Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಲರಪಟ್ಣ ಸೇತುವೆ ಕುಸಿದು ವರ್ಷವಾದರೂ...

ಮುಲ್ಲರಪಟ್ಣ ಸೇತುವೆ ಕುಸಿದು ವರ್ಷವಾದರೂ ಆರಂಭವಾಗದ ಕಾಮಗಾರಿ: ತಾತ್ಕಾಲಿಕ ಮಣ್ಣಿನ ಕಚ್ಚಾ ರಸ್ತೆ ತೆರವು

► ಕನಸಾಗಿ ಉಳಿದ ಮುಲ್ಲರಪಟ್ಣ ಹೊಸ ಸೇತುವೆ ► ಮಳೆಗಾಲದಲ್ಲಿ ಮತ್ತಷ್ಟು ಸಂಕಷ್ಟ

ಅಬ್ದುಲ್ ರಹಿಮಾನ್ ತಲಪಾಡಿಅಬ್ದುಲ್ ರಹಿಮಾನ್ ತಲಪಾಡಿ17 Jun 2019 3:32 PM IST
share
ಮುಲ್ಲರಪಟ್ಣ ಸೇತುವೆ ಕುಸಿದು ವರ್ಷವಾದರೂ ಆರಂಭವಾಗದ ಕಾಮಗಾರಿ: ತಾತ್ಕಾಲಿಕ ಮಣ್ಣಿನ ಕಚ್ಚಾ ರಸ್ತೆ ತೆರವು

ಬಂಟ್ವಾಳ, ಜೂ.17: ಬಂಟ್ವಾಳ-ಮಂಗಳೂರು ತಾಲೂಕುಗಳನ್ನು ಒಳರಸ್ತೆಯಾಗಿ ಸಂಪರ್ಕಿಸುವ 30 ವರ್ಷ ಹಳೆಯ ಮುಲ್ಲರಪಟ್ಣ ಸೇತುವೆಯು ಕಳೆದ ವರ್ಷ ಜೂ.26ರಂದು ಮುರಿದು ಬಿದ್ದು ಒಂದು ವರ್ಷವಾಗುತ್ತಾ ಬಂದರೂ ಇಲ್ಲಿ ಹೊಸ ಸೇತುವೆಯ ಕನಸು ಕನಸಾಗಿದೆ ಉಳಿದಿದೆ. ಶ್ರಮದಾನ ಮೂಲಕ ಸ್ಥಳೀಯರು ನಿರ್ಮಾಣ ಮಾಡಿದ ಮಣ್ಣಿನ ಕಚ್ಛಾ ರಸ್ತೆಯನ್ನು ಶುಕ್ರವಾರ ತೆರವುಗೊಳಿಸಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮುಲ್ಲರಪಟ್ಣದ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯು ಕಳೆದ ವರ್ಷ ಕುಸಿದಿತ್ತು. ನಿರಂತರ ಮಳೆ ನೀರಿನ ಹರಿವು ಹಾಗೂ ಇಕ್ಕೆಲಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯಿಂದ ಸೇತುವೆಯ ಪಿಲ್ಲರ್‌ಗಳು ಶಿಥಿಲಗೊಂಡು ಕುಸಿತಕ್ಕೆ ಕಾರಣವಾಗಿದೆ ಎಂದು ದೂರಲಾಗಿತ್ತು. ಈ ಸೇತುವೆ ಮುರಿದು ಬಿದ್ದ ಬಳಿಕ ವಾಹನ ಸಂಚಾರವೂ ಸೇತುವೆ ಎರಡೂ ಬದಿಯಿಂದಲೇ ವಾಪಸಾಗುತ್ತಿದ್ದು, ಪಾದಚಾರಿಗಳಿಗೆ ಮಾತ್ರ ಇಲ್ಲಿಗೆ ಸಮೀಪದ ತೂಗುಸೇತುವೆ ಸಹಕಾರಿಯಾಗಿತ್ತು.

ಇದರಿಂದಾಗಿ ಕಳೆದ ಡಿಸೆಂಬರ್ ತಿಂಗಳು ಸ್ಥಳೀಯ ಗ್ರಾಪಂ ಸದಸ್ಯರೊಬ್ಬರ ನೇತೃತ್ವದಲ್ಲಿ ಜಿಎಚ್‌ಎಂ ಫೌಂಡೇಶನ್ ವತಿಯಿಂದ ನದಿಯಲ್ಲಿ ಒಂದು ವಾರ ಮಣ್ಣು ಮತ್ತು ಮರಳು ತುಂಬಿಸುವ ಮೂಲಕ ತಾತ್ಕಾಲಿಕ ಕಚ್ಚಾ ರಸ್ತೆ ನಿರ್ಮಿಸಿ ಜನಪ್ರತಿನಿಧಿಗಳನ್ನು ಅಣಕಿಸುವಂತೆ ಮಾಡಿದ್ದರು. ಇದರಿಂದಾಗಿ ಲಘುವಾಹನ ಸೇರಿದಂತೆ ಇಲ್ಲಿನ ಮುತ್ತೂರು ಸರಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸಹಿತ ನೂರಾರು ಮಂದಿ ಪ್ರತಿದಿನ ನದಿ ದಾಟಲು ಅನುಕೂಲಕರವಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ಕೂಡಾ ನೆರೆ ನೀರು ಬರಲು ಆರಂಭಗೊಂಡಿದ್ದು, ಕಳೆದ 6 ತಿಂಗಳಿನಿಂದ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ವರದಾನವಾಗಿದ್ದ ತಾತ್ಕಾಲಿಕ ಕಚ್ಛಾ ರಸ್ತೆಯನ್ನು ಶುಕ್ರವಾರ ತೆರವುಗೊಳಿಸಿದ್ದು, ಇದೀಗ ಕಚ್ಛಾ ರಸ್ತೆ ಸಂಪರ್ಕ ಕಳಚಿಕೊಂಡಂತಾಗಿದೆ.

ಕುಸಿದು ಬಿದ್ದಿರುವ ಸೇತುವೆಯನ್ನು ಉಳಿದ ಪಿಲ್ಲರ್‌ಗಳಿಗೆ ಜೋಡಿಸುವ ಕಾರ್ಯಕ್ಕೆ ಚಿಂತನೆ ಮಾಡಲಾಗಿತ್ತು. ಆದರೆ, ಸೇತುವೆಯ ಇನ್ನುಳಿದ ಪಿಲ್ಲರ್‌ಗಳು ಕೂಡ ಶಿಥಿಲಗೊಂಡಿದ್ದು, ಬೇರೆ ಹೊಸ ಸೇತುವೆಯನ್ನು ನಿರ್ಮಿಸುವಂತೆ ಸರಕಾರಕ್ಕೆ ಒತ್ತಾಯಿಸಿದ್ದೆ. ಇದೀಗ ಶಾಶ್ವತ ಸೇತುವೆ ನಿರ್ಮಾಣಕ್ಕಾಗಿ ಸರಕಾರದಿಂದ 14. 65 ಕೋಟಿ ರೂ. ಮಂಜೂರು ಮಾಡಿಸಲಾಗಿದೆ. ಟೆಂಡರ್ ಹಾಗೂ ತಾಂತ್ರಿಕ ಪ್ರಕ್ರಿಯೆಲ್ಲಿದೆ. ಮಳೆಗಾಲದ ಬಳಿಕ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. 

ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಶಾಸಕ, ಬಂಟ್ವಾಳ

ಶಾಲೆ, ಸಾವು-ನೋವು, ಮದುವೆ ಇನ್ನಿತರ ಸಮಾರಂಭಗಳಿಗೆ ಸಂಚರಿಸಲು ಬಹಳಷ್ಟು ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರ ಅನುಮತಿ ಇಲ್ಲದಿದ್ದರೂ ಇಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿದ್ದೆವು. ಇದೀಗ ನದಿಯಲ್ಲಿ ಮಳೆ ನೀರು ಕಚ್ಛಾ ರಸ್ತೆಯಲ್ಲಿ ಹರಿಯಲಾರಂಭಿಸಿದೆ. ಈ ನಿಟ್ಟಿನಲ್ಲಿ ಯಾವುದೇ ಅನಾಹುತ ಸಂಭವಿಸದಿರಲಿ ಎಂದು ಮುಂಜಾಗೃತ ಕ್ರಮವಾಗಿ ತಾತ್ಕಾಲಿಕ ರಸ್ತೆಯನ್ನು ತೆರವುಗೊಳಿಸಲಾಗಿದೆ. ನೂತನ ಸೇತುವೆ ನಿರ್ಮಾಣದ ಬಗ್ಗೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ. 

ಸುಲೈಮಾನ್, ಸಾಮಾಜಿಕ ಹೋರಾಟಗಾರ

share
ಅಬ್ದುಲ್ ರಹಿಮಾನ್ ತಲಪಾಡಿ
ಅಬ್ದುಲ್ ರಹಿಮಾನ್ ತಲಪಾಡಿ
Next Story
X