Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ರಾಮಕೃಷ್ಣ ಮಿಷನ್‌ನಿಂದ ...

ಮಂಗಳೂರು: ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ16 Jun 2019 6:17 PM IST
share
ಮಂಗಳೂರು: ರಾಮಕೃಷ್ಣ ಮಿಷನ್‌ನಿಂದ  ಸ್ವಚ್ಛ ಶ್ರಮದಾನ

ಮಂಗಳೂರು, ಜೂ.16: ಅಂತರಂಗ ಶುದ್ಧವಾಗದೇ ಬಹಿರಂಗದ ಪರಿಸರ ಸ್ವಚ್ಛವಾಗದು. ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಬೇಕು. ಸ್ವಚ್ಛತಾ ಅಭಿಯಾನಗಳು ಮಾಡುತ್ತಿರುವ ಈ ಕಾರ್ಯವು ಕರ್ಮಯೋಗಕ್ಕೆ ಸಮಾನವಾದುದು ಎಂದು ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ತಿಳಿಸಿದ್ದಾರೆ.

ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ನಗರದ ಬೋಳೂರು ಪ್ರದೇಶದಲ್ಲಿ ಹಮ್ಮಿಕೊಳ್ಳಲಾದ ಸ್ವಚ್ಛ ಮಂಗಳೂರು ಅಭಿಯಾನದ ಐದನೇ ಹಂತದ 28ನೇ ಶ್ರಮದಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಸ್ವಾರ್ಥದಿಂದ ಮಾಡಿದ ಯಾವುದೇ ಕಾರ್ಯಕ್ಕೆ ಉನ್ನತವಾದ ಪ್ರತಿಫಲ ದೊರೆಯುತ್ತದೆ. ಇಂದಿನ ಒತ್ತಡದ ಜೀವನ ಕ್ರಮದ ನಡುವೆಯೂ ಜನಸೇವೆಗೆ ಸಮಯ ಮೀಸಲಿಡುತ್ತಿರುವುದು ಹೆಮ್ಮೆಯ ಸಂಗತಿ. ಅಲ್ಲದೇ ಸಮಾನ ಮನಸ್ಕ ವ್ಯಕ್ತಿಗಳು ಹಾಗೂ ಸಂಘಟನೆಗಳು ಒಂದೆಡೆ ಸೇರಿ ಶ್ರಮದಾನ ಮಾಡುತ್ತಿರುವುದು ಇದಕ್ಕೆ ಮತ್ತಷ್ಟು ಮೆರಗು ನೀಡಿದೆ’ ಎಂದರು.

ಈ ಸಂದರ್ಭ ಮನಪಾ ಆರೋಗ್ಯ ನಿರೀಕ್ಷಕಿ ಆಶ್ವಿನಿ, ದಾಮೋದರ್ ಭಟ್, ಪ್ರಶಾಂತ ಪಿ., ಸೂರಜ್ ಸೋಲಂಕಿ, ಸುರೇಶ್ ಅಮೀನ್, ಎ.ವಿ. ಸುಗುಣನ್, ರಾಜನ್, ಪ್ರಸಾದರಾಜ್ ಕಾಂಚನ್, ಶ್ರುತಿ ಹೆಗ್ಡೆ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಸ್ವಚ್ಛತೆ: ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಎದುರು ರಸ್ತೆಯಿಂದ ಬೊಕ್ಕಪಟ್ಣ ಸಾಗುವ ರಸ್ತೆಯಲ್ಲಿರುವ ಸುಮಾರು 10ಕ್ಕೂ ಅಧಿಕ ತ್ಯಾಜ್ಯ ಸುರಿಯುತ್ತಿದ್ದ ಜಾಗಗಳನ್ನು ಗುರುತಿಸಿ, ಸ್ವಚ್ಛಗೊಳಿಸಲಾಯಿತು. ಎಂಟು ತಂಡಗಳನ್ನು ರಚಿಸಿಕೊಂಡು ಶ್ರಮದಾನ ಮಾಡಲಾಯಿತು.

ದಿಲ್‌ರಾಜ್ ಆಳ್ವ, ಸುಧೀರ್ ವಾಮಂಜೂರು, ಬಾಲಕೃಷ್ಣ ಭಟ್, ಜಯಕೃಷ್ಣ ಬೇಕಲ್, ಸಂದೀಪ್ ಕೋಡಿಕಲ್, ಪ್ರವೀಣ ಶೆಟ್ಟಿ, ಭರತ್ ಸದಾನಂದ, ಅವಿನಾಶ್ ಅಂಚನ್ ನೇತೃತ್ವದಲ್ಲಿ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.

ಮನೆ ತ್ಯಾಜ್ಯದ ಜತೆಗೆ ಕಲ್ಲುಮಣ್ಣುಗಳ ರಾಶಿ, ಪ್ಲಾಸ್ಟಿಕ್ ಚೀಲಗಳ ರಾಶಿಗಳು ಇಡೀ ಪರಿಸರವನ್ನು ಗಲೀಜುಗೊಳಿಸಿದ್ದವು. ಕೆಲವು ಸ್ಥಳಿಯರು ತ್ಯಾಜ್ಯ ಬಿಸಾಡುವುದನ್ನು ತಡೆಯಲು ಪ್ರಯತ್ನಿಸಿದಾಗಲೂ ಸಫಲತೆ ಕಂಡಿರಲಿಲ್ಲ. ಇದೀಗ ಅಲ್ಲಿದ್ದ ಸುಮಾರು ಮೂರು ಟಿಪ್ಪರ್ ಕಸವನ್ನು ತೆಗೆದು ಆಲಂಕಾರಿಕ ಗಿಡಗಳನ್ನಿಟ್ಟು ಮತ್ತೆ ಅಲ್ಲಿ ತ್ಯಾಜ್ಯ ಬಿಸಾಡದಂತೆ ಮಾಡಲಾಗಿದೆ.

ಸರಿತಾ ಶೆಟ್ಟಿ ಹಾಗೂ ಕೋಡಂಗೆ ಬಾಲಕೃಷ್ಣ ನಾಕ್ ಮಾರ್ಗದರ್ಶನದಲ್ಲಿ ರಸ್ತೆಯ ಬದಿಗಳಲ್ಲಿ ಗಿಡಗಳನ್ನು ನೆಡಲಾಯಿತು. ಶ್ರಮದಾನದ ಜೊತೆಗೆ ಸುಭೋದಯ ಆಳ್ವ ಹಾಗೂ ಯುವ ಕಾರ್ಯಕರ್ತರು ಬೋಳೂರು ಪರಿಸರದ ಮನೆಗಳಿಗೆ ತೆರಳಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನಡೆಸಿದರು. ಮಾರ್ಗಬದಿಯಲ್ಲಿ ತ್ಯಾಜ್ಯ ಸುರಿಯದಂತೆ ಅವರನ್ನು ವಿನಂತಿಸಲಾಯಿತು. ಮಾತಾ ಅಮೃತಾನಂದಮಯಿ ಮಠದ ‘ಆಯುಧ’ ಸಂಘಟನೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರಮದಾನ ಮಾಡಿದರು.

ಸ್ವಚ್ಛ ಗ್ರಾಮ ಅಭಿಯಾನ: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ದ.ಕ. ಜಿಪಂ ಸಹಯೋಗದಲ್ಲಿ ಸುಮಾರು 75ಕ್ಕೂ ಅಧಿಕ ಗ್ರಾಮಗಳಲ್ಲಿ ಶ್ರಮದಾನ ಹಮ್ಮಿಕೊಳ್ಳಲಾಯಿತು. ಶ್ರಮದಾನದ ಪ್ರಯುಕ್ತ ಗ್ರಾಮಗಳಲ್ಲಿ ರಸ್ತೆಗಳ ಸ್ವಚ್ಛತೆ, ತೊಡುಗಳಲ್ಲಿದ್ದ ತ್ಯಾಜ್ಯ ತೆರವು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.

ಜಿಪಂ ಸ್ವಚ್ಛ ಭಾರತ್ ಮಿಷನ್ ಸಂಯೋಜಕಿ ಮಂಜುಳಾ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ಸಂಯೋಜಕ ಸುಧೀರ್ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X