Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಅಪಘಾತದ ಮೃತದೇಹಗಳನ್ನು ತೆಗೆಯಲು...

ವಿಮಾನ ಅಪಘಾತದ ಮೃತದೇಹಗಳನ್ನು ತೆಗೆಯಲು ಪ್ರತಿಕೂಲ ಹವಾಮಾನ ಅಡ್ಡಿ: ವಾಯುಪಡೆ

ವಾರ್ತಾಭಾರತಿವಾರ್ತಾಭಾರತಿ15 Jun 2019 11:30 PM IST
share
ವಿಮಾನ ಅಪಘಾತದ ಮೃತದೇಹಗಳನ್ನು ತೆಗೆಯಲು ಪ್ರತಿಕೂಲ ಹವಾಮಾನ ಅಡ್ಡಿ: ವಾಯುಪಡೆ

ಹೊಸದಿಲ್ಲಿ,ಜೂ.15: ಕಳೆದ ವಾರ ಎಎನ್-32 ವಿಮಾನವು ಪತನಗೊಂಡು ಸಾವನ್ನಪ್ಪಿರುವ 13 ಸಿಬ್ಬಂದಿಗಳ ಶವಗಳನ್ನು ಹೊರಗೆ ತೆಗೆಯುವ ಕಾರ್ಯವು ಪ್ರತಿಕೂಲ ಹವಾಮಾನದಿಂದಾಗಿ ವಿಳಂಬಗೊಂಡಿದೆ ಎಂದು ಭಾರತೀಯ ವಾಯುಪಡೆಯು ಶನಿವಾರ ತಿಳಿಸಿದೆ. ನತದೃಷ್ಟ ವಿಮಾನದ ಕಾಕ್‌ಪಿಟ್ ಧ್ವನಿಮುದ್ರಕ ಮತ್ತು ಫ್ಲೈಟ್ ಡಾಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿದ್ದವು.

ಜೂನ್ 7ರಂದು 13 ಜನರಿದ್ದ ಭಾರತೀಯ ವಾಯುಪಡೆಯ ವಿಮಾನ ಅಸ್ಸಾಮಿನ ಜೋರ್ಹಾಟ್‌ನಿಂದ ಅರುಣಾಚಲ ಪ್ರದೇಶದ ಮೆಚುಕಾಕ್ಕೆ ಪ್ರಯಾಣಿಸುತ್ತಿದ್ದಾಗ ನಾಪತ್ತೆಯಾಗಿತ್ತು. ಜೂ.11ರಂದು ಅರುಣಾಚಲ ಪ್ರದೇಶದ ದುರ್ಗಮ ಪ್ರದೇಶದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದ್ದವು.

ಚೀತಾ ಮತ್ತು ಎಎಲ್‌ಎಚ್ ಹೆಲಿಕಾಪ್ಟರ್‌ಗಳನ್ನು ಸನ್ನದ್ಧವಾಗಿರಿಸಲಾಗಿದ್ದು,ಹವಾಮಾನದಲ್ಲಿ ಸುಧಾರಣೆಯಾದ ಕೂಡಲೇ ಕಾರ್ಯಾಚರಣೆಯನ್ನು ಆರಂಭಿಸಲಿವೆ. ವಾಯುಯೋಧರ ಶವಗಳನ್ನು ಹೊರಕ್ಕೆ ತೆಗೆಯಲು ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ವಾಯುಪಡೆಯು ಟ್ವೀಟಿಸಿದೆ.

ತನ್ನ ಸಿಬ್ಬಂದಿ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು,ರಕ್ಷಣಾ ಕಾರ್ಯಾಚರಣೆಯ ಕುರಿತು ಮಾಹಿತಿಗಳನ್ನು ಆಗಿಂದಾಗ್ಗೆ ಅವರಿಗೆ ಒದಗಿಸಲಾಗುತ್ತಿದೆ ಎಂದೂ ಅದು ತಿಳಿಸಿದೆ.

ಸಿಬ್ಬಂದಿಗಳ ಶವಗಳನ್ನು ಹೆಲಿಕಾಪ್ಟರ್‌ಗಳ ಮೂಲಕ ಮೇಲಕ್ಕೆತ್ತಬೇಕಿದೆ ಮತ್ತು ಅವುಗಳನ್ನು ಹಂತಹಂತವಾಗಿ ಜೋರ್ಹಾಟ್‌ಗೆ ತರಲಾಗುವುದು. ಪ್ರತಿಕೂಲ ಹವಾಮಾನವು ಮುಂದುವರಿದಿದ್ದು,ಕಾರ್ಯಾಚರಣೆಯನ್ನು ನಿಧಾನಗೊಳಿಸುವ ಸಾಧ್ಯತೆಯಿದೆ ಎಂದು ವಾಯುಪಡೆಯು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿತ್ತು.

ಮತ್ತೆ ಇಂತಹ ಅಪಘಾತವಾಗದಂತೆ ನೋಡಿಕೊಳ್ಳಲಾಗುವುದು:ಧನೋವಾ

ಎಎನ್-32 ವಿಮಾನ ಪತನಕ್ಕೆ ಕಾರಣವನ್ನು ಕಂಡುಕೊಳ್ಳಲಾಗುವುದು ಮತ್ತು ಇಂತಹ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳಲಾಗುವುದು ಎಂದು ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರು ಹೇಳಿದ್ದಾರೆ. ಶನಿವಾರ ಹೈದರಾಬಾದ ಸಮೀಪದ ದುಂಡಿಗಲ್‌ನ ಏರ್‌ಫೋರ್ಸ್ ಅಕಾಡೆಮಿಯಲ್ಲಿ ಕಂಬೈನ್ಡ್ ಗ್ರಾಜ್ಯುಯೇಶನ್ ಪರೇಡ್‌ನ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಮಾನ ಪತನಕ್ಕೆ ಕಾರಣಗಳನ್ನು ತಿಳಿಯಲು ಎಲ್ಲ ವಿವರಗಳನ್ನು ಪರಿಶೀಲಿಸಲಾಗುವುದು. ಅರುಣಾಚಲ ಪ್ರದೇಶವು ದುರ್ಗಮ ಸ್ಥಳಗಳನ್ನು ಒಳಗೊಂಡಿದ್ದು,ಹೆಚ್ಚಿನ ಸಮಯ ಈ ಸ್ಥಳಗಳು ಮೋಡಗಳಿಂದ ಕೂಡಿರುತ್ತವೆ. ಇಂತಹ ವಾತಾವರಣದಲ್ಲಿ ನಿಯಂತ್ರಿತ ಹಾರಾಟ ನಡೆಸುವಾಗ ವಾಯುಪಡೆಯ ವಿಮಾನಗಳು ಮಾತ್ರವಲ್ಲ,ಪವನಹಂಸ್ ಹೆಲಿಕಾಪ್ಟರ್ ಇತ್ಯಾದಿಗಳೂ ಪತನಗೊಂಡಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X