Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಿಸ್ ಖಾತೆ ಹೊಂದಿರುವ 50 ಭಾರತೀಯರ...

ಸ್ವಿಸ್ ಖಾತೆ ಹೊಂದಿರುವ 50 ಭಾರತೀಯರ ವಿವರ ಹಂಚಲಿದೆ ಸ್ವಿಝರ್‌ಲ್ಯಾಂಡ್

ವಾರ್ತಾಭಾರತಿವಾರ್ತಾಭಾರತಿ16 Jun 2019 10:11 PM IST
share
ಸ್ವಿಸ್ ಖಾತೆ ಹೊಂದಿರುವ 50 ಭಾರತೀಯರ ವಿವರ ಹಂಚಲಿದೆ ಸ್ವಿಝರ್‌ಲ್ಯಾಂಡ್

 ಹೊಸದಿಲ್ಲಿ,ಜೂ.16: ಸ್ವಿಝರ್‌ಲ್ಯಾಂಡ್‌ನ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಹೊಂದಿರುವ ಕನಿಷ್ಠ 50 ಭಾರತೀಯ ಪ್ರಜೆಗಳ ವಿವರಗಳನ್ನು ಭಾರತದೊಂದಿಗೆ ಹಂಚಿಕೊಳ್ಳುವ ಪ್ರಕ್ರಿಯೆಯಲ್ಲಿ ಸ್ವಿಸ್ ಅಧಿಕಾರಿಗಳು ತೊಡಗಿಕೊಂಡಿದ್ದಾರೆ. ಇದರೊಂದಿಗೆ ಉಭಯ ರಾಷ್ಟ್ರಗಳ ನಿಯಂತ್ರಣ ಮತ್ತು ಕಾನೂನು ಜಾರಿ ಏಜೆನ್ಸಿಗಳು ಅಕ್ರಮ ಸಂಪತ್ತನ್ನು ಶೇಖರಿಸಿರುವ ಶಂಕಿತ ವ್ಯಕ್ತಿಗಳ ಕುತ್ತಿಗೆಯ ಸುತ್ತ ಕುಣಿಕೆಯನ್ನು ಬಿಗಿಗೊಳಿಸುತ್ತಿವೆ.

 ಇಂತಹ ವ್ಯಕ್ತಿಗಳಲ್ಲಿ ರಿಯಲ್ ಎಸ್ಟೇಟ್‌ನಿಂದ ಹಿಡಿದು ವಜ್ರ ಮತ್ತು ಚಿನ್ನಾಭರಣಗಳ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯ ಡಮ್ಮಿಗಳು ಸೇರಿದಂತೆ ಕಂಪನಿಗಳೊಂದಿಗೆ ಗುರುತಿಸಿಕೊಂಡಿರುವ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಉಭಯ ರಾಷ್ಟ್ರಗಳ ನಡುವೆ ಪರಸ್ಪರ ಆಡಳಿತಾತ್ಮಕ ನೆರವು ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಕಪ್ಪುಹಣದ ಸುರಕ್ಷಿತ ಸ್ವರ್ಗ ಎಂಬ ತನ್ನ ದೀರ್ಘಕಾಲದ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಸ್ವಿಝರ್‌ಲ್ಯಾಂಡ್ ಕಳೆದ ಕೆಲವು ವರ್ಷಗಳಿಂದ ಹೆಣಗಾಡುತ್ತಿದ್ದರೆ ಭಾರತದಲ್ಲಿ ಇದು ರಾಜಕೀಯವಾಗಿ ಸಂವೇದನಾಶೀಲ ವಿಷಯವಾಗಿದೆ.

 ಮೋದಿ ಸರಕಾರವು 2014ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಸ್ವಿಸ್ ಬ್ಯಾಂಕ್‌ಗಳು ಸೇರಿದಂತೆ ಕಪ್ಪುಹಣದ ವಿರುದ್ಧ ದಾಳಿ ತನ್ನ ಪ್ರಮುಖ ಆದ್ಯತೆಯಾಗಲಿದೆ ಎಂದು ಹೇಳಿತ್ತು. ಅಲ್ಲಿಂದೀಚೆಗೆ ಉಭಯ ರಾಷ್ಟ್ರಗಳು ಜಾಗತಿಕ ಸ್ವಯಂಚಾಲಿತ ಮಾಹಿತಿ ವಿನಿಮಯ ಮಾರ್ಗಸೂಚಿಗೆ ಸಹಿ ಹಾಕಿದ್ದು ಸೇರಿದಂತೆ ಆರ್ಥಿಕ ಅಪರಾಧಗಳ ಪ್ರಕರಣಗಳಲ್ಲಿ ಮಾಹಿತಿಗಳ ವಿನಿಮಯಕ್ಕೆ ತಮ್ಮ ವ್ಯವಸ್ಥೆಯನ್ನು ಬಲಗೊಳಿಸಿವೆ.

 ಈ ವಿಷಯದಲ್ಲಿ ತಮ್ಮ ದ್ವಿಪಕ್ಷೀಯ ಒಡಂಬಡಿಕೆಯನ್ನೂ ಉಭಯ ದೇಶಗಳು ಇನ್ನಷ್ಟು ಸದೃಢಗೊಳಿಸಿದ್ದು,ದ್ವಿಪಕ್ಷೀಯ ಆರ್ಥಿಕ ಸಂಬಂಧಗಳನ್ನು ಉತ್ತೇಜಿಸಲು ಆರ್ಥಿಕ ಪರಿಗಣನೆಗಳು,ವಿಶೇಷವಾಗಿ ಅಕ್ರಮ ಸಂಪತ್ತನ್ನು ಶೇಖರಿಸುವಲ್ಲಿ ಕಪಟ ದಾಖಲೆಗಳನ್ನು ಹೊಂದಿರುವ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಸಂದರ್ಭಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನೆರವಾಗಿವೆ.

 ಸ್ವಿಸ್ ಸರಕಾರವು ಸಂಬಂಧಿತ ವ್ಯಕ್ತಿಗಳಿಗೆ ಹೊರಡಿಸಿರುವ ಗೆಝೆಟ್ ಅಧಿಸೂಚನೆಗಳನ್ನು ಉಲ್ಲೇಖಿಸಿರುವ ಅಧಿಕಾರಿಗಳು ಭಾರತೀಯ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಗಳನ್ನು ಹಂಚಿಕೊಳ್ಳುವ ಪ್ರಸ್ತಾವನೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೊನೆಯ ಅವಕಾಶವನ್ನು ನೀಡಿ ಕಳೆದ ಕೆಲವು ವಾರಗಳಲ್ಲಿ ಕನಿಷ್ಠ 50 ಭಾರತೀಯ ಪ್ರಜೆಗಳಿಗೆ ನೋಟಿಸ್‌ಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದೊಂದು ವರ್ಷದಲ್ಲಿ ಸ್ವಿಸ್ ಸರಕಾರವು 100ಕ್ಕೂ ಅಧಿಕ ಭಾರತೀಯ ಪ್ರಜೆಗಳ ವಿವರಗಳನ್ನು ಭಾರತ ಸರಕಾರದೊಂದಿಗೆ ಹಂಚಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X