Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಹುದ್ದೆಗಳಿಗೆ ಮೀಸಲಾತಿ...

ಸರಕಾರಿ ಹುದ್ದೆಗಳಿಗೆ ಮೀಸಲಾತಿ ವಿಸ್ತರಿಸದ ಮೋದಿ ಸರಕಾರ: ದಲಿತ ಐಎಎಸ್, ಐಆರ್‌ಎಸ್ ಅಧಿಕಾರಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 Jun 2019 9:18 PM IST
share
ಸರಕಾರಿ ಹುದ್ದೆಗಳಿಗೆ ಮೀಸಲಾತಿ ವಿಸ್ತರಿಸದ ಮೋದಿ ಸರಕಾರ: ದಲಿತ ಐಎಎಸ್, ಐಆರ್‌ಎಸ್ ಅಧಿಕಾರಿಗಳ ಆಕ್ರೋಶ

ಹೊಸದಿಲ್ಲಿ, ಜೂ.15: ನಾಗರಿಕ ಸೇವಾ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರತಿಭೆಗಳನ್ನು ನೇಮಕ ಮಾಡುವ ಮೂಲಕ ಈ ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ವಿಸ್ತರಿಸದಿರುವ ಮೋದಿ ಸರಕಾರದ ನಿರ್ಧಾರ ದಲಿತ ಹಾಗೂ ಇತರ ಮಾಜಿ ಮತ್ತು ಸೇವೆಯಲ್ಲಿರುವ ಐಎಎಸ್ ಮತ್ತು ಐಆರ್‌ಎಸ್ ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಈ ವರ್ಷದ ಆರಂಭದಲ್ಲಿ ಕೇಂದ್ರ ಸರಕಾರಿ ಸೇವಾ ಆಯೋಗ (ಯುಪಿಎಸ್ಸಿ) ನೇಮಕ ಮಾಡಿದ ಒಂಬತ್ತು ನೇರ ಪ್ರವೇಶಾತಿಗಳಲ್ಲಿ ಒಬ್ಬರೂ ಮೀಸಲಾತಿ ವರ್ಗಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಇತರ ಹಿಂದುಳಿದ ವರ್ಗಗಳಿಗೆ ಸೇರಿಲ್ಲ ಎಂದು ಮಾಜಿ ಬಿಜೆಪಿ ಸಂಸದ ಉದಿತ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರದ ಈ ನಡೆಯನ್ನು ಸಂಸತ್ ಮತ್ತು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ ಎಂದು ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಮಾಜಿ ಅಧಿಕಾರಿಯೂ ಆಗಿರುವ ಉದಿತ್ ರಾಜ್ ತಿಳಿಸಿದ್ದಾರೆ.

 ಸರಕಾರ ಯಾವ ರೀತಿ ಮೀಸಲಾತಿಯನ್ನು ಕಸದ ತೊಟ್ಟಿಗೆ ಎಸೆಯಲು ಯತ್ನಿಸುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಎಂದು ಹಿರಿಯ ಐಎಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಮಾಹಿತಿ ಹಕ್ಕಿನಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರಕಾರ, ಖಾಸಗಿ ವಲಯದಿಂದ ನೇರ ಪ್ರವೇಶವನ್ನು ಕೇವಲ ವೈಯಕ್ತಿಕ ಸ್ಥಾನಗಳಿಗಾಗಿ ಮಾಡಲಾಗುತ್ತದೆ ಮತ್ತು ಒಂಟಿ ಹುದ್ದೆಗಳಿಗೆ ಮೀಸಲಾತಿ ಅನ್ವಯವಾಗುವುದಿಲ್ಲ ಎಂದು ತಿಳಿಸಿದೆ. ಖಾಸಗಿ ವಲಯದ ವ್ಯಕ್ತಿಗಳ ನೇಮಕಾತಿಯ ಎರಡನೇ ಭಾಗದಲ್ಲಿ 40 ಪರಿಣತ ನಿರ್ದೇಶಕರು ಮತ್ತು ಸಹಾಯಕ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಿರುವ ಸರಕಾರ ಈ ಹುದ್ದೆಗಳಿಗೆ ಮೀಸಲಾತಿ ವಿಸ್ತರಿಸದಿರಲು ನಿರ್ಧರಿಸಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದೆ.

ಆದರೆ ಇಲಾಖೆಯ ತನ್ನದೇ ನಿಯಮದ ಪ್ರಕಾರ, 45 ದಿನಗಳಿಗಿಂತ ಕಡಿಮೆ ಅವಧಿಗೆ ಮಾಡಿರುವ ಸರಕಾರಿ ನೇಮಕಗಳು ಮಾತ್ರ ಮೀಸಲಾತಿಯಿಂದ ಹೊರಗಿರುತ್ತವೆ. ಆದರೆ ಇದಕ್ಕೂ ಸಮಜಾಯಿಷಿ ನೀಡಿರುವ ಇಲಾಖೆ, ಒಂದು ಹುದ್ದೆಗೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಖಾಸಗಿ ಪ್ರವೇಶದಡಿ ನಡೆಯುವ ಒಪ್ಪಂದ ಸರಕಾರ ಮತ್ತು ವ್ಯಕ್ತಿಯ ಮಧ್ಯೆಯಾಗಿರುತ್ತದೆ. ಹಾಗಾಗಿ ಮೀಸಲಾತಿ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಇದನ್ನು ಮೀಸಲಾತಿ ಕಾನೂನಿನ ದುರ್ಬಲೀಕರಣ ಎಂದು ವ್ಯಾಖ್ಯಾನಿಸಿರುವ ಉದಿತ್ ರಾಜ್, ದಲಿತರು ಮತ್ತು ಒಬಿಸಿಗಳಲ್ಲಿ ಪ್ರತಿಭೆ, ಅನುಭವ ಮತ್ತು ಪ್ರಾಮಾಣಿಕತೆಗೆ ಯಾವ ಕೊರತೆಯೂ ಇಲ್ಲ. ಆದರೂ ನೀವು ಯಾಕೆ ಮೀಸಲಾತಿಯನ್ನು ತೆಗೆದುಹಾಕಲು ದಾರಿಗಳನ್ನು ಹುಡುಕುತ್ತಿದ್ದೀರಿ ಎಂದು ಸರಕಾರವನ್ನು ಪ್ರಶ್ನಿಸಿದ್ದಾರೆ.

ತನ್ನ ನಿರ್ಧಾರವನ್ನು ಸಮರ್ಥಿಸಲು ಸರಕಾರ ಎಷ್ಟು ಬೇಕಾದರೂ ಸಬೂಬುಗಳನ್ನು ನೀಡಬಹುದು. ಆದರೆ ವಾಸ್ತವದಲ್ಲಿ, ಸರಕಾರಿ ಹುದ್ದೆಗಳಿಗೆ ಮೀಸಲಾತಿ ನೀಡದಿರುವುದು ಸಂವಿಧಾನದ ಆಶಯದ ವಿರುದ್ಧವಾಗಿದೆ. ಸರಕಾರದ ನಿಯಮಗಳು ಇವರಿಗೆ ಅನ್ವಯವಾಗುವುದಿಲ್ಲ ಎಂದಾದರೆ ಅವರನ್ನು ಸರಕಾರಿ ಹುದ್ದೆಗಳಿಗೆ ನೇಮಕ ಮಾಡುವುದಾದರೂ ಯಾಕೆ? ಕೇವಲ ಸಲಹೆಗಾರರನ್ನಾಗಿ ನೇಮಿಸಬಹುದಲ್ಲವೇ? ಎಂದು ಹಿರಿಯ ದಲಿತ ಅಧಿಕಾರಿ ಸರಕಾರವನ್ನು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X