Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರ್ಮಾಣ ಹಂತದ ನೀರಿನ ಟ್ಯಾಂಕ್...

ನಿರ್ಮಾಣ ಹಂತದ ನೀರಿನ ಟ್ಯಾಂಕ್ ಸೆಂಟ್ರಿಂಗ್ ಕುಸಿದು ಮೂವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ17 Jun 2019 1:25 PM IST
share
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಸೆಂಟ್ರಿಂಗ್ ಕುಸಿದು ಮೂವರು ಮೃತ್ಯು

ಬೆಂಗಳೂರು, ಜೂ.17: ರಾಜಧಾನಿ ಬೆಂಗಳೂರಿನ ಹೆಬ್ಬಾಳ ವ್ಯಾಪ್ತಿಯ ಜೋಗಪ್ಪಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಸೆಂಟ್ರಿಂಗ್ ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ.

ದಾವಣಗೆರೆ ಮೂಲದ ಸಿವಿಲ್ ಇಂಜಿನಿಯರ್ ಕೃಷ್ಣ ಯಾದವ್(25), ತಮಿಳುನಾಡಿನ ಸಿವಿಲ್ ಇಂಜಿನಿಯರ್ ಪ್ರಭುರಾಮ್(25) ಹಾಗೂ ಪಶ್ಚಿಮ ಬಂಗಾಳದ ಸೂಪರ್ ವೈಸರ್ ಸುಮಂತ ಖಾರ್ ಮೃತಪಟ್ಟವರು. ಘಟನೆಯಲ್ಲಿ ಅರುಣ್, ರಂಜನ್, ಕಾರ್ತಿಕ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ನಗರದ ಜೋಗಪ್ಪಲೇಔಟ್‌ನಲ್ಲಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಸುಮಾರು 8 ನೀರಿನ ಘಟಕಗಳನ್ನು ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿತ್ತು. ಸೋಮವಾರ ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದ ಸೆಂಟ್ರಿಂಗ್ ಕಾರ್ಯದಲ್ಲಿ ತೊಡಗಿದ್ದರು. ಆದರೆ ಈ ವೇಳೆ, ಏಕಾಏಕಿ ಕಟ್ಟದ ಸೆಂಟ್ರಿಂಗ್ ಕುಸಿದು ಸುಮಾರು 80 ಅಡಿ ಅಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಘಟನೆ ನಡೆಯುತ್ತಿದಂತೆ ಮಾಹಿತಿ ಪಡೆದ ಅಗ್ನಿ ಶಾಮಕ ಸಿಬ್ಬಂದಿ, ಅಮೃತಹಳ್ಳಿ ಠಾಣಾ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಘಟನೆಯಲ್ಲಿ 20 ಜನರನ್ನು ರಕ್ಷಣೆ ಮಾಡಿದ್ದು, ಇನ್ನು, ಹಲವು ಮಂದಿ ಸೆಂಟ್ರಿಂಗ್ ಕೆಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಈಗಾಗಲೇ ರಕ್ಷಣೆ ಮಾಡಿರುವ ಮಂದಿಯಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಿರ್ಮಾಣ ಹಂತದಲ್ಲಿದ್ದ ವಾಟರ್ ಟ್ಯಾಂಕ್ ಬಿಡಬ್ಲೂಎಸ್‌ಎಸ್‌ಬಿ ಕಚೇರಿಗೆ ಸೇರಿದೆ ಎಂಬ ಮಾಹಿತಿ ಲಭಿಸಿದೆ.

ಘಟನಾ ಸ್ಥಳಕ್ಕೆ ಸಚಿವ ಕೃಷ್ಣಭೈರೇಗೌಡ, ಶಾಸಕ ಭೈರತಿ ಸುರೇಶ್, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

8 ಜನರ ಬಂಧನ

ನೀರಿನ ಟ್ಯಾಂಕ್ ಸೆಂಟ್ರಿಂಗ್ ಕುಸಿತ ಪ್ರಕರಣ ಸಂಬಂಧ ಖಾಸಗಿ ಕಂಪೆನಿ ಇಂಜಿಯನಿಯರ್ ಹಾಗೂ ಸಂಬಂಧಿಸಿದ ಸಿಬ್ಬಂದಿ ಸೇರಿ ಒಟ್ಟು 8 ಜನರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದರು.

5 ಲಕ್ಷ ಪರಿಹಾರ; ಕ್ರಿಮಿನಲ್ ಕೇಸ್

ನೀರಿನ ಟ್ಯಾಂಕ್ ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಗಾಯಗೊಂಡವರನ್ನು ಸಚಿವ ಕೃಷ್ಣ ಭೈರೇಗೌಡ ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಬಳಿಕ ಅವರು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸರಕಾರ ಘೋಷಣೆ ಮಾಡಿದ್ದು, ಸೋಮವಾರವೇ ಪರಿಹಾರ ಹಾಗೂ ಚಿಕಿತ್ಸೆಯ ವೆಚ್ಚವನ್ನು ಭರಿಸಲಿದೆ. ಅದೇ ರೀತಿ, ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X