Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಶಕಗಳಷ್ಟು ಹಳೆಯ ಆದಾಯ ತೆರಿಗೆ ಕಾಯ್ದೆಯ...

ದಶಕಗಳಷ್ಟು ಹಳೆಯ ಆದಾಯ ತೆರಿಗೆ ಕಾಯ್ದೆಯ ಪರಿಷ್ಕರಣೆಗೆ ಸರಕಾರ ಸಜ್ಜು

ತೆರಿಗೆ ಹೊರೆ ತಗ್ಗುವ ಬಗ್ಗೆ ಅಧಿಕಾರಿಗಳಿಂದ ಸುಳಿವು

ವಾರ್ತಾಭಾರತಿವಾರ್ತಾಭಾರತಿ16 Jun 2019 10:35 PM IST
share
ದಶಕಗಳಷ್ಟು ಹಳೆಯ ಆದಾಯ ತೆರಿಗೆ ಕಾಯ್ದೆಯ ಪರಿಷ್ಕರಣೆಗೆ ಸರಕಾರ ಸಜ್ಜು

ಹೊಸದಿಲ್ಲಿ,ಜೂ.16: ವ್ಯಕ್ತಿಗತ ತೆರಿಗೆದಾತರಿಗೆ ತೆರಿಗೆ ಹೊರೆಯನ್ನು ತಗ್ಗಿಸಲು ಮತ್ತು ಸುಲಭ ಅನುಸರಣೆಗಾಗಿ ಪ್ರಮುಖ ಆದಾಯ ತೆರಿಗೆ ಸುಧಾರಣೆಗಳನ್ನು ತರಲು ಸರಕಾರವು ಸದ್ದಿಲ್ಲದೆ ಕೆಲಸ ಮಾಡುತ್ತಿರುವಂತಿದೆ.

ಹಾಲಿಯಿರುವ ದಶಕಗಳಷ್ಟು ಹಳೆಯದಾಗಿರುವ ಆದಾಯ ತೆರಿಗೆ ಕಾಯ್ದೆಯನ್ನು ಪರಿಷ್ಕರಿಸುವ ಕಾರ್ಯ ಪೂರ್ಣಗೊಂಡಿದೆ,ಆದರೆ 2019-20ರ ಕೇಂದ್ರ ಮುಂಗಡಪತ್ರ ಮಂಡನೆಗೆ ಮುನ್ನ ಜನರ ನಿರೀಕ್ಷೆಗಳನ್ನು ಹತೋಟಿಯಲ್ಲಿಡಲು ಅದನ್ನು ತಡೆಹಿಡಿಯಲಾಗಿದೆ ಎನ್ನಲಾಗುತ್ತಿದೆ.

ನೂತನ ನೇರ ತೆರಿಗೆ ಕಾನೂನು ಹೆಚ್ಚುಕಡಿಮೆ ಪೂರ್ಣಗೊಂಡಿದೆ. ನಾವು ಹಣಕಾಸು ಮಸೂದೆಯ ಮೇಲೆ ಗಮನವನ್ನು ಕೇಂದ್ರೀಕರಿಸಿರುವುದರಿಂದ ಮುಂಗಡಪತ್ರ ಮಂಡನೆಯ ಬಳಿಕ ಅದು ಹೊರಬೀಳಬೇಕು ಎಂದು ಅಧಿಕಾರಿಯೋರ್ವರು ತಿಳಿಸಿದರು. ಕರಡು ಕಾಯ್ದೆಯು ಈಗಲೇ ಬಹಿರಂಗಗೊಂಡಿದ್ದರೆ ಅದು ಅನಗತ್ಯ ನಿರೀಕ್ಷೆಗಳನ್ನು ಹುಟ್ಟುಹಾಕುತ್ತಿತ್ತು ಎಂದ ಅವರು ಹೆಚ್ಚಿನ ವಿವರಗಳನ್ನು ನೀಡಲಿಲ್ಲ.

ನೂತನ ಕಾಯ್ದೆಯು ವೇತನದಾರರಿಗೆ ತೆರಿಗೆ ಹೊರೆಯನ್ನು ತಗ್ಗಿಸುವ ಜೊತೆಗೆ ರಿಟರ್ನ್ ಸಲ್ಲಿಕೆ ಪ್ರಕ್ರಿಯೆಯನ್ನೂ ಸರಳಗೊಳಿಸಲಿದೆ ಎಂಬ ಸುಳಿವನ್ನು ಅವರು ನೀಡಿದರು. ಇದರಿಂದಾಗಿ ತೆರಿಗೆದಾತರ ಸಂಖ್ಯೆ ಹೆಚ್ಚಲಿದೆ ಎಂದರು.

ನೂತನ ಕಾಯ್ದೆಯ ಕರಡನ್ನು ಸಿದ್ಧಪಡಿಸಲು ರಚಿಸಲಾಗಿರುವ ಕಾರ್ಯಪಡೆಯು ಮೇ 26ರಂದು ತನ್ನ ವರದಿಯನ್ನು ಸಲ್ಲಿಸಲು ಎರಡು ತಿಂಗಳ ಸಮಯ ವಿಸ್ತರಣೆಯನ್ನು ಪಡೆದುಕೊಂಡಿದೆ. 50 ವರ್ಷಗಳಿಗೂ ಹಳೆಯದಾದ ಕಾಯ್ದೆ ಯನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ 2017,ನವೆಂಬರ್‌ನಲ್ಲಿ ಈ ಕಾರ್ಯಪಡೆಯನ್ನು ರಚಿಸಲಾಗಿತ್ತು.

ಇದು ಆದಾಯ ತೆರಿಗೆ ಕಾಯ್ದೆಯನ್ನು ಮರುರಚಿಸುವ ಮೂರನೇ ಪ್ರಯತ್ನವಾಗಿದೆ. ನೂತನ ಕಾನೂನು ವಿವಿಧ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಒಳಗೊಂಡರೆ ಅದು ಪರಿಪೂರ್ಣ ಕಾನೂನಾಗುತ್ತದೆ ಮತ್ತು ಇದು ಬಹಳಷ್ಟು ತೆರಿಗೆ ತಗಾದೆಗಳನ್ನು ಕಡಿಮೆ ಮಾಡುತ್ತದೆ ಎಂದು ತೆರಿಗೆ ತಜ್ಞ ರಿಯಾಝ್ ಥಿಂಗ್ನಾ ಹೇಳಿದರು.

ಮನಮೋಹನ ಸಿಂಗ್ ನೇತೃತ್ವದ ಯುಪಿಎ ಸರಕಾರವೂ ತೆರಿಗೆ ಕಾಯ್ದೆಯನ್ನು ಪರಿಷ್ಕರಿಸಲು ಪ್ರಯತ್ನಿಸಿತ್ತು,ಆದರೆ ಅದು ಪ್ರಯತ್ನವಾಗಿಯೇ ಉಳಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X