ಪುತ್ತೂರು: ಕಾಂಗ್ರೆಸ್ ಮುಖಂಡ ಆತ್ಮಹತ್ಯೆ
ಪುತ್ತೂರು: ಕಾಂಗ್ರೆಸ್ ಮುಖಂಡ, ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ಎಲಿಕ ನಿವಾಸಿ ಜಯರಾಜ್ ಜೈನ್ (65) ರವಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಜಯರಾಜ್ ಜೈನ್ ಅವರು ಪುತ್ತೂರಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದರು. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
Next Story