಂದಿ ಭಾಗವಹಿಸಿದ್ದರು.
ಮದ್ರಸವನ್ನು ಅಲಂಕಾರಗೊಳಿಸಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ವಿಶೇಷ ರೀತಿಯಲ್ಲಿ ಸ್ವಾಗತಿಸಲಾಯಿತು.
ಅಶ್ರಫ್ ಅಮ್ಜದಿ ಕಾರ್ಯಕ್ರಮ ನಿರೂಪಿಸಿದರು.
Next Story