Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಥುವಾ ಪ್ರಕರಣದ ಅಪರಾಧ ಅಮಾನವೀಯ, ಬರ್ಬರ,...

ಕಥುವಾ ಪ್ರಕರಣದ ಅಪರಾಧ ಅಮಾನವೀಯ, ಬರ್ಬರ, ಪೈಶಾಚಿಕ ಕೃತ್ಯ

ತೀರ್ಪಿನಲ್ಲಿ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ17 Jun 2019 9:33 PM IST
share
ಕಥುವಾ ಪ್ರಕರಣದ ಅಪರಾಧ ಅಮಾನವೀಯ, ಬರ್ಬರ, ಪೈಶಾಚಿಕ ಕೃತ್ಯ

ಪಠಾಣಕೋಟ್,ಜೂ.17: ಜಮ್ಮು ಪ್ರದೇಶದ ಕಥುವಾ ಜಿಲ್ಲೆಯ ಅಲೆಮಾರಿ ಸಮುದಾಯದ ಎಂಟರ ಹರೆಯದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರು ಜನರನ್ನು ದೋಷಿಗಳೆಂದು ಕಳೆದ ವಾರ ಘೋಷಿಸಿರುವ ಇಲ್ಲಿಯ ವಿಶೇಷ ನ್ಯಾಯಾಲಯವು,ಕಥುವಾ ಪ್ರಕರಣದಲ್ಲಿಯ ಅಪರಾಧವು ಅತ್ಯಂತ ‘ಲಜ್ಜೆಗೇಡಿ,ಅಮಾನವೀಯ ಮತ್ತು ಬರ್ಬರ ’ ರೀತಿಯಲ್ಲಿ ನಡೆಸಲಾದ ‘ಪೈಶಾಚಿಕ ಮತ್ತು ರಾಕ್ಷಸೀಯ’ ಕೃತ್ಯವಾಗಿದೆ ಮತ್ತು ಇದಕ್ಕಾಗಿ ಅಪರಾಧಿಗಳನ್ನು ಶಿಕ್ಷಿಸುವ ಮೂಲಕ ಆದರ್ಶಪ್ರಾಯ ನ್ಯಾಯವನ್ನು ಒದಗಿಸಬೇಕಿದೆ ಎಂದು ತನ್ನ ತೀರ್ಪಿನಲ್ಲಿ ಹೇಳಿದೆ.

ಸರ್ವೋಚ್ಚ ನ್ಯಾಯಾಲಯದ ನಿರ್ದೇಶದ ಮೇರೆಗೆ ಪ್ರಕರಣದ ವಿಚಾರಣೆಯನ್ನು ನಡೆಸಿದ ಇಲ್ಲಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೂ.10ರಂದು ತೀರ್ಪು ಪ್ರಕಟಿಸಿತ್ತು. ಪ್ರಮುಖ ಆರೋಪಿಗಳಾದ ಸಾಂಜಿರಾಮ,ದೀಪಕ ಖುಜುರಿಯಾ ಮತ್ತು ಪರ್ವೇಶ ಕುಮಾರ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ಇತರ ಐವರಿಗೆ ಐದು ವರ್ಷಗಳ ಶಿಕ್ಷೆಯನ್ನು ವಿಧಿಸಲಾಗಿದೆ.

 ಸ್ವರ್ಗ ಮತ್ತು ನರಕ ಭೌಗೋಳಿಕ ಸ್ಥಳಗಳಲ್ಲ. ನಮ್ಮ ಚಿಂತನೆಗಳು,ಕೃತ್ಯಗಳು ಮತ್ತು ಗುಣಲಕ್ಷಣಗಳು ನಮಗಾಗಿ ಸ್ವರ್ಗ ಅಥವಾ ನರಕದ ಸ್ಥಿತಿಯನ್ನು ಸೃಷ್ಟಿಸುತ್ತವೆ ಎಂದು ನ್ಯಾ.ಡಾ.ತೇಜ್ವಿಂದರ್ ಸಿಂಗ್ ಅವರು ತನ್ನ 432 ಪುಟಗಳ ತೀರ್ಪಿನ ಆರಂಭದಲ್ಲಿ ಬರೆದಿದ್ದಾರೆ.

ಈ ಪೈಶಾಚಿಕ ಮತ್ತು ರಾಕ್ಷಸೀಯ ಅಪರಾಧವು ಸಮಾಜಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ ಎಂದಿರುವ ಅವರು,ನಿಜವಾದ ತಪ್ಪಿತಸ್ಥರನ್ನು ನ್ಯಾಯದ ತೂಗುಗತ್ತಿಯಡಿ ತರುವ ಅಗತ್ಯವಿದೆ ಎಂದಿದ್ದಾರೆ.

ಅಪ್ರಾಪ್ತ ವಯಸ್ಕ ಬಾಲಕಿಯ ವಿರುದ್ಧ ನಡೆಸಲಾಗಿರುವ ಅಪರಾಧವು ಲಜ್ಜೆಗೇಡಿ, ಅಮಾನವೀಯ ಮತ್ತು ಅನಾಗರಿಕ ಕೃತ್ಯವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಯಾವುದೇ ಅಮಾಯಕ ವ್ಯಕ್ತಿಗೆ ಅನ್ಯಾಯವಾಗದಂತಿರಲು ನ್ಯಾಯಾಲಯದ ಮುಂದಿರಿಸಿರುವ ಸಾಕ್ಷಗಳನ್ನು ಒರೆಗೆ ಹಚ್ಚಿ ಪರೀಕ್ಷಿಸಬೇಕಾಗಿತ್ತು ಎಂದಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ಪರ 57 ವಕೀಲರ ದೊಡ್ಡ ದಂಡೇ ವಾದಿಸಿತ್ತು.

ಪ್ರತಿವಾದಿಗಳ ಪರ ವಕೀಲರು ವಾದಿಸಿರುವಂತೆ ಆರೋಪಿಗಳನ್ನು ಸುಳ್ಳೇ ಪ್ರಕರಣದಲ್ಲಿ ಸಿಕ್ಕಿಸಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಮುಸ್ಲಿಂ ಅಲೆಮಾರಿ ‘ಬಕರವಾಲ್ ಸಮುದಾಯ ಮತ್ತು ಸ್ಥಳೀಯ ನಿವಾಸಿಗಳ ನಡುವಿನ ಸಂಬಂಧಗಳು ಹದಗೆಟ್ಟಿದ್ದವು ಎನ್ನುವುದನ್ನು ತೋರಿಸುವ 11 ಪೊಲೀಸ್ ಪ್ರಕರಣಗಳನ್ನು ಪಟ್ಟಿ ಮಾಡಿರುವ ನ್ಯಾಯಾಲಯವು,ಈ ವರ್ಷದ ಜ.10ರಂದು ಅಪರಾಧ ನಡೆದಿದ್ದ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ವಾತಾವರಣವಿತ್ತು ಎನ್ನುವುದನ್ನು ಸಾಬೀತುಗೊಳಿಸಿರುವ ಇತರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಪ್ರದೇಶದ ನಿವಾಸಿಗಳು ಬಕರವಾಲ್ ಸಮುದಾಯವನ್ನು ಒಪ್ಪಿಕೊಂಡಿರಲಿಲ್ಲ ಮತ್ತು ಇದರಿಂದ ಉಭಯರ ನಡುವಿನ ಸಂಬಂಧಗಳು ಹಳಸಿದ್ದವು,ಹೀಗಾಗಿ ಅಪರಾಧದ ಹಿಂದೆ ಬಲವಾದ ಉದ್ದೇಶವಿತ್ತು ಎಂದು ತೀರ್ಪು ಹೇಳಿದೆ.

ತನಿಖೆಯು ದೋಷಪೂರ್ಣವಾಗಿತ್ತು ಎಂಬ ಆರೋಪಿಗಳ ಪರ ವಕೀಲರ ನಿವೇದನೆಯನ್ನು ತಿರಸ್ಕರಿಸಿರುವ ನ್ಯಾ.ಸಿಂಗ್ ಅವರು,ಇದು ಗಂಭೀರ ಕ್ರಿಮಿನಲ್ ವಿಚಾರಣೆಯಾಗಿದೆ ಮತ್ತು ಕಾನೂನು ತಜ್ಞರು ಕೆಲವು ತಾಂತ್ರಿಕ ಆಕ್ಷೇಪಗಳನ್ನು ಎತ್ತಿದ್ದಾರೆಂಬ ಮಾತ್ರಕ್ಕೆ ಆರೋಪಿಗಳಿಗೆ ಸಂಶಯದ ಲಾಭವನ್ನು ನೀಡುವಂತಿಲ್ಲ ಎಂದಿದ್ದಾರೆ.

ಯಾವುದೇ ಆರೋಪಿಯ ವಿರುದ್ದ ನೇರ ಸಾಕ್ಷಗಳಿಲ್ಲ ಎಂಬ ಪ್ರತಿವಾದಿ ಪರ ವಕೀಲರ ವಾದಕ್ಕೆ ಪ್ರತಿಕ್ರಿಯಿಸಿರುವ ತೀರ್ಪು,ಸಾಂದರ್ಭೀಕ ಸಾಕ್ಷಗಳು ಅಪರಾಧವನ್ನು ಸಾಬೀತುಗೊಳಿಸಿವೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X