Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸ್ಫೋಟಕ ವಾಹನ ’ದಾಳಿಯ ಬಗ್ಗೆ ಭಾರತ,...

‘ಸ್ಫೋಟಕ ವಾಹನ ’ದಾಳಿಯ ಬಗ್ಗೆ ಭಾರತ, ಅಮೆರಿಕಕ್ಕೆ ಪಾಕಿಸ್ತಾನದಿಂದ ಮಾಹಿತಿ

ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ

ವಾರ್ತಾಭಾರತಿವಾರ್ತಾಭಾರತಿ16 Jun 2019 9:02 PM IST
share
‘ಸ್ಫೋಟಕ ವಾಹನ ’ದಾಳಿಯ ಬಗ್ಗೆ ಭಾರತ, ಅಮೆರಿಕಕ್ಕೆ ಪಾಕಿಸ್ತಾನದಿಂದ ಮಾಹಿತಿ

ಹೊಸದಿಲ್ಲಿ,ಜೂ.16: ಪುಲ್ವಾಮಾ ಜಿಲ್ಲೆಯಲ್ಲಿ,ಬಹುಶಃ ಅವಂತಿಪುರದ ಬಳಿ ಸಂಭಾವ್ಯ ಭಯೋತ್ಪಾದಕ ದಾಳಿಯ ಕುರಿತು ಪಾಕಿಸ್ತಾನವು ಭಾರತ ಮತ್ತು ಅಮೆರಿಕಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದೆ ಎನ್ನಲಾಗಿದ್ದು, ಶ್ರೀನಗರದಲ್ಲಿಯ ಹಿರಿಯ ಭದ್ರತಾ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ಈ ವಿಷಯನ್ನು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಇಡೀ ಭದ್ರತಾ ವ್ಯವಸ್ಥೆಯು ಕಟ್ಟೆಚ್ಚರದಲ್ಲಿದೆ.

  ಉಗ್ರರು ಸುಧಾರಿತ ಸ್ಫೋಟಕ ಸಾಧನ(ಐಇಡಿ)ವನ್ನು ಅಳವಡಿಸಿರುವ ವಾಹನವನ್ನು ಬಳಸಿ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಮಾಹಿತಿಯನ್ನು ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಿದೆ. ಪಾಕಿಸ್ತಾನವು ಅಮೆರಿಕಕ್ಕೂ ಈ ಮಾಹಿತಿಯನ್ನು ನೀಡಿದ್ದು,ಅದೂ ನಮ್ಮೊಂದಿಗೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಹೀಗೆ ಈ ಮಾಹಿತಿಯು ನಮಗೆ ನೇರವಾಗಿ ಮತ್ತು ಅಮೆರಿಕದ ಮೂಲಕವೂ ತಲುಪಿದೆ ಎಂದು ಅಧಿಕಾರಿ ತಿಳಿಸಿದರು.

ಉಗ್ರರು ಝಾಕಿರ್ ಮೂಸಾನ ಹತ್ಯೆಗೆ ಪ್ರತೀಕಾರವಾಗಿ ಈ ದಾಳಿಯನ್ನು ಯೋಜಿಸುತ್ತಿರುವಂತಿದೆ ಎಂದು ಪಾಕಿಸ್ತಾನವು ತಿಳಿಸಿದೆ ಎಂದರು.

ಮೇ 2017ರಲ್ಲಿ ಹಿಝ್ಬುಲ್ ಮುಜಾಹಿದೀನ್‌ನಿಂದ ಪ್ರತ್ಯೇಕಗೊಂಡು ಕಾಶ್ಮೀರದಲ್ಲಿ ಅಲ್ ಖೈದಾ ನಂಟಿನ ಅನ್ಸಾರ್ ಘಝಾವತುಲ್ ಹಿಂದ್ ಅನ್ನು ಸ್ಥಾಪಿಸಿ,ಅದರ ನೇತೃತ್ವ ವಹಿಸಿದ್ದ ಮೂಸಾ ಭದ್ರತಾ ಪಡೆಗಳು ಕಳೆದ ತಿಂಗಳು ಟ್ರಾಲ್ ಪ್ರದೇಶದಲ್ಲಿ ನಡೆಸಿದ್ದ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟಿದ್ದ. ಪೊಲೀಸರ ಹೇಳಿಕೆಯಂತೆ ಅನ್ಸಾರ್ ಈ ಹಿಂದೆ ಅಂದಾಜು ಒಂದು ಡಝನ್ ಉಗ್ರರನ್ನು ಸದಸ್ಯರನ್ನಾಗಿ ಹೊಂದಿದ್ದು,ಈ ಸಂಖ್ಯೆಯೀಗ 2-3ಕ್ಕಿಳಿದಿದೆ.

ಫೆ.14ರಂದು ಪುಲ್ವಾಮಾ ಜಿಲ್ಲೆಯ ಅವಂತಿಪುರದಿಂದ ಏಳು ಕಿ.ಮೀ.ದೂರದ ಲೇತಪುರದ ಹೆದ್ದಾರಿಯಲ್ಲಿ ನಡೆದಿದ್ದ ಆತ್ಮಾಹುತಿ ಕಾರ್ ಬಾಂಬರ್ ದಾಳಿಯಲ್ಲಿ ಸಿಆರ್‌ಪಿಎಫ್‌ನ 40ಕ್ಕೂ ಹೆಚ್ಚು ಯೋಧರು ಕೊಲ್ಲಲ್ಪಟ್ಟಿದ್ದರು. ಪಾಕಿಸ್ತಾನವು ಸಂಭಾವ್ಯ ದಾಳಿಯ ಕುರಿತು ಮಾಹಿತಿ ನೀಡಿರುವುದನ್ನು ನಾವು ಎರಡು ರೀತಿಗಳಲ್ಲಿ ಅರ್ಥೈಸಿಕೊಂಡಿದ್ದೇವೆ. ಅದು ಈಗಾಗಲೇ ಅಮೆರಿಕದೊಂದಿಗೆ ಮಾಹಿತಿ ಹಂಚಿಕೊಂಡಿರುವುದರಿಂದ ದೊಡ್ಡ ದಾಳಿಯೇನಾದರೂ ನಡೆದರೆ ತಾನು ಆರೋಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳುವುದು ಅದರ ಉದ್ದೇಶವಾಗಿರಬೇಕು ಅಥವಾ ದಾಳಿಯ ಯೋಜನೆಯು,ವಿಶೇಷವಾಗಿ ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿರುವ ಗುಂಪಿನ ಸದಸ್ಯರಿಗೆ ಸಂಬಂಧಿಸಿರುವುದರಿಂದ ತಾನು ಮಾಹಿತಿಯನ್ನು ಪತ್ತೆ ಹಚ್ಚಿದ ಬಳಿಕ ಮೊದಲೇ ನಮಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನವಾಗಿರಬೇಕು ಎಂದು ಅಧಿಕಾರಿ ಹೇಳಿದರು.

ಅಲ್ ಖೈದಾದೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕರ ಯಾವುದೇ ಚಟುವಟಿಕೆಗಳನ್ನು ಪಾಕಿಸ್ತಾನವು ಭಿನ್ನವಾಗಿ ನೋಡುತ್ತದೆ ಎನ್ನುವುದೂ ನಮಗೆ ಗೊತ್ತಿದೆ ಎಂದರು.

 ಎಚ್ಚರಿಕೆಯ ಸೂಚನೆಯನ್ನು ಇನ್ನೋರ್ವ ಹಿರಿಯ ಪೊಲೀಸ್ ಅಧಿಕಾರಿಯೂ ದೃಢಪಡಿಸಿದರು. ‘ವಿಶೇಷವಾಗಿ ದಕ್ಷಿಣ ಕಾಶ್ಮೀರದಲ್ಲಿ ನಾವು ಯಾವಾಗಲೂ ಎಚ್ಚರಿಕೆಯಿಂದಲೇ ಇರುತ್ತೇವೆ. ಆದರೆ ಈ ಮಾಹಿತಿಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ’ ಎಂದರು.

 ಪೊಲೀಸರು ಹೇಳುವಂತೆ ಝಾಕಿರ್ ರಶೀದ್ ಭಟ್ ಅಲಿಯಾಸ್ ಝಾಕಿರ್ ಮೂಸಾ ಬುರ್ಹಾನ್ ವಾನಿ ಗುಂಪಿನಲ್ಲಿ ಬದುಕುಳಿದಿದ್ದ ಕೊನೆಯ ಸದಸ್ಯನಾಗಿದ್ದ. ವಾನಿಯನ್ನು ಭದ್ರತಾ ಪಡೆಗಳು 2016,ಜು.8ರಂದು ಹತ್ಯೆಗೈದಿದ್ದವು. ನಂತರ ಮೂಸಾ ಹಿಝ್ಬುಲ್‌ನಿಂದ ಪ್ರತ್ಯೇಕಗೊಂಡು ಅನ್ಸಾರ್ ಅನ್ನು ಸ್ಥಾಪಿಸಿದ್ದ. ಚಂಡಿಗಡದ ಕಾಲೇಜೊಂದರಲ್ಲಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಮೂಸಾ 2013,ಜುಲೈನಲ್ಲಿ ನಾಪತ್ತೆಯಾಗಿದ್ದು,ಬಳಿಕ ಹಿಝ್ಬುಲ್‌ಗೆ ಸೇರಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X